AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದಂಗಡಿಗಳಲ್ಲಿ ಎಂಆರ್​ಪಿ ದರದಲ್ಲಿ ಮದ್ಯ ಮಾರಾಟ ಕಡ್ಡಾಯ, ರಾಯಚೂರಿನ ಹಲವೆಡೆ ಅಬಕಾರಿ ಅಧಿಕಾರಿಗಳ ದಾಳಿ

ಮದ್ಯದಂಗಡಿಗಳಲ್ಲಿ ಎಂಆರ್​ಪಿ ದರದಲ್ಲಿ ಮದ್ಯ ಮಾರಾಟ ಮಾಡುವುದು ಕಡ್ಡಾಯವಾಗಿದೆ. ಈ ನಿಯಮಗಳನ್ನು ಅನುಸರಿಸದ ರಾಯಚೂರಿನ ಹಲವು ಮದ್ಯ ಮಳಿಗೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರ್ನಾಟಕದೆಲ್ಲೆಡೆ ಮದ್ಯ, ಅದರಲ್ಲೂ ಬಿಯರ್ ಮಾರಾಟ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಎಂಆರ್​​ಪಿ ದರದ ಮಾರಾಟದ ಬಗ್ಗೆ ನಿಗಾ ಇಟ್ಟಿದ್ದಾರೆ. ಮದ್ಯದ ಮಳಿಗೆಗಳಿಗೆ ಎಂಆರ್ ಪಿ ದರ ಕಡ್ಡಾಯದ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ಇದು ಮದ್ಯ ಪ್ರಿಯರಿಗೆ ಖುಷಚಿ ಕೊಟ್ಟಿದೆ.

ಮದ್ಯದಂಗಡಿಗಳಲ್ಲಿ ಎಂಆರ್​ಪಿ ದರದಲ್ಲಿ ಮದ್ಯ ಮಾರಾಟ ಕಡ್ಡಾಯ, ರಾಯಚೂರಿನ ಹಲವೆಡೆ ಅಬಕಾರಿ ಅಧಿಕಾರಿಗಳ ದಾಳಿ
ಮದ್ಯಪಾನ
ಭೀಮೇಶ್​​ ಪೂಜಾರ್
| Updated By: ನಯನಾ ರಾಜೀವ್|

Updated on: Aug 14, 2025 | 12:46 PM

Share

ರಾಯಚೂರು, ಆಗಸ್ಟ್​ 14: ಮದ್ಯದಂಗಡಿಗಳಲ್ಲಿ ಎಂಆರ್​ಪಿ ದರದಲ್ಲಿ ಮದ್ಯ ಮಾರಾಟ ಮಾಡುವುದು ಕಡ್ಡಾಯವಾಗಿದೆ. ಈ ನಿಯಮಗಳನ್ನು ಅನುಸರಿಸದ ರಾಯಚೂರಿನ ಹಲವು ಮದ್ಯ ಮಳಿಗೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರ್ನಾಟಕದೆಲ್ಲೆಡೆ ಮದ್ಯ, ಅದರಲ್ಲೂ ಬಿಯರ್ ಮಾರಾಟ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಎಂಆರ್​​ಪಿ ದರದ ಮಾರಾಟದ ಬಗ್ಗೆ ನಿಗಾ ಇಟ್ಟಿದ್ದಾರೆ. ಮದ್ಯದ ಮಳಿಗೆಗಳಿಗೆ ಎಂಆರ್ ಪಿ ದರ ಕಡ್ಡಾಯದ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ಇದು ಮದ್ಯ ಪ್ರಿಯರಿಗೆ ಖುಷಚಿ ಕೊಟ್ಟಿದೆ.

ಸಿಎಲ್ -2 ಅಡಿಯ ವೈನ್ ಶಾಪ್ ಗಳು, ಎಂಎಸ್ ಐಎಲ್ ಸಂಸ್ಥೆಯ ಸಿಎಲ್-11(ಸಿ) ಅಡಿಯ ಮಳಿಗೆಗಳಲ್ಲಿ ಎಂಆರ್ ಪಿ‌ ದರ ಕಡ್ಡಾಯವಾಗಿರುತ್ತದೆ. ಎಂಆರ್ ಪಿಗಿಂತ ಹೆಚ್ಚಿನ ದರ ವಸೂಲಿ ಮಾಡಿದರೆ ದೂರು ನೀಡಲು ಗ್ರಾಹಕರಿಗೆ ಸಲಹೆ ನೀಡಲಾಗಿದೆ.

ಎಂಎಸ್ ಐಎಲ್ ಹಾಗೂ ವೈನ್ ಶಾಪ್​ ಗಳ ಮೇಲೆ ಅಬಕಾರಿ ಇಲಾಖೆ ನಿಗಾ ಇರಿಸಿದೆ. ರಾಯಚೂರಿನಲ್ಲಿ ಅಬಕಾರಿ ಅಧಿಕಾರಿಗಳಿಂದ ವಿವಿಧ ಮದ್ಯದ ಮಳಿಗೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಎಂಆರ್ ಪಿ ದರದ ನಿಯಮ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಕೆಲ ವೈನ್ ಶಾಪ್ ಗಳಲ್ಲಿ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ಪತ್ತೆಯಾಗಿದೆ.

ಮತ್ತಷ್ಟು ಓದಿ: ಮಧ್ಯಪ್ರದೇಶ: ಹೊಸ ಅಬಕಾರಿ ನೀತಿ, 19 ನಗರಗಳಲ್ಲಿ ಮದ್ಯ ಮಾರಾಟ ನಿಷೇಧ

ಎಂಆರ್ ಪಿ ದರಕ್ಕಿಂತಲೂ ಗ್ರಾಹಕರಿಂದ 60-80 ರೂ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ. ಮದ್ಯದ ಮಳಿಗೆಗಳ ನಿಯಮ ಉಲ್ಲಂಘಟನೆಗೆ 50 ಸಾವಿರ ವರೆಗೆ ದಂಡ ಹಾಗೂ ಸರಣಿ ಉಲ್ಲಂಘನೆಗೆ ಲೈಸೆನ್ಸ್ ರದ್ದತಿಗೆ ಶಿಫಾರಸ್ಸು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ವೈನ್ ಶಾಪ್ ವೊಂದರಲ್ಲಿ ಎಂಆರ್ ಪಿ ದರ ಉಲ್ಲಂಘನೆ ಹಿನ್ನೆಲೆ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ್ದು, ವೈನ್​ ಶಾಪ್​​ನಲ್ಲಿ ಇಬ್ಬರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!