AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇ ನಾರಾಯಾಣಗೌಡ ಬಂಧನ: ಸರ್ಕಾರದ ಧೋರಣೆಯನ್ನ ನಾವು ಖಂಡಿಸುತ್ತೇವೆ; ಸಾಹಿತಿ ದೊಡ್ಡರಂಗೇಗೌಡ

ಅಧಿಕಾರದ ಖುರ್ಚಿ ಸಿಕ್ಕಿದೆ ಅಂಥ ಈ ರೀತಿ ಮಾಡಿದ್ದಾರೆ. ನಾವು ಇನ್ಮುಂದೆ ಸಹಿಸುವುದಿಲ್ಲ. ನಮಗೂ ಸ್ವಾಭಿಮಾನ ಇದೆ. ಅಕ್ಕರೆಯ ಸ್ವಾಭಿಮಾನವೇ ನಮ್ಮ ಅಸ್ತ್ರ. ಸರ್ಕಾರ ಇದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಡಾ. ದೊಡ್ಡರಂಗೇಗೌಡ ಅವರು ಹೇಳಿದರು.

ಕರವೇ ನಾರಾಯಾಣಗೌಡ ಬಂಧನ: ಸರ್ಕಾರದ ಧೋರಣೆಯನ್ನ ನಾವು ಖಂಡಿಸುತ್ತೇವೆ; ಸಾಹಿತಿ ದೊಡ್ಡರಂಗೇಗೌಡ
ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 29, 2023 | 1:35 PM

ಬೆಂಗಳೂರು, ಡಿಸೆಂಬರ್​ 29: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ರಾಜಧಾನಿಯಲ್ಲಿ ಪ್ರತಿಭಟನೆ ಮಾಡಿ ಮಾಲ್​ ಮತ್ತು ಹೋಟೆಲ್​ಗಳ ಮೇಲೆ ಕಲ್ಲುತೂರಾಟ ನಡೆಸಿದ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshna Vedike) ಅಧ್ಯಕ್ಷ ನಾರಾಯಣಗೌಡ (Narayangowda) ಸೇರಿದಂತೆ 29 ಜನ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ಕರವೇ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ (Doddarangegowda) ಅವರು ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಥಹ ಪರಿಸ್ಥಿತಿ ತಮಿಳುನಾಡು, ಆಂಧ್ರಪ್ರದೇಶಕ್ಕೆ ಬಂದಿದ್ದರೇ ಅದರ ಕಥೆ ಬೇರೆಯಾಗುತ್ತಿತ್ತು. ಮುಖ್ಯಮಂತ್ರಿಗಳು ಈ ರೀತಿ ಮಾಡಿರುವುದು ಸರಿ ಅಲ್ಲ. ಅಧಿಕಾರದ ಖುರ್ಚಿ ಸಿಕ್ಕಿದೆ ಅಂಥ ಈ ರೀತಿ ಮಾಡಿದ್ದಾರೆ. ನಾವು ಇನ್ಮುಂದೆ ಸಹಿಸುವುದಿಲ್ಲ ನಮಗೂ ಸ್ವಾಭಿಮಾನ ಇದೆ. ಅಕ್ಕರೆಯ ಸ್ವಾಭಿಮಾನವೇ ನಮ್ಮ ಅಸ್ತ್ರ. ಸರ್ಕಾರ ಇದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಡಾ. ದೊಡ್ಡರಂಗೇಗೌಡ ಅವರು ಹೇಳಿದರು.

ಇದನ್ನೂ ಓದಿ: ಸ್ವಪಕ್ಷದ ಕಾರ್ಯಕರ್ತರಿಂದಲೇ ಕಾಂಗ್ರೆಸ್​ ​ಸರ್ಕಾರದ ವಿರುದ್ಧ ಅಸಮಾಧಾನ: ಕರವೇ ನಾಯರಾಣಗೌಡ ಬಂಧನಕ್ಕೆ ಬೇಸರ

ಕನ್ನಡದ ಎಲ್ಲಾ ಶಕ್ತಿಗಳು ಇದನ್ನು ಖಂಡಿಸಬೇಕಾಗಿದೆ. ಸ್ಫೋಟವಾಗುವ ಕಾಲ ಸಮೀಪವಿದೆ. ನಾವು ಸುಮ್ಮ ಸುಮ್ಮನೆ ಕಾಲು ಕೆರೆದುಕೊಂಡು ಜಗಳಕ್ಕೆ ಬರುವುದಿಲ್ಲ. ಈ ರೀತಿ ನಮ್ಮನ್ನು ಶೋಷಣೆ ಮಾಡಿ ಹಿಂಸೆ ಕೊಟ್ಟರೇ ನಾವು ಏನು ಮಾಡುವುದು. ಅನ್ಯಾಯ ಆಗುತ್ತಿರುವಾಗ ಮಾತ್ರ ನಾವು ಪ್ರತಿಭಟನೆ ಮಾಡುತ್ತೇವೆ. ಸರ್ಕಾರದ ಧೋರಣೆಯನ್ನ ನಾವು ಖಂಡಿಸುತ್ತೇವೆ ಎಂದರು.

ಎಲ್ಲಾ ಸಾಹಿತಿಗಳು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯುತ್ತೇವೆ. ಎಲ್ಲಾ ಮನೆ ಮನಗಳಲ್ಲಿ ಕನ್ನಡ ರಾರಾಜಿಸಬೇಕು. ಬೇರೆ ರಾಜ್ಯದಿಂದ ಬಂದು ಇಲ್ಲಿ ನೆಲೆಸಿರುವವರು ಕನ್ನಡ ಕಲಿಲೇಬೇಕು. ಅನ್ನ ಕೊಡುವ ತಾಯಿಯನ್ನು ಲೆಕ್ಕಿಸದೇ ನೀವು ಇಲ್ಲಿ ಬದುಕಿದ್ದೀರಿ. ನಿಮ್ಮ ಸಂಕಲ್ಪವನ್ನು ಬದಲಿಸುವ ಮಾರ್ಗ ನಮಗೆ ಗೊತ್ತು. ನಾರಾಯಣಗೌಡರೇ ನಾವು ಇದ್ದೇವೆ ನಿಮ್ಮ ಜೊತೆ. ನಿಮಗೆ ಯಾವುದೇ ತೊಂದರೆ ಆಗದಂತೆ ನಾವಿದ್ದೇವೆ ಎಂದು ಹೇಳಿದರು.

ಇನ್ನು ನಾರಾಯಣಗೌಡ ಅವರ ಬಂಧನ ಖಂಡಿಸಿ ಕೊಪ್ಪಳ, ಕೋಲಾರ, ಮಂಡ್ಯ, ಯಾದಗಿರಿ ಮತ್ತು ಹುಬ್ಬಳ್ಳಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:34 pm, Fri, 29 December 23

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ