AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇ ನಾರಾಯಾಣಗೌಡ ಬಂಧನ: ಸರ್ಕಾರದ ಧೋರಣೆಯನ್ನ ನಾವು ಖಂಡಿಸುತ್ತೇವೆ; ಸಾಹಿತಿ ದೊಡ್ಡರಂಗೇಗೌಡ

ಅಧಿಕಾರದ ಖುರ್ಚಿ ಸಿಕ್ಕಿದೆ ಅಂಥ ಈ ರೀತಿ ಮಾಡಿದ್ದಾರೆ. ನಾವು ಇನ್ಮುಂದೆ ಸಹಿಸುವುದಿಲ್ಲ. ನಮಗೂ ಸ್ವಾಭಿಮಾನ ಇದೆ. ಅಕ್ಕರೆಯ ಸ್ವಾಭಿಮಾನವೇ ನಮ್ಮ ಅಸ್ತ್ರ. ಸರ್ಕಾರ ಇದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಡಾ. ದೊಡ್ಡರಂಗೇಗೌಡ ಅವರು ಹೇಳಿದರು.

ಕರವೇ ನಾರಾಯಾಣಗೌಡ ಬಂಧನ: ಸರ್ಕಾರದ ಧೋರಣೆಯನ್ನ ನಾವು ಖಂಡಿಸುತ್ತೇವೆ; ಸಾಹಿತಿ ದೊಡ್ಡರಂಗೇಗೌಡ
ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ
TV9 Web
| Edited By: |

Updated on:Dec 29, 2023 | 1:35 PM

Share

ಬೆಂಗಳೂರು, ಡಿಸೆಂಬರ್​ 29: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ರಾಜಧಾನಿಯಲ್ಲಿ ಪ್ರತಿಭಟನೆ ಮಾಡಿ ಮಾಲ್​ ಮತ್ತು ಹೋಟೆಲ್​ಗಳ ಮೇಲೆ ಕಲ್ಲುತೂರಾಟ ನಡೆಸಿದ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshna Vedike) ಅಧ್ಯಕ್ಷ ನಾರಾಯಣಗೌಡ (Narayangowda) ಸೇರಿದಂತೆ 29 ಜನ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ಕರವೇ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ (Doddarangegowda) ಅವರು ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಥಹ ಪರಿಸ್ಥಿತಿ ತಮಿಳುನಾಡು, ಆಂಧ್ರಪ್ರದೇಶಕ್ಕೆ ಬಂದಿದ್ದರೇ ಅದರ ಕಥೆ ಬೇರೆಯಾಗುತ್ತಿತ್ತು. ಮುಖ್ಯಮಂತ್ರಿಗಳು ಈ ರೀತಿ ಮಾಡಿರುವುದು ಸರಿ ಅಲ್ಲ. ಅಧಿಕಾರದ ಖುರ್ಚಿ ಸಿಕ್ಕಿದೆ ಅಂಥ ಈ ರೀತಿ ಮಾಡಿದ್ದಾರೆ. ನಾವು ಇನ್ಮುಂದೆ ಸಹಿಸುವುದಿಲ್ಲ ನಮಗೂ ಸ್ವಾಭಿಮಾನ ಇದೆ. ಅಕ್ಕರೆಯ ಸ್ವಾಭಿಮಾನವೇ ನಮ್ಮ ಅಸ್ತ್ರ. ಸರ್ಕಾರ ಇದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಡಾ. ದೊಡ್ಡರಂಗೇಗೌಡ ಅವರು ಹೇಳಿದರು.

ಇದನ್ನೂ ಓದಿ: ಸ್ವಪಕ್ಷದ ಕಾರ್ಯಕರ್ತರಿಂದಲೇ ಕಾಂಗ್ರೆಸ್​ ​ಸರ್ಕಾರದ ವಿರುದ್ಧ ಅಸಮಾಧಾನ: ಕರವೇ ನಾಯರಾಣಗೌಡ ಬಂಧನಕ್ಕೆ ಬೇಸರ

ಕನ್ನಡದ ಎಲ್ಲಾ ಶಕ್ತಿಗಳು ಇದನ್ನು ಖಂಡಿಸಬೇಕಾಗಿದೆ. ಸ್ಫೋಟವಾಗುವ ಕಾಲ ಸಮೀಪವಿದೆ. ನಾವು ಸುಮ್ಮ ಸುಮ್ಮನೆ ಕಾಲು ಕೆರೆದುಕೊಂಡು ಜಗಳಕ್ಕೆ ಬರುವುದಿಲ್ಲ. ಈ ರೀತಿ ನಮ್ಮನ್ನು ಶೋಷಣೆ ಮಾಡಿ ಹಿಂಸೆ ಕೊಟ್ಟರೇ ನಾವು ಏನು ಮಾಡುವುದು. ಅನ್ಯಾಯ ಆಗುತ್ತಿರುವಾಗ ಮಾತ್ರ ನಾವು ಪ್ರತಿಭಟನೆ ಮಾಡುತ್ತೇವೆ. ಸರ್ಕಾರದ ಧೋರಣೆಯನ್ನ ನಾವು ಖಂಡಿಸುತ್ತೇವೆ ಎಂದರು.

ಎಲ್ಲಾ ಸಾಹಿತಿಗಳು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯುತ್ತೇವೆ. ಎಲ್ಲಾ ಮನೆ ಮನಗಳಲ್ಲಿ ಕನ್ನಡ ರಾರಾಜಿಸಬೇಕು. ಬೇರೆ ರಾಜ್ಯದಿಂದ ಬಂದು ಇಲ್ಲಿ ನೆಲೆಸಿರುವವರು ಕನ್ನಡ ಕಲಿಲೇಬೇಕು. ಅನ್ನ ಕೊಡುವ ತಾಯಿಯನ್ನು ಲೆಕ್ಕಿಸದೇ ನೀವು ಇಲ್ಲಿ ಬದುಕಿದ್ದೀರಿ. ನಿಮ್ಮ ಸಂಕಲ್ಪವನ್ನು ಬದಲಿಸುವ ಮಾರ್ಗ ನಮಗೆ ಗೊತ್ತು. ನಾರಾಯಣಗೌಡರೇ ನಾವು ಇದ್ದೇವೆ ನಿಮ್ಮ ಜೊತೆ. ನಿಮಗೆ ಯಾವುದೇ ತೊಂದರೆ ಆಗದಂತೆ ನಾವಿದ್ದೇವೆ ಎಂದು ಹೇಳಿದರು.

ಇನ್ನು ನಾರಾಯಣಗೌಡ ಅವರ ಬಂಧನ ಖಂಡಿಸಿ ಕೊಪ್ಪಳ, ಕೋಲಾರ, ಮಂಡ್ಯ, ಯಾದಗಿರಿ ಮತ್ತು ಹುಬ್ಬಳ್ಳಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:34 pm, Fri, 29 December 23

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ