AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರ ಧರ್ಮವನ್ನು ಅವರವರ ಮನೆಯಲ್ಲಿ ಪಾಲಿಸಲಿ: ಸಾಮರಸ್ಯದ ಬದುಕೇ ಸಾರ್ಥಕ ಜೀವನ; ಕಂಚಿ ಸ್ವಾಮೀಜಿ

ದಕ್ಷಿಣ ಕಾಶಿ ಹಂಪಿ, ಹೊಸಪೇಟೆಯಲ್ಲಿ ನೂರಾರು ದೇಗುಲಗಳು ಇದ್ರೂ ವರ್ಷಕ್ಕೊಂದಾದ್ರು ಹೊಸ ದೇಗುಲ ನಿರ್ಮಾಣ ಮಾಡಲಾಗುತ್ತಿದೆ. ಮಾಜಿ ಶಾಸಕ ಗವಿಯಪ್ಪ ಮತ್ತು ಹೆಚ್.ಆರ್.ಜಿ ಕುಟುಂಬ ಇಲ್ಲಿ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮುಂದೆ ನಿಂತು ಮಾಡೋದು ವಾಡಿಕೆ.

ಅವರ ಧರ್ಮವನ್ನು ಅವರವರ ಮನೆಯಲ್ಲಿ ಪಾಲಿಸಲಿ: ಸಾಮರಸ್ಯದ ಬದುಕೇ ಸಾರ್ಥಕ ಜೀವನ; ಕಂಚಿ ಸ್ವಾಮೀಜಿ
ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮಿ
TV9 Web
| Edited By: |

Updated on:Apr 06, 2022 | 7:43 PM

Share

ವಿಜಯನಗರ: ಅವರವರ ಧರ್ಮ (Religion) ಅವರರವರ ಮನೆಯಲ್ಲಿ ಆಚರಣೆ ಮಾಡಿಲಿ. ಆದ್ರೇ ದೇಶ ಅಂತ ಬಂದ್ರೆ ಎಲ್ಲರೂ ಒಂದಾಗಬೇಕು ಎಂದು ಶ್ರೀ ಕಂಚಿ ಕಾಮಕೋಟಿ‌ ಪೀಠಾಧೀಶ್ವರ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮಿಗಳು ಹೇಳಿದ್ದಾರೆ. ಹೊಸಪೇಟೆಯಲ್ಲಿ ಕಂಚಿ ಕಾಮಾಕ್ಷಿ ದೇವಾಲಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು, ಪ್ರಸ್ತುತ ವಿದ್ಯಮಾನಗಳ ಕುರಿತು ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸ್ವಾಮೀಜಿಗಳು ಸಾಮರಸ್ಯಕ್ಕೆ ಹೆಸರು ವಾಸಿಯಾಗಿರೋದು ಕರ್ನಾಟಕದಲ್ಲಿ ಎಲ್ಲ ಜಾತಿ ಜನಾಂಗದವರು ಒಂದಾಗಿರಿ ಎನ್ನುವ ಸಂದೇಶ ನೀಡಿದ್ರು. ಎಲ್ಲರೂ ಸನಾತನ ಧರ್ಮವನ್ನು ಸಂರಕ್ಷಣೆ ಮಾಡಬೇಕು. ದಕ್ಷಿಣ ಭಾರತದಲ್ಲಿ ಧರ್ಮಕ್ಕೆ ಪ್ರತ್ಯೇಕತೆ ಭಾವನೆ ಇದೆ. ದೊಡ್ಡ- ದೊಡ್ಡ ವ್ಯಕ್ಯಿಗಳೆಲ್ಲ ತಪಸ್ಸು ಮಾಡಿರೋ ಕರ್ನಾಟಕ ಸಾಮರಸ್ಯಕ್ಕೆ ಮತ್ತೊಂದು ಧಾರ್ಮಿಕ ಕ್ಷೇತ್ರವಾಗಿದೆ. ಜಗಳ, ದ್ವೇಷ, ಅಹಂಕಾರ ಯಾರಲ್ಲೂ ಇರಬಾರದು. ಎಲ್ಲರಲ್ಲೂ ವಿನಮ್ರತೆ ಇರಬೇಕು ಹೀಗಾಗಿ ಕರ್ನಾಟಕದಲ್ಲಿ ಎಲ್ಲಿ ಹೋದ್ರೂ ಅನ್ನದಾನ ಮಾಡ್ತಾರೆ ಎಂದರು.

ಭಕ್ತರಿಂದ ತುಂಬಿತುಳುಕಿದ ದೇಗುಲ:

ದಕ್ಷಿಣ ಕಾಶಿ ಹಂಪಿ, ಹೊಸಪೇಟೆಯಲ್ಲಿ ನೂರಾರು ದೇಗುಲಗಳು ಇದ್ರೂ ವರ್ಷಕ್ಕೊಂದಾದ್ರು ಹೊಸ ದೇಗುಲ ನಿರ್ಮಾಣ ಮಾಡಲಾಗುತ್ತಿದೆ. ಮಾಜಿ ಶಾಸಕ ಗವಿಯಪ್ಪ ಮತ್ತು ಹೆಚ್.ಆರ್.ಜಿ ಕುಟುಂಬ ಇಲ್ಲಿ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮುಂದೆ ನಿಂತು ಮಾಡೋದು ವಾಡಿಕೆ. ಈಗಾಗಲೇ ಹೊಸಪೇಟೆಯಲ್ಲಿ ಬೃಹತ್ ರಾಘವೇಂದ್ರ ಸ್ವಾಮಿ ದೇಗುಲ ನಿರ್ಮಾಣ ಮಾಡಲಾಗಿದ್ದು, ಇದೀಗ ಇದರ ಎದುರಲ್ಲಿಯೇ ಕಂಚಿ ಕಾಮಾಕ್ಷಿ ದೇಗುಲ ನಿರ್ಮಾಣ ಮಾಡಲಾಗಿದೆ.‌ ಉದ್ಘಾಟನೆ ಹಿನ್ನೆಲೆ ಇಂದು ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದ್ರು. ಇನ್ನೂ ಕಂಚಿಯಲ್ಲಿ ಇರೋ ದೇವಸ್ಥಾನ ಮಾದರಿಯಲ್ಲಿಯೇ ನಿರ್ಮಾಣ ಮಾಡಿರೋದು ವಿಶೇಷವಾಗಿದೆ.

ವರದಿ: ವೀರಪ್ಪ ದಾನಿ, ಬಳ್ಳಾರಿ 
ಇದನ್ನೂ ಓದಿ;

KGF 2: ಕರ್ನಾಟಕದಲ್ಲಿ ‘ಕೆಜಿಎಫ್ 2’ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಯಾವಾಗ ಆರಂಭ? ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ

Andre Russell: ಒಂದೇ ತಂಡದಲ್ಲಿ ಆಂಡ್ರೆ ರಸೆಲ್, ಕೀರನ್ ಪೊಲಾರ್ಡ್​

Published On - 7:42 pm, Wed, 6 April 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ