AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ, ಜಾತಿ ನಿಂದನೆ ಕೇಸ್​: ಮುನಿರತ್ನ ಬಂಧನದ ನಂತರ ಮತ್ತೊಂದು ಆಡಿಯೋ ವೈರಲ್

ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಶಾಸಕ ಮುನಿರತ್ನ ಆಡಿಯೋ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಗುತ್ತಿಗೆದಾರನ ದೂರು ಆಧರಿಸಿ, ನಿನ್ನೆ ಸಂಜೆಯೇ ಮುನಿರತ್ನರನ್ನ ಪೊಲೀಸರು ಬಂಧಿಸಿದ್ದರು. ಸದ್ಯ ಇದೆಲ್ಲದರ ಮಧ್ಯೆ ಮತ್ತೊಂದು ಆಡಿಯೋ ವೈರಲ್​ ಆಗಿದೆ. ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.

ಜೀವ ಬೆದರಿಕೆ, ಜಾತಿ ನಿಂದನೆ ಕೇಸ್​: ಮುನಿರತ್ನ ಬಂಧನದ ನಂತರ ಮತ್ತೊಂದು ಆಡಿಯೋ ವೈರಲ್
ಜೀವ ಬೆದರಿಕೆ, ಜಾತಿ ನಿಂದನೆ ಕೇಸ್​: ಮುನಿರತ್ನ ಬಂಧನದ ನಂತರ ಮತ್ತೊಂದು ಆಡಿಯೋ ವೈರಲ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 15, 2024 | 9:37 PM

Share

ಬೆಂಗಳೂರು, ಸೆಪ್ಟೆಂಬರ್​ 15: ಗುತ್ತಿಗೆದಾರನಿಗೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಕೇಸ್‌ನಲ್ಲಿ ಶಾಸಕ ಮುನಿರತ್ನ (munirathna) ಬಂಧನವಾಗಿದ್ದು, ನಿನ್ನೆ ತಡರಾತ್ರಿಯೇ ಜಡ್ಜ್ ಎದುರು ಹಾಜರು ಪಡಿಸಲಾಗಿತ್ತು. ಸದ್ಯ ಮುನಿರತ್ನ ಬಂಧನದ ಒಂದು ದಿನದ ಬಳಿಕ ಮತ್ತೊಂದು ಆಡಿಯೋ ವೈರಲ್​ ಆಗಿದೆ. ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ, ಚಲುವರಾಜು ಮತ್ತು ಸ್ನೇಹಿತನದ್ದು ಎನ್ನಲಾದ ಆಡಿಯೋ ಇದೀಗ ವೈರಲ್​ ಆಗಿದೆ.

ಈಗಾಗಲೇ ಆಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆಡಿಯೋದಲ್ಲಿ ಚಲುವರಾಜು ಮತ್ತು ಸ್ನೇಹಿತ ಸಹ ಮಾತಾಡಿರುವುದು ಇದೆ. ಸದ್ಯ ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಪೊಲೀಸರ ತನಿಖೆ ವೇಳೆಯಲ್ಲೂ ಈ ಆಡಿಯೋ ಬಗ್ಗೆ ಪ್ರಸ್ತಾಪವಾಗಿಲ್ಲ ಎನ್ನಲಾಗುತ್ತಿದೆ.

ಧ್ವನಿ ಅವರದ್ದೇ ಎಂದು ಸಾಬೀತಾದರೆ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಎಂದ  ಡಾ.ಜಿ.ಪರಮೇಶ್ವರ್

ಪ್ರಕರಣ ಬಗ್ಗೆ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಗುತ್ತಿಗೆದಾರ ಚಲುವರಾಜ್ ದೂರಿನ ಆಧಾರದಲ್ಲಿ ಮುನಿರತ್ನ ಬಂಧನ ಮಾಡಲಾಗಿದೆ. ಒಂದು ಸಮುದಾಯ, ಒಂದು ಜಾತಿ ಹೆಸರು ಹೇಳಿ ನಿಂದಿಸಿದ್ದಾರೆ. ಆರೋಪಿ ಮುನಿರತ್ನ ಬಂಧಿಸಿ ಜಡ್ಜ್ ಮುಂದೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಜಡ್ಜ್ 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ಆಡಿಯೋಗಳನ್ನ ಸೃಷ್ಟಿಸುತ್ತಾರೆ: ಪರೋಕ್ಷವಾಗಿ ಮುನಿರತ್ನ ಆಡಿಯೋ ಡೂಪ್ಲಿಕೇಟ್ ಎಂದ ಯತ್ನಾಳ್

ಆರೋಪಿ ಶಾಸಕ ಮುನಿರತ್ನ ನಾನು ಆ ರೀತಿ ಮಾತಾಡಿಲ್ಲ ಅಂತಿದ್ದಾರೆ. ಆಡಿಯೋ ಬಗ್ಗೆ ದೃಢಪಡಿಸಿಕೊಳ್ಳಲು ಎಫ್​​ಎಸ್​ಎಲ್​ಗೆ ಕಳುಹಿಸಲಾಗುವುದು. ಒಂದು ವೇಳೆ ಧ್ವನಿ ಅವರಲ್ಲ ಅಂದರೆ ಏನ್ಮಾಡಬೇಕು ಮಾಡುತ್ತಾರೆ. ಒಂದು ವೇಳೆ ಧ್ವನಿ ಅವರದ್ದೇ ಎಂದು ಸಾಬೀತಾದರೆ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ ಎಂದಿದ್ದಾರೆ.

ಜಾತಿ ನಿಂದನೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ: ಭೈರತಿ ಸುರೇಶ್​ 

ಸಚಿವ ಭೈರತಿ ಸುರೇಶ್​ ಮಾತನಾಡಿದ್ದು, ಬಿಜೆಪಿ ಶಾಸಕ ಮುನಿರತ್ನ ನಾಯ್ಡುರದ್ದು ನಾನ್​ಸೆನ್ಸ್​ ಹೇಳಿಕೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಮುನಿರತ್ನ ಬೈದು ದುಡ್ಡಿಗೆ ಬೇಡಿಕೆ ಇಟ್ಟಿದ್ದಾರೆ. ಸಿಎಂ, ಡಿಸಿಎಂ ಮಾಡಿದ್ದುಣ್ಣೋ ಮಾರಾಯಾ ಅಂದಿದ್ದಾರೆ. ಆಡಿಯೋ FSLಗೆ ಕಳುಹಿಸಿ ಪರಿಶೀಲನೆ ನಡೆಸಲಾಗುತ್ತೆ. ಜಾತಿ ನಿಂದನೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Sun, 15 September 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?