AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಲ್ಲಿ ಮದ್ಯ ಖಾಲಿ! ಇಂದು ಸಂಜೆಯಿಂದ ಮದ್ಯ ಪ್ರಿಯರಿಗೆ ಇಲ್ಲ ಎಣ್ಣೆ

ನಿನ್ನೆಯಿಂದ ರಾಜ್ಯದ ಎಣ್ಣೆ ಅಂಗಡಿಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ಕೆಲ ಅಂಗಡಿಗಳಲ್ಲಿ ಅಲ್ಪ ಸ್ಪಲ್ಪ ಎಣ್ಣೆ ಇದೆ. ಇಂದು (ಏಪ್ರಿಲ್ 5) ಸಂಜೆ ವೇಳೆಗೆ ರಾಜ್ಯದ ಎಲ್ಲಾ ಅಂಗಡಿಗಳಲ್ಲಿ ಎಣ್ಣೆ ಸಂಪೂರ್ಣ ಖಾಲಿಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಲ್ಲಿ ಮದ್ಯ ಖಾಲಿ! ಇಂದು ಸಂಜೆಯಿಂದ ಮದ್ಯ ಪ್ರಿಯರಿಗೆ ಇಲ್ಲ ಎಣ್ಣೆ
ಆಲ್ಕೋಹಾಲ್​
TV9 Web
| Updated By: Digi Tech Desk|

Updated on:Apr 05, 2022 | 3:42 PM

Share

ಬೆಂಗಳೂರು: ರಾಜ್ಯದ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ (Bar And Restaurants) ಮದ್ಯ (Alcohol) ಖಾಲಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂತನ ಸಾಫ್ಟ್​ವೇರ್​ ಅಪ್​ಡೇಟ್ ಆಗಿರುವ ಹಿನ್ನೆಲೆ ಬಿಲ್ ಮಾಡಲು ಆಗದೆ ಮದ್ಯ ಪೂರೈಕೆ ಆಗುತ್ತಿಲ್ಲ. ಕೆಎಸ್​​ಬಿಸಿಎಲ್​ನಿಂದ​ (KSBCL ) ಬಾರ್​ಗಳಿಗೆ ಮದ್ಯ ಪೂರೈಕೆಯಾಗುತ್ತಿಲ್ಲ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆಯಿಂದ ರಾಜ್ಯದ ಎಣ್ಣೆ ಅಂಗಡಿಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ಕೆಲ ಅಂಗಡಿಗಳಲ್ಲಿ ಅಲ್ಪ ಸ್ಪಲ್ಪ ಎಣ್ಣೆ ಇದೆ. ಇಂದು (ಏಪ್ರಿಲ್ 5) ಸಂಜೆ ವೇಳೆಗೆ ರಾಜ್ಯದ ಎಲ್ಲಾ ಅಂಗಡಿಗಳಲ್ಲಿ ಎಣ್ಣೆ ಸಂಪೂರ್ಣ ಖಾಲಿಯಾಗುವ ಸಾಧ್ಯತೆಯಿದೆ.

ನಿನ್ನೆಯಿಂದ ರಾಜ್ಯದಲ್ಲಿ ಮದ್ಯ ಸಿಗುತ್ತಿಲ್ಲ. ನಿನ್ನೆಯಿಂದ ರಾಜ್ಯದ ಯಾವುದೇ CL-9 ಬಾರ್ ಅಂಡ್ ರೆಸ್ಟೋರೆಂಟ್, CL- 2 ವೈನ್ ಸ್ಟೋರ್, CL- 11C  ಎಂಎಸ್ಐಎಲ್​ಗೆ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದಿಂದ ಸಪ್ಲೈ ಆಗುತ್ತಿಲ್ಲ. ಕೆಎಸ್​ಬಿಸಿಎಲ್​ನಿಂದ ನಿಂದ ಪ್ರತಿದಿನ ಪೂರೈಕೆ ಆಗುತ್ತಿತ್ತು. ಆದರೆ ಹೊಸ ಬಿಲ್ಲಿಂಗ್ (web indent) ವ್ಯವಸ್ಥೆಯಿಂದ ಕೆಎಸ್​ಬಿಸಿಎಲ್​​ನಿಂದ ಬಿಲ್ ಆಗುತ್ತಿಲ್ಲ. ಹೀಗಾಗಿ ಮದ್ಯಪಾನ  ಎಣ್ಣೆ ಸಿಗುತ್ತಿಲ್ಲ.

ನಾಳೆ ಪ್ರತಿಭಟನೆ: ನಿನ್ನೆಯಿಂದ Web Indenting ಮೂಲಕ ಮದ್ಯ ಖರೀದಿಸಲು ಎಸ್​ಬಿಸಿಎಲ್​​ ಆದೇಶ ನೀಡಿತ್ತು. ಆದರೆ ಈ ಪದ್ಧತಿಯಿಂದ ಮದ್ಯ ಸಿಗುತ್ತಿಲ್ಲ. ಮದ್ಯ ಖರೀದಿಸಲು ಸನ್ನದುದಾರರಿಗೆ ತೊಂದರೆಯಾಗುತ್ತಿದೆ. ಒಂದು ತಿಂಗಳವರೆಗೆ ಹೊಸ ಪದ್ಧತಿ ಜೊತೆಗೆ ಹಳೆ ಪದ್ಧತಿ ಚಾಲ್ತಿಯಲ್ಲಿರುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮದ್ಯ ಇಲ್ಲದೆ ಸನ್ನದುದಾರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಒಂದು ತಿಂಗಳ ಮಟ್ಟಿಗಾದರೂ ಹೊಸ ಪದ್ಧತಿಯೊಂದಿಗೆ ಹಳೆ ಪದ್ಧತಿ ಚಾಲ್ತಿಯಲ್ಲಿ ಇರುವಂತೆ ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಲು ಬೆಂಗಳೂರು ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ತೀರ್ಮಾನಿಸಿದೆ. ನಾಳೆ ರಾಜ್ಯದ ಎಲ್ಲಾ ಕೆಎಸ್​ಬಿಸಿಎಲ್​ ಡಿಪೋಗಳ ಎದುರು ಧರಣಿ ನಡೆಸಲಿದ್ದಾರೆ.

Alcohol

ಪತ್ರಿಕಾ ಪ್ರಕಟಣೆ

ಇದನ್ನೂ ಓದಿ

Ranbir- Alia Wedding: ಮದುವೆಗೂ ಮುನ್ನ ರಣಬೀರ್ ಬ್ಯಾಚುಲರ್ ಪಾರ್ಟಿ; ಆಹ್ವಾನಿತರ ಹೆಸರು ಬಹಿರಂಗ

ಮತ್ತೆ ಟ್ರೋಲ್ ಆದ ಪೂಜಾ ಹೆಗ್ಡೆ; ವಿಜಯ್ ಚಿತ್ರದಲ್ಲಿ ಈ ನಟಿಯ ಪಾತ್ರಕ್ಕಿಲ್ಲ ತೂಕ?

Published On - 2:02 pm, Tue, 5 April 22

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?