ಕನ್ನಡ ಕಲಿಸದ ಪ್ರತಿಷ್ಠಿತ ಶಾಲೆಗಳ ಪಟ್ಟಿ ರಿಲೀಸ್

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಶಾಲೆಗಳು ಕನ್ನಡ ಭಾಷೆಯನ್ನು ಕಲಿಸದೆ ನಿರ್ಲಕ್ಷ್ಯ ಮಾಡಿರುವ ಬಗ್ಗೆ ವರದಿ ಬಿಡುಗಡೆಯಾಗಿದೆ. ಸರ್ವ ಶಿಕ್ಷ ಅಭಿಯಾನ ಕಚೇರಿಯಲ್ಲಿ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಬಗ್ಗೆ ಸಭೆ ಜರುಗಿತು. ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಕೇವಲ 4 ಶಾಲೆಗಳು ಕನ್ನಡ ಭಾಷೆ ಕಲಿಸುತ್ತಿಲ್ಲಾ ಎಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಡಿಡಿಪಿಐಗಳು ಪೇಚಿಗೆ ಸಿಲುಕಿದರು. ಕನ್ನಡ ಕಲಿಸದ […]

ಕನ್ನಡ ಕಲಿಸದ ಪ್ರತಿಷ್ಠಿತ ಶಾಲೆಗಳ ಪಟ್ಟಿ ರಿಲೀಸ್
ಸಾಧು ಶ್ರೀನಾಥ್​

Updated on: Nov 13, 2019 | 2:29 PM

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಶಾಲೆಗಳು ಕನ್ನಡ ಭಾಷೆಯನ್ನು ಕಲಿಸದೆ ನಿರ್ಲಕ್ಷ್ಯ ಮಾಡಿರುವ ಬಗ್ಗೆ ವರದಿ ಬಿಡುಗಡೆಯಾಗಿದೆ.

ಸರ್ವ ಶಿಕ್ಷ ಅಭಿಯಾನ ಕಚೇರಿಯಲ್ಲಿ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಬಗ್ಗೆ ಸಭೆ ಜರುಗಿತು. ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

ಕೇವಲ 4 ಶಾಲೆಗಳು ಕನ್ನಡ ಭಾಷೆ ಕಲಿಸುತ್ತಿಲ್ಲಾ ಎಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಡಿಡಿಪಿಐಗಳು ಪೇಚಿಗೆ ಸಿಲುಕಿದರು. ಕನ್ನಡ ಕಲಿಸದ 44 ಶಾಲೆಗಳ ಪಟ್ಟಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಸಂಬಂಧ ಶಾಲೆಗಳ ಮಾನ್ಯತೆ ರದ್ದು ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

Published On - 1:55 pm, Wed, 13 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us