AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ

ನವೆಂಬರ್ 13 ರಂದು ನಡೆಯಲಿರುವ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಉಪಚುನಾವಣೆಗಳಿಗೆ ಬಿಜೆಪಿ 40 ಜನ ಪ್ರಮುಖ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಮುಂತಾದವರು ಈ ಪಟ್ಟಿಯಲ್ಲಿದ್ದಾರೆ. ನಾಯಕತ್ವ ವಿರುದ್ಧ ಧ್ವನಿಯೆತ್ತಿದ್ದವರಿಗೆ ಪಟ್ಟಿಯಲ್ಲಿ ಸ್ಥಾನ ನೀಡಿಲ್ಲ.

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ
ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ
ಕಿರಣ್​ ಹನಿಯಡ್ಕ
| Edited By: |

Updated on:Oct 29, 2024 | 10:58 PM

Share

ಬೆಂಗಳೂರು, ಅಕ್ಟೋಬರ್ 29: ನ.13ರಂದು ನಡೆಯಲಿರುವ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಉಪಚುನಾವಣೆ (by-elections) ನಡೆಯಲಿದೆ. ಈಗಾಗಲೇ ಮೂರು ಕ್ಷೇತ್ರದಲ್ಲಿ ಮೂರು ಪಕ್ಷಗಳು ಕಸರತ್ತು ಮಾಡುತ್ತಿವೆ. ಅಭ್ಯರ್ಥಿಗಳು ಈಗಾಗಲೇ ಪ್ರಚಾರ ಕೂಡ ಆರಂಭಿಸಿದ್ದಾರೆ. ಈ ಮಧ್ಯೆ ಬಿಜೆಪಿ ತನ್ನ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಮೂರು ಕ್ಷೇತ್ರದ ಬೈಎಲೆಕ್ಷನ್‌ಗೆ ಅಖಾಡ ಸಜ್ಜಾಗಿದೆ. ಮೂರು ಕ್ಷೇತ್ರದಲ್ಲಿ ಗೆಲುವಿಗಾಗಿ ಬಿಜೆಪಿ ನಾನಾ ಕಸರತ್ತು ಮಾಡುತ್ತಿದೆ. ಸದ್ಯ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಲಾಗಿದೆ.

ಬಿಜೆಪಿಯ 40 ಸ್ಟಾರ್ ಪ್ರಚಾರಕರು

ಬಿ.ಎಸ್​.ಯಡಿಯೂರಪ್ಪ, ರಾಧಾಮೋಹನ್ ದಾಸ್ ಅಗರ್ವಾಲ್, ಪ್ರಹ್ಲಾದ್ ಜೋಶಿ, ಬಿ.ವೈ.ವಿಜಯೇಂದ್ರ, ಆರ್​.ಅಶೋಕ್, ಸುಧಾಕರ್ ರೆಡ್ಡಿ, ಸಿ.ಎನ್​.ಮಂಜುನಾಥ್, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಸಿ.ಟಿ.ರವಿ, ಜಗದೀಶ್ ಶೆಟ್ಟರ್, ತಾರಾ ಅನುರಾಧ, ಶ್ರುತಿ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ

ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಪ್ರಮುಖರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದ್ದಕ್ಕೆ ನಾಯಕತ್ವದ ವಿರುದ್ಧ ಧ್ವನಿಯೆತ್ತಿದ್ದು ಕಾರಣ ಎನ್ನಲಾಗುತ್ತಿದೆ.

ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪುತ್ರ ಭರತ್​ ಬೊಮ್ಮಾಯಿಗೆ ಟಿಕೆಟ್​ ಸಿಕ್ಕಿದ್ದರೆ, ಸಂಡೂರಿನಲ್ಲಿ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್​ ಕೊಡಲಾಗಿದೆ. ಹೈವೋಲ್ಟೇಜ್ ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್​ ಕುಮಾರಸ್ವಾಮಿಗೆ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​​ನಿಂದ ಮತ್ತೆ ಬಿಗ್ ಆಪರೇಷನ್

ಇನ್ನು ಇದರ ಮಧ್ಯೆ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಶಕ್ಕೆ ಪಡೆಯಲು ಕಾಂಗ್ರೆಸ್​ ಪಣತೊಟ್ಟಿದೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​​ಗೆ ಹೆಚ್ಚಿನ ಮತಗಳು ಸಿಗಬೇಕು ಅಂತ, ಉಸ್ತುವಾರಿ ಹಾಗೂ ಕ್ಯಾಂಪೇನರ್​ಗಳನ್ನು ನೇಮಿಸಿದೆ. ಸಚಿವರಿಗೆ ಜಿಲ್ಲಾ ಪಂಚಾಯ್ತಿ ವಾರ್ಡ್​ವಾರು ಜವಾಬ್ದಾರಿ ನೀಡಲಾಗಿದ್ದು, ಮತ ಶಿಕಾರಿಗೆ ತಂತ್ರ ರೂಪಿಸುವಂತೆ ಖಡಕ್​ ಸಂದೇಶ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:23 pm, Tue, 29 October 24

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ