AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Clearance ಸೋಮವಾರದಿಂದ ಎಣ್ಣೆ ಅಂಗಡಿಗಳು ಓಪನ್, ಸಿದ್ಧತೆ ಹೇಗಿದೆ ನೋಡಿ!

ಬೆಂಗಳೂರು: ಕೊರೊನಾ ವೈರಸ್​ ಲಾಕ್​ಡೌನ್​ ಮಧ್ಯೆಯೇ ರಾಜ್ಯ ಸರ್ಕಾರ ಸೋಮವಾರದಿಂದ ಮದ್ಯ ಮಾರಾಟಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ನಾಳೆಯಿಂದ ಎಣ್ಣೆ ಸಿಗುತ್ತೆ ಅಂತ ಹೇಳಿದ್ದೇ ತಡ, ಈಗಿನಿಂದಲೇ ಕುಡುಕರು ಬಾರ್​ಗಳ ಮುಂದೆ ಸಾಲು ಸಾಲಾಗಿ ಶಿಸ್ತಿನಿಂದ ನಿಂತುಬಿಟ್ಟಿದ್ದಾರೆ. ಮಾಲೀಕರು ಸಹ MSIL ಮಳಿಗೆ, ವೈನ್ ಶಾಪ್‌ಗಳ ಬಳಿ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಒಬ್ಬರಿಗೆ 2.3ಲೀಟರ್ ಮದ್ಯ ಖರೀದಿಗೆ ಅವಕಾಶ ಕೊಟ್ಟಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಅಂಗಡಿಗೆ ಬರೋದು ಕಡ್ಡಾಯವಾಗಿದೆ. ಕೆಲವೆಡೆ ಮದ್ಯದಂಗಡಿಗಳ ಬಳಿ ಕಟ್ಟಿಗೆ […]

Stock Clearance ಸೋಮವಾರದಿಂದ ಎಣ್ಣೆ ಅಂಗಡಿಗಳು ಓಪನ್, ಸಿದ್ಧತೆ ಹೇಗಿದೆ ನೋಡಿ!
ಸಾಧು ಶ್ರೀನಾಥ್​
|

Updated on: May 03, 2020 | 5:26 PM

Share

ಬೆಂಗಳೂರು: ಕೊರೊನಾ ವೈರಸ್​ ಲಾಕ್​ಡೌನ್​ ಮಧ್ಯೆಯೇ ರಾಜ್ಯ ಸರ್ಕಾರ ಸೋಮವಾರದಿಂದ ಮದ್ಯ ಮಾರಾಟಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ನಾಳೆಯಿಂದ ಎಣ್ಣೆ ಸಿಗುತ್ತೆ ಅಂತ ಹೇಳಿದ್ದೇ ತಡ, ಈಗಿನಿಂದಲೇ ಕುಡುಕರು ಬಾರ್​ಗಳ ಮುಂದೆ ಸಾಲು ಸಾಲಾಗಿ ಶಿಸ್ತಿನಿಂದ ನಿಂತುಬಿಟ್ಟಿದ್ದಾರೆ.

ಮಾಲೀಕರು ಸಹ MSIL ಮಳಿಗೆ, ವೈನ್ ಶಾಪ್‌ಗಳ ಬಳಿ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಒಬ್ಬರಿಗೆ 2.3ಲೀಟರ್ ಮದ್ಯ ಖರೀದಿಗೆ ಅವಕಾಶ ಕೊಟ್ಟಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಅಂಗಡಿಗೆ ಬರೋದು ಕಡ್ಡಾಯವಾಗಿದೆ. ಕೆಲವೆಡೆ ಮದ್ಯದಂಗಡಿಗಳ ಬಳಿ ಕಟ್ಟಿಗೆ ಕಟ್ಟುತ್ತಿದ್ದರೆ, ಮತ್ತೆ ಕೆಲವೆಡೆ ಮಾರ್ಕಿಂಗ್ ಕಾರ್ಯ ಶುರುಮಾಡಿದ್ದಾರೆ. ಇನ್ನೂ ಕೆಲವೆಡೆ ಕುಡುಕರನ್ನು ಕಂಟ್ರೋಲ್ ಮಾಡಲು ಸೆಕ್ಯೂರಿಟಿ ಗಾರ್ಡ್ ನೇಮಿಸಲು ಚಿಂತನೆ ನಡೆಸಿದ್ರೆ, ಮತ್ತೆ ಕೆಲೆವೆಡೆ ಬ್ಯಾರಿಕೇಡ್ ಅಳವಡಿಸಲು ಮುಂದಾಗಿದ್ದಾರೆ.

ಅಂದಹಾಗೆ ಈ ಭರ್ಜರಿ ಎಣ್ಣೆ ಮಾರಾಟ ಗ್ರೀನ್ ಜೋನ್ ಮತ್ತು ಆರೆಂಜ್ ಜೋನ್​ನಲ್ಲಿ ಮಾತ್ರ. ಹಾಗಾಗಿ ರೆಡ್ ಜೋನ್​ನಲ್ಲಿರುವ ಎಣ್ಣೆ ಪ್ರಿಯರು ಶ್ಯಾನೆ ಬೇಜಾರಿನಲ್ಲಿದ್ದಾರೆ. ತಮ್ಮ ಏರಿಯಾದಲ್ಲಿ ಮದ್ಯ ಮಾರಾಟ ಇಲ್ಲ ಅಂತಾ ಅಲ್ಲ. ಆದ್ರೆ.. ತಮ್ಮ ಏರಿಯಾ ರೆಡ್ ಜೋನ್​ನಿಂದ ಮುಕ್ತಿ ಪಡೆದು ಎಣ್ಣೆ ಮಾರಾಟಕ್ಕೆ ಗ್ರೀನ್ ಸಿಗ್ನಲ್ ಪಡೆಯುವ ವೇಳೆಗೆ ಈಗಿರುವ ಗ್ರೀನ್ ಜೋನ್ ಎಣ್ಣೆಯಾಳುಗಳು ಎಲ್ಲಾ ಸ್ಟಾಕ್ ಕ್ಲಿಯರ್ ಮಾಡಿ, ತಮಗೆಲ್ಲಿ ತೊಟ್ಟು ಸಹ ಉಳಿಸಲ್ಲವೋ ಅಂತಾ ಶ್ಯಾನೆ ಪರೆಶಾನ್​ನಲ್ಲಿದ್ದಾರೆ.

First come first serve: ಬಲ್ಲ ಮೂಲಗಳ ಪ್ರಕಾರ ಲಾಕ್ ಡೌನ್-3 ಅವಧಿಯಲ್ಲಿ ಈ ಎಣ್ಣೆ ಮಾರಾಟ ಸ್ಟಾಕ್ ಇರುವರೆಗೆ ಮಾತ್ರ ಎನ್ನಲಾಗಿದೆ.

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು