AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Breaking Kannada News Highlights: ಅಕ್ಟೋಬರ್‌ಗೆ ಅಕ್ಕಿ ಕೊಡೋದು ಗ್ಯಾರೆಂಟಿನಾ? ಸಚಿವ KH ಮುನಿಯಪ್ಪ ಹೇಳಿದ್ದಿಷ್ಟು

Breaking News Today Highlights Updates: ರಾಜ್ಯದಲ್ಲಿ ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಮಂಡ್ಯ, ರಾಮನಗರ ಮತ್ತು ಬೆಂಗಳೂರಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಜೆಪಿ-ಜೆಡಿಎಸ್​ ಮೈತ್ರಿ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ಬರಗಾಲ ಆವರಿಸಿದೆ ಹೀಗೆ ಅನೇಕ ಸುದ್ದಿಗಳ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್​ ಫಾಲೋ ಮಾಡಿ

ವಿವೇಕ ಬಿರಾದಾರ
| Edited By: |

Updated on:Sep 24, 2023 | 10:51 PM

Share

ರಾಜ್ಯದಲ್ಲಿ ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ವಿವಿಧ ಸಂಘಟನೆಗಳು ಶನಿವಾರ ಮಂಡ್ಯ ನಗರ ಮತ್ತು ಮದ್ದೂರು ಬಂದ್​ಗೆ ಕರೆ ನೀಡಿದವು. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಪ್ರತಿಭಟನೆ ನಡೆದವು. ಇನ್ನು ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ-ಬೆಂಗಳೂರು ಸಂಘದ ನೇತೃತ್ವದಲ್ಲಿ ರೈತ ಸಂಘಟನೆಗಳ ಒಕ್ಕೂಟ ಕನ್ನಡಪರ ಸಂಘಟನೆಗಳ ಒಕ್ಕೂಟ ಹಾಗೂ ಬೆಂಗಳೂರಿನ ನಾಗರಿಕ ಸಂಘಗಳ ಒಕ್ಕೂಟದ ವಿವಿಧ ಸಂಘಗಳು ಸೆ.26ರ ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಮತ್ತೊಂದಡೆ ರಾಜ್ಯದಲ್ಲಿ ಉತ್ತಮ ಮಳೆಯಾಗದೆ ಬರಗಾಲ ಆವರಿಸಿದೆ. ಇದರಿಂದ ರೈತ ಕಂಗಾಲ ಆಗಿದ್ದು, ಬೆಳೆಗೆ ನೀರಿಲ್ಲದೆ ಪರದಾಡುತ್ತಿದ್ದಾನೆ. ಇದರೊಂದಿಗೆ ಇಂದಿನ ಲೇಟೆಸ್ಟ್​ ಅಪ್ಡೇಟ್ಸ್​ ಇಲ್ಲಿದೆ

LIVE NEWS & UPDATES

The liveblog has ended.
  • 24 Sep 2023 10:26 PM (IST)

    Karnataka Breaking Kannada News Live: ಕೃಷಿ, ಕುಡಿಯುವ ನೀರಿನ ವಲಯದಲ್ಲಿ ವ್ಯತ್ಯಾಸವಿದೆ-ಬೊಮ್ಮಾಯಿ

    ಕೃಷಿ, ಕುಡಿಯುವ ನೀರಿನ ವಲಯದಲ್ಲಿ ವ್ಯತ್ಯಾಸವಿದೆ. ಬೇಸಾಯ ಹಾಗೂ ಕೈಗಾರಿಕೆಗೆ ನೀರಿನ ಬಳಕೆಯಲ್ಲಿ ಸಂಘರ್ಷವಿದೆ. ಬೆಂಗಳೂರು ನಗರಕ್ಕೆ ಇಂದು 25 ಟಿಎಂಸಿ‌ ನೀರಿನ ಅಗತ್ಯವಿದೆ. ರಿವರ್ ಬೇಸಿಕ್ ಡೆವಲಪ್‌ಮೆಂಟ್ ಕಾನೂನು ಜಾರಿಗೆ ತರಬೇಕು. ಕಾವೇರಿ, ಕೃಷ್ಣ, ಮಹದಾಯಿ ಯೋಜನೆಗೆ ಶಾಶ್ವತ ಮುಕ್ತಿ ಸಿಗಬೇಕು. ಈ ವಿಚಾರವಾಗಿ ತರಳುಬಾಳು ಶ್ರೀಗಳ‌ ಜೊತೆ‌ ನಾನು ಚರ್ಚಿಸಿದ್ದೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

  • 24 Sep 2023 09:19 PM (IST)

    Karnataka Breaking Kannada News Live: 55 ವರ್ಷ ಕಳೆದರೂ ಒಂದು ವಿವಾದ ಕೂಡ ಬಗೆಹರೆದಿಲ್ಲ-ಬೊಮ್ಮಾಯಿ

    ಅಂತಾರಾಜ್ಯ ನದಿ ವಿವಾದಗಳ ಕಾನೂನಿನಿಂದ ಯಾವುದೇ ಇತ್ಯರ್ಥ ಆಗಿಲ್ಲ. ವಿವಾದ ಬಗೆಹರಿಸುವುದಕ್ಕಿಂತ ಇನ್ನೂ ವಿವಾದ ಹುಟ್ಟುಹಾಕುತ್ತಿದೆ. 55 ವರ್ಷ ಕಳೆದರೂ ಒಂದು ವಿವಾದ ಕೂಡ ಬಗೆಹರೆದಿಲ್ಲ ಎಂದು ಚಿತ್ರದುರ್ಗ ತಾಲೂಕಿನ ಸಿರಿಗೆರೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

  • 24 Sep 2023 08:47 PM (IST)

    Karnataka Breaking Kannada News Live: ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ

    ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ. 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ. ಕಾವೇರಿ ವಿಚಾರದಲ್ಲಿ ‘ಸುಪ್ರೀಂ’ ತೀರ್ಪಿಗೆ ಬದ್ಧವಾಗಿರಬೇಕಾಗುತ್ತದೆ. ನ್ಯಾಯಯುತವಾಗಿ, ಶಾಂತಿಯುತವಾಗಿ ಹೋರಾಟ ನಡೆಯಲಿ ಎಂದು ತುಮಕೂರಿನಲ್ಲಿ ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಹೇಳಿದ್ದಾರೆ.

  • 24 Sep 2023 08:19 PM (IST)

    Karnataka Breaking Kannada News Live: ತಿಪಟೂರು ಎರಡೂ ಜಿಲ್ಲೆಯಾಗಲಿ

  • 24 Sep 2023 07:49 PM (IST)

    Karnataka Breaking Kannada News Live: ಈಗಾಗಲೇ 100 ದಿನಗಳಲ್ಲಿ 4 ಗ್ಯಾರಂಟಿ‌ಗಳನ್ನು ಜಾರಿ ಮಾಡಿದ್ದೇವೆ

    ಈಗಾಗಲೇ 100 ದಿನಗಳಲ್ಲಿ 4 ಗ್ಯಾರಂಟಿ‌ಗಳನ್ನು ಜಾರಿ ಮಾಡಿದ್ದೇವೆ ಎಂದು ತುಮಕೂರಿನಲ್ಲಿ ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಹೇಳಿದ್ದಾರೆ. ಡಿಸೆಂಬರ್ ಬಳಿಕ 5ನೇ ಗ್ಯಾರಂಟಿ ಕೂಡ ನಾವು ಜಾರಿಗೆ ತರುತ್ತೇವೆ. ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ. 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದರು.

  • 24 Sep 2023 07:24 PM (IST)

    Karnataka Breaking Kannada News Live: ಶುಕ್ರವಾರ ಕರ್ನಾಟಕ ಬಂದ್?

  • 24 Sep 2023 06:38 PM (IST)

    Karnataka Breaking Kannada News Live: ಹೊಟ್ಟೆಕಿಚ್ಚಿನಿಂದ ಒಬ್ಬರಿಗೊಬ್ಬರು ಕೈಕೈ ಹಿಸುಕಿಕೊಳ್ತಿದ್ದಾರೆ-ಖಂಡ್ರೆ

    ಬಿಜೆಪಿ, ಜೆಡಿಎಸ್ ಎರಡೂ ಪಕ್ಷಗಳ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ ಎಂದು ಚಿಕ್ಕಮಗಳೂರಿನಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಬಿಜೆಪಿ, ಜೆಡಿಎಸ್​ ಮೈತ್ರಿಯಿಂದ ಕಾಂಗ್ರೆಸ್​ಗೆ ಯಾವುದೇ ನಷ್ಟವಿಲ್ಲ. ಹೊಟ್ಟೆಕಿಚ್ಚಿನಿಂದ ಒಬ್ಬರಿಗೊಬ್ಬರು ಕೈಕೈ ಹಿಸುಕಿಕೊಳ್ತಿದ್ದಾರೆ ಎಂದಿದ್ದಾರೆ.

  • 24 Sep 2023 05:54 PM (IST)

    Karnataka Breaking Kannada News Live:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಖಂಡಿಸುತ್ತೇವೆ

    ಬಂದ್​ನಿಂದ ನಾವು ಬೆಂಗಳೂರಿಗೆ ಅಪಮಾನ ಮಾಡುವ ಕೆಲಸ ಮಾಡುತ್ತಿಲ್ಲ. ಡಿಸಿಎಂ ಡಿಕೆ ಹೋರಾಟಗಾರರ ವಿರುದ್ಧ ಲಘುವಾಗಿ ಮಾತನಾಡ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಖಂಡಿಸುತ್ತೇವೆ. ಬೆಂಗಳೂರು ಬಂದ್ ಬಗ್ಗೆ ನೀರಾವರಿ ಸಚಿವರು ಲಘುವಾಗಿ ಮಾತಾಡ್ತಾರೆ. ಸರ್ಕಾರ ನಮ್ಮ‌ ಧ್ವನಿಯಾಗಿರಬೇಕು ಎಂದು ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ.

  • 24 Sep 2023 05:27 PM (IST)

    Karnataka Breaking Kannada News Live: ಬಂದ್‌ಗೆ ಶಾಲಾ ಮಕ್ಕಳ ಪೋಷಕರ ಸಂಘಟನೆಯ ಬೆಂಬಲ

    ಸೆಪ್ಟೆಂಬರ್‌ 26ರಂದು ಮಂಗಳವಾರ ಬೆಂಗಳೂರು ಬಂದ್ ವಿಚಾರವಾಗಿ ಶಾಲಾ ಮಕ್ಕಳ ಪೋಷಕರ ಸಂಘಟನೆಯ ಬೆಂಬಲ ಇದೆ. ಶಾಲಾ ಮಕ್ಕಳ ಪೋಷಕರ ಸಂಘಟನೆ ಅಧ್ಯಕ್ಷ ಯೋಗಾನಂದ ಹೇಳಿಕೆ ನೀಡಿದ್ದು, ಬೆಂಗಳೂರು ಬಂದ್ ದಿನ ನಾವು ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದದ್ದಾರೆ.

  • 24 Sep 2023 05:14 PM (IST)

    Karnataka Breaking Kannada News Live: ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಬೆಂಬಲ

    ಬೆಂಗಳೂರು ಬಂದ್‌ಗೆ ನಮ್ಮ ಸಂಘಟನೆಯ ನೈತಿಕ ಬೆಂಬಲ ಇದೆ ಎಂದು ಬೆಂಗಳೂರಲ್ಲಿ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ ಹೇಳಿದ್ದಾರೆ.

  • 24 Sep 2023 04:53 PM (IST)

    Karnataka Breaking Kannada News Live: ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ಸರ್ಕಾರದ ಮುಂದಿನ ನಡೆ ಏನು?

  • 24 Sep 2023 04:39 PM (IST)

    Karnataka Breaking Kannada News Live: ಮಂಗಳವಾರದಂದು ಬೆಂಗಳೂರು ಬಂದ್

    ಸೆಪ್ಟೆಂಬರ್‌ 26 ಮಂಗಳವಾರದಂದು ಬೆಂಗಳೂರು ಬಂದ್ ಫಿಕ್ಸ್. ನಿನ್ನೆ ಎಲ್ಲಾ ಸಂಘ ಸಂಸ್ಥೆಗಳು ಸೇರಿ ಬೆಂಗಳೂರು ಬಂದ್‌ಗೆ ಕರೆ ನೀಡಿದ್ವಿ. ಮಂಗಳವಾರ ಬಂದ್‌ಗೆ ಸಾಕಷ್ಟು ಸಂಘ ಸಂಸ್ಥೆಗಳು ಬೆಂಬಲ ಕೊಟ್ಟಿವೆ ಎಂದು ಹೋರಾಟಗಾರರ ಸಭೆಯಲ್ಲಿ ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ.

  • 24 Sep 2023 04:26 PM (IST)

    Karnataka Breaking Kannada News Live: ಸಮಸ್ಯೆ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಕೆಲಸ ಯಾರೂ ಮಾಡಿಲ್ಲ

    ಸಮಸ್ಯೆ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಕೆಲಸ ಯಾರೂ ಮಾಡಿಲ್ಲ. ಯಾವ ರೀತಿ ನೀರು ಕೊಡಲಾಗುವುದು ಅಂತ ಸರ್ಕಾರ ಹೇಳಿಲ್ಲ. ಟ್ಯಾಂಕರ್ ಮೂಲಕ ನೀರು ಪೂರೈಸುವ ಬಗ್ಗೆಯೂ ಸ್ಪಷ್ಟಪಡಿಸಿಲ್ಲ. ಬೆಂಗಳೂರಲ್ಲಿದ್ದ IT, BT ಕಂಪನಿಗಳು ಹೈದರಾಬಾದ್​​ಗೆ ಹೋಗುತ್ತಿವೆ. ಇಲ್ಲಿನ ಟ್ರಾಫಿಕ್ ಸಮಸ್ಯೆಯಿಂದ ಟೆಕ್​ಪಾರ್ಕ್ ವಲಸೆ ಹೋಗ್ತಿವೆ. 1 ದಿನ ಕೆಲಸಕ್ಕೆ‌ ಕಚೇರಿಗೆ ಹೋಗಲು 4 ಗಂಟೆ ಬೇಕು ಅಂತಿದ್ದಾರೆ. ಬೆಂಗಳೂರಿನಲ್ಲಿರುವ ವಿದ್ಯಾವಂತರು ಹೈದರಾಬಾದ್​​ಗೆ ಹೋಗ್ತಿದ್ದಾರೆ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.

  • 24 Sep 2023 03:50 PM (IST)

    Karnataka Breaking Kannada News Live: ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಶಾಸಕ ಮುನಿರತ್ನ ಮಾತು

    ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಒಳ್ಳೆಯ ಬೆಳವಣಿಗೆ. ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಆಗಿದ್ದರೆ ಹೆಚ್ಚು ಸ್ಥಾನ ಬರುತ್ತಿತ್ತು. ರಾಜ್ಯದಲ್ಲಿ ಎರಡೂ ಪಕ್ಷಗಳಿಂದ 135 ಸ್ಥಾನ ಗೆಲ್ಲುತ್ತಿದ್ದೆವು. ಕಾರಣಾಂತರದಿಂದ ಆಗಿರಲಿಲ್ಲ, ಈಗ ಸಮಯ ಬಂದಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರ ಗೆಲ್ಲಲು ಅನುಕೂಲ ಆಗಲಿದೆ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.

  • 24 Sep 2023 03:27 PM (IST)

    Karnataka Breaking Kannada News Live: ಪದೇ ಪದೇ ಈ ವಿಚಾರವನ್ನ ನಾನು ಮಾತಾಡಲ್ಲ

    ನಾನು ಹೇಳಿದಿನಿ, ಅದು ಮುಗಿದ ಹೋದ ಅಧ್ಯಾಯ. ಹೈಕಮಾಂಡ್​ಗೆ ದೂರು ಕೊಟ್ಟಿರುವುದು ನನಗೆ ಗೊತ್ತಿಲ್ಲ. ನಾನು ನನ್ನ ಭಾವನೆಯನ್ನ ಹೇಳಿದ್ದೇನೆ. ಹೈಕಮಾಂಡ್​ ಏನು ತಿರ್ಮಾನ ತಗೊಳುತ್ತೆ ತಗೊಳ್ಳಲಿ. ಪದೇ ಪದೇ ಈ ವಿಚಾರವನ್ನ ನಾನು ಮಾತಾಡಲ್ಲ ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

  • 24 Sep 2023 03:04 PM (IST)

    Karnataka Breaking Kannada News Live: ಸರ್ಕಾರ ಸಮಪರ್ಕವಾಗಿ ಕಾನೂನಾತ್ಮಕ ಹೋರಾಟ ಮಾಡಿದೆ

    ಸರ್ಕಾರ ಸಮಪರ್ಕವಾಗಿ ಕಾನೂನಾತ್ಮಕ ಹೋರಾಟ ಮಾಡಿದೆ. ಅದರಲ್ಲಿ ಎಳ್ಳಷ್ಟು ಏನು ಇಲ್ಲ. ಆದರೆ ದುರಾದೃಷ್ಟವಶಾತ್ ಸುಪ್ರೀಂಕೋರ್ಟ್ ಅದೇಶ ಕೊಟ್ಟಿದೆ. ನಮ್ಮ ಫೆಡರಲ್ ವ್ಯವಸ್ಥೆಯಲ್ಲಿ ಸುಪ್ರೀಂಕೋರ್ಟ್ ತಿರ್ಪು ಅಂತಿಮ. ಆದರು ನಾವು ಇನ್ನೊಮ್ಮೆ ರೀವ್ಯು ಪಿಟಿಶಿನ್ ಹಾಕುವ ಬಗ್ಗೆ ಚಿಂತನೆ ನಡೆದಿದೆ ಎಂದು ತುಮಕೂರಿನಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.

  • 24 Sep 2023 02:30 PM (IST)

    Karnataka Breaking Kannada News Live: ಗ್ಯಾರಂಟಿ ಫ್ರೀ ಕೊಟ್ಟಂಗೆ ಸ್ಟಾಲಿನ್​ಗೂ ನೀರು ಫ್ರೀ ಕೊಡ್ತವ್ರೆ

  • 24 Sep 2023 01:03 PM (IST)

    Karnataka News Live: ಬೆಂಗಳೂರು ಬಂದ್​ಗೆ KSRTC ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಬೆಂಬಲ

    ಬೆಂಗಳೂರು ಬಂದ್​ಗೆ ನಮ್ಮ‌ ಸಂಪೂರ್ಣ ಬೆಂಬಲ ಇರುತ್ತೆ. ಸಾರಿಗೆ ಬಸ್ ರೋಡ್​ಗೆ ಇಳಿಯುವುದಿಲ್ಲ ಎಂದು ಕೆಎಸ್​ಆರ್​ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಹೇಳಿದ್ದಾರೆ.

  • 24 Sep 2023 12:51 PM (IST)

    Karnataka News Live: ಮಂಗಳವಾರ ಬೆಂಗಳೂರು ಬಂದ್​ಗೆ ಖಾಸಗಿ ಸಾರಿಗೆ ಸಂಘಟನೆಗಳ ಬೆಂಬಲ

    ಬೆಂಗಳೂರು: ಮಂಗಳವಾರ ಬೆಂಗಳೂರು ಬಂದ್​ಗೆ ಖಾಸಗಿ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದರು.

  • 24 Sep 2023 12:28 PM (IST)

    Karnataka News Live: ಸೆ.25 ರಂದು ಭಾರತೀಯ ರೈತ ಒಕ್ಕೂಟ‌ದಿಂದ ದಾವಣಗೆರೆ ಬಂದ್​ಗೆ ಕರೆ

    ಶಿವಮೊಗ್ಗ: ಜಿಲ್ಲೆಯ ಭದ್ರಾ ಡ್ಯಾಂ​ನಿಂದ ಕಾಲುವೆಗೆ ನೀರು ಸ್ಥಗಿತವಾದ ಹಿನ್ನೆಲೆಯಲ್ಲಿ ಸೆ.25 ರಂದು  ಭಾರತೀಯ ರೈತ ಒಕ್ಕೂಟ‌ದಿಂದ ದಾವಣಗೆರೆ ಬಂದ್​ಗೆ ಕರೆ ನೀಡಿವೆ. ಭದ್ರಾ ಕಾಲುವೆಗೆ ನೀರು ಹರಿಸುವುದಾಗಿ ಲಿಖಿತ ಆದೇಶ ಹೊರಡಿಸಲು ಆಗ್ರಹಿಸಿವೆ.

  • 24 Sep 2023 11:50 AM (IST)

    Karnataka News Live: ಬೆಂಗಳೂರು ಬಂದ್​ಗೆ ಬಿಜೆಪಿ ಬೆಂಬಲವೂ ಇದೆ: ಯಡಿಯೂರಪ್ಪ

    ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಸೌಹಾರ್ದಯುತವಾಗಿ ಭೇಟಿ ಮಾಡಿದ್ದಾರೆ. ಹೆಚ್​ ಡಿ ಕುಮಾರಸ್ವಾಮಿ ಅವರೂ ಕರೆ ಮಾಡಿದ್ದರು. ಮನೆಗೆ ಬಂದು ಹೋಗಿ ಅಂದರು. ಸದ್ಯದರಲ್ಲೇ ಹೋಗುತ್ತೇನೆ. ಹೇಗೊ ನಮ್ಮ ಜತೆ ಅವರು ಹೊಂದಾಣಿಕೆ ಆಗಿದ್ದಾರೆ. ನಾವೆಲ್ಲರೂ ಒಟ್ಟಾಗಿ ಹೋಗಬೇಕಿದೆ. ಬೆಂಗಳೂರು ಬಂದ್​ಗೆ ಬಿಜೆಪಿ ಬೆಂಬಲವೂ ಇದೆ. ಇದಕ್ಕೆ ನಮ್ಮದೇನೂ ವಿರೋಧ ಇರಲ್ಲ. ನಮ್ಮ ಸಂಪೂರ್ಣ ಬೆಂಬಲ ಇರುತ್ತೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದರು.

  • 24 Sep 2023 11:23 AM (IST)

    Karnataka News Live: ಸೆ.26 ರಂದು ಮಂಡ್ಯ ಜಿಲ್ಲೆಯ ಕೆಆರ್​ಪೇಟೆ ಪಟ್ಟಣ ಬಂದ್​​

    ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶವನ್ನು ವಿರೋಧಿಸಿ  ಸೆಪ್ಟೆಂಬರ್ 26 ರಂದು ಮಂಡ್ಯ ಜಿಲ್ಲೆಯ ಆರ್​ಪೇಟೆ ಬಂದ್​ಗೆ ಕಾವೇರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಸಂಸ್ಥೆಗಳು ಕರೆ ನೀಡಿವೆ. ಬೆಳಗ್ಗೆ 8 ರಿಂದ ಸಂಜೆ 6ರ ವರೆಗೆ ಬಂದ್ ಇರಲಿದೆ. ಅಗತ್ಯ ಸೇವೆ ಹೊರತು ಪಡಿಸಿ ಉಳಿದಂತೆ ಎಲ್ಲವೂ ಬಂದ್ ಆಗಲಿವೆ.

  • 24 Sep 2023 10:51 AM (IST)

    Karnataka News Live: ಬಿಜೆಪಿ-ಜೆಡಿಎಸ್​ ಮೈತ್ರಿ; ಇಂದು ಜನತಾದಳದ ಮುಸ್ಲಿಂ ಮುಖಂಡರ ಸಭೆ

    ಬೆಂಗಳೂರು: ಜೆಡಿಎಸ್​ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಸ್ಲಿಂ ಜೆಡಿಎಸ್ ನಾಯಕರಲ್ಲಿ ಅಸಮಾಧಾನ ಸ್ಪೋಟವಾಗಿದೆ. ಮುಸ್ಲಿಂ ಮುಖಂಡರು ಸಾಮೂಹಿಕವಾಗಿ ಜೆಡಿಎಸ್ ತೊರೆಯಲು  ನಿರ್ಧರಿಸಿದ್ದಾರೆ. ಅಸಮಾಧಾನ ಹಿನ್ನೆಲೆಯಲ್ಲಿ ಜೆಡಿಎಸ್ ಮುಸ್ಲಿಂ ಮುಖಂಡರು ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ 20 ಕ್ಕೂ‌ಹೆಚ್ಚು ಮುಖಂಡರು ಭಾಗಿಯಾಗಲಿದ್ದಾರೆ. ಸಭೆ ಮಾಡಿ ಜೆಡಿಎಸ್ ತೊರೆಯುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಬೇಸರದಿಂದ ಜೆಡಿಎಸ್​ ರಾಜ್ಯ ಉಪಾಧ್ಯಕ್ಷ ಸೈಯದ್ ಶಫಿಉಲ್ಲ ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ.

  • 24 Sep 2023 10:46 AM (IST)

    Karnataka News Live: ಚಾಮರಾಜನಗರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಬರ 

    ಚಾಮರಾಜನಗರ: ಗಡಿ ನಾಡು ಚಾಮರಾಜನಗರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಬರ  ಆವರಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾಡಳಿತ ತಯಾರಿ ನಡೆಸಿದೆ. ಕೊಳ್ಳೆಗಾಲ, ಯಳಂದೂರು, ಗುಂಡ್ಲುಪೇಟೆ, ಹನೂರು ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಲು ಜಿಲ್ಲಾಡಳಿತ ಮುಂದಾಗಿದೆ.

  • 24 Sep 2023 10:11 AM (IST)

    Karnataka News Live: ಬಾಗಲಕೋಟೆ ಜಿಲ್ಲೆಯಲ್ಲಿ ಬರ; ಒಣಗಿದ ಮೆಣೆಸು ಬೆಳೆ

    ಬಾಗಲಕೋಟೆ: ಜಿಲ್ಲೆಯಲ್ಲಿ ಬರ ಆವರಿಸಿದ್ದು, ಜಿಲ್ಲೆಯ ಒಂಬತ್ತು ತಾಲ್ಲೂಕುಗಳನ್ನು ಬರ ಎಂದು ಘೋಷಣೆ ಮಾಡಲಾಗಿದೆ. ಮಳೆಯಿಲ್ಲದೆ ಬೆಳೆಗಳು ಒಣ ಹೋಗಿವೆ. ಮೂರು ಅಡಿ ಬೆಳೆದರೂ ಗಿಡಗಳು ಹೂ ಬಿಟ್ಟಿಲ್ಲ. ಬಾಗಲಕೋಟೆ ತಾಲ್ಲೂಕಿನ ನೀರಲಕೇರಿ ಗ್ರಾಮ ವ್ಯಾಪ್ತಿಯಲ್ಲಿ 200 ಎಕರೆಗೂ ಅಧಿಕ ಭೂಮಿಯಲ್ಲಿ ರೈತರು ಮೆಣಸಿನಗಿಡ ಬೆಳೆದಿದ್ದಾರೆ. ಆದೆರೆ ಮಳೆಯಿಲ್ಲದೆ ಶೇ90ರಷ್ಟು ಬೆಳೆ ಒಣಗಿದೆ.

  • 24 Sep 2023 09:55 AM (IST)

    Karnataka News Live: ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ

    ಹಾಸನ: ಹೇಮಾವತಿ ಜಲಾಶಯದಲ್ಲಿ ಇಂದು 2896.90 ಅಡಿ ನೀರಿನ ಮಟ್ಟ ಇದೆ. ಜಲಾಶಯದ ಗರಿಷ್ಠ  ಮಟ್ಟ‌ 2922 ಅಡಿ ಆಗಿದೆ. ಒಟ್ಟು ಸಂಗ್ರಹ ಸಾಮರ್ಥ್ಯ 37.103 ಟಿಎಂಸಿ ಇದೆ. ಇಂದು 17.904 ಟಿಎಂಸಿ ನೀರಿದೆ. ಬಳಕೆಗೆ ಲಭ್ಯವಿರುವ ನೀರು‌ – 13.565 ಟಿಎಂಸಿ, ಒಳಹರಿವು – 2704 ಕ್ಯೂಸೆಕ್ ಇದ್ದು, ಹೊರಹರಿವು – 1300 ಕ್ಯೂಸೆಕ್ ಇದೆ.

  • 24 Sep 2023 09:39 AM (IST)

    Karnataka News Live: ಸೆ.25 ರಂದು ಮುಂಡರಗಿ ತಾಲೂಕು ಬಂದ್​ಗೆ ಕರೆ ನೀಡಿದ ಅನ್ನದಾತರು

    ಗದಗ: ಬರ ಪೀಡಿತ ತಾಲೂಕು ಪಟ್ಟಿಯಿಂದ ಮುಂಡರಗಿ ತಾಲೂಕ ಕೈಬಿಟ್ಟಿಕ್ಕೆ ಹಿನ್ನೆಲೆಯಲ್ಲಿಸೆ.25 ರಂದು ಮುಂಡರಗಿ ತಾಲೂಕು ಬಂದ್​​ಗೆ ರೈತರು ಕರೆ ನೀಡಿದ್ದಾರೆ.   ಏಳು ತಾಲೂಕು ಪೈಕಿ, ಆರು ತಾಲೂಕು ಬರ ಪೀಡಿತ ತಾಲೂಕು ಅಂತ ಘೋಷಣೆ ಮಾಡಲಾಗಿದೆ. ಆದರೆ ಮುಂಡರಗಿ ತಾಲೂಕನ್ನು ಕೈ ಬಿಟ್ಟಿದ್ದಕ್ಕೆ ಅನ್ನದಾತರಿಂದ ಮುಂಡರಗಿ ಬಂದ್ ಕರೆ ನೀಡಲಾಗಿದೆ. ವಿವಿಧ ರೈತ ಸಂಘಟನೆಗಳು, ಕನ್ನಡಪರ ಸಂಘಟನೆ ಸೇರಿದಂತೆ 10 ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿವೆ.

  • 24 Sep 2023 08:58 AM (IST)

    Karnataka News Live: ಕಬಿನಿ ಜಲಾಶಯದಲ್ಲಿ 14.11 ಟಿಎಂಸಿ ನೀರು

    ಮೈಸೂರು: ಕಬಿನಿ ಜಲಾಶಯದಿಂದ ನೀರಿನ ಹೊರ ಹರಿವು ಮುಂದುವರೆದಿದ್ದು, ಡ್ಯಾಂನ ಗರಿಷ್ಠ 19.52 ಟಿಎಂಸಿ ಇದೆ. ಸದ್ಯ ಜಲಾಶಯದಲ್ಲಿ 14.11 ಟಿಎಂಸಿ ನೀರು ಇದೆ. ಕಳೆದ ವರ್ಷ ಇದೇ ದಿನ 18.86 ಟಿಎಂಸಿ ನೀರು ಸಂಗ್ರಹವಿತ್ತು.

  • 24 Sep 2023 08:37 AM (IST)

    Karnataka News Live: ಲೋಕಸಭಾ ಕ್ಷೇತ್ರವಾರು ವೀಕ್ಷಕರನ್ನು ನೇಮಸಿದ ಕಾಂಗ್ರೆಸ್​

    ಬೆಂಗಳೂರು: ಲೋಕಸಭೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಮುನ್ನುಡಿ ಬರೆದಿದೆ. 3o ಮಂದಿ ಸಚಿವರನ್ನು ಲೋಕಸಭಾ ಕ್ಷೇತ್ರಗಳ ವೀಕ್ಷಕರಾಗಿ ನೇಮಕ ಮಾಡಿದೆ. ಕ್ಷೇತ್ರಗಳಲ್ಲಿ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲು ಸೂಚನೆ ನೀಡಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಸಚಿವರಿಗೆ ಉಸ್ತುವಾರಿ ಜಿಲ್ಲೆಗಳನ್ನು ಬಿಟ್ಟು ಬೇರೆ ಕ್ಷೇತ್ರಗಳ ಜವಾಬ್ದಾರಿ ನೀಡಿದ್ದಾರೆ.

  • 24 Sep 2023 08:23 AM (IST)

    Cauvery Water Dispute Live: ಇಂದು ಸಹ ಮಂಡ್ಯದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

    ಮಂಡ್ಯ:  ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10.30 ಕ್ಕೆ ಮಂಡ್ಯದ ಸಂಜಯ್ ಸರ್ಕಲ್​ನಲ್ಲಿ ಕಾವೇರಿ ನದಿ ನೀರಿನ ರಕ್ಷಣಾ ಹೋರಾಟ ಸಮಿತಿ ಪ್ರತಿಭಟನೆ ನಡೆಸಲಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಧರಣಿ ನಡೆಯಲಿದೆ. ಮಧ್ಯಾಹ್ನ 3 ಕ್ಕೆ ಭೂಮಿತಾಯಿ ಹೋರಾಟ ಸಮಿತಿ ಪ್ರತಿಭಟನೆ ಮಾಡಲಿದೆ. ಶ್ರೀರಂಗಪಟ್ಟಣದಲ್ಲಿ ಬೆಂಗಳೂರು ‌ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಲಿದೆ.

  • 24 Sep 2023 08:04 AM (IST)

    Cauvery Water Dispute Live: ಕಾವೇರಿ ವಿವಾದ; ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ

    ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು (ಸೆ.24) ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕನ್ನಡ ಒಕ್ಕೂಟ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಿದೆ.  ಮಧ್ಯಾಹ್ನ 12 ಗಂಟೆಗೆ ಮೈಸೂರು ಬ್ಯಾಂಕ್​ ಸರ್ಕಲ್​​ ಬಳಿ ನಡೆಯುವ ಧರಣಿಯಲ್ಲಿ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ವಿವಿಧ ಕನ್ನಡಪರ ಸಂಘಟನೆಗಳು ಭಾಗಿಯಾಗಲಿವೆ.

Published On - Sep 24,2023 8:01 AM

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​