AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಲ್ಲಿ ಕಲ್ಲುಗಣಿಗಾರಿಕೆ ಅಕ್ರಮ: ಬಂಡೆಯಂತೆ ಕೈಕಟ್ಟಿ ಕುಳಿತ ಅಧಿಕಾರಿಗಳು!

ಬೀದರ್: ಭಾಲ್ಕಿ ತಾಲೂಕಿನಲ್ಲಿ ಕೆಂಪು ಕಲ್ಲಿನ ಕ್ಯಾರಿಗಳು ಅಕ್ರಮದ ಸದ್ದು ಮಾಡ್ತಿವೆ. ಚಟ್ನಳ್ಳಿ, ಅಣದೂರು ವಾಡಿ, ಸಗೋಳ್ಳಗಿ ತಾಂಡಾ ಹಾಗೂ ಖಾನಾಪುರ ಸುತ್ತಮುತ್ತಲೂ ಅಕ್ರಮ ಗಣಿಗಾರಿಕೆ ಜೋರಾಗಿ ನಡೀತಿದೆ. ಅಧಿಕಾರಿಗಳು, ರಾಜಕೀಯ ‌ಮುಖಂಡರ ಬೆನ್ನಿಗಿಟ್ಟುಕೊಂಡು ದೊಡ್ಡ ದೊಡ್ಡ ಯಂತ್ರಗಳಿಂದ ಕಲ್ಲು ಕೊರೆದು ಸಾಗಿಸ್ತಿದ್ದಾರೆ. ಸರ್ಕಾರದ ನೀತಿ ನಿಯಮಗಳನ್ನೂ ಲೆಕ್ಕಿಸದೆ ಎಲ್ಲೆಂದರಲ್ಲಿ ರಾಜಾರೋಷವಾಗಿ, ಮನಬಂದಂತೆ ಭೂತಾಯಿಯನ್ನ ನಾಶ ಮಾಡ್ತಿದ್ದಾರೆ. ಇಷ್ಟೆಲ್ಲಾ ಆಗ್ತಿದ್ರೂ ಪೊಲೀಸರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪಗಳು ಕೇಳಿ […]

ಬೀದರ್​ನಲ್ಲಿ ಕಲ್ಲುಗಣಿಗಾರಿಕೆ ಅಕ್ರಮ: ಬಂಡೆಯಂತೆ ಕೈಕಟ್ಟಿ ಕುಳಿತ ಅಧಿಕಾರಿಗಳು!
ಸಾಧು ಶ್ರೀನಾಥ್​
|

Updated on: Nov 27, 2019 | 3:52 PM

Share

ಬೀದರ್: ಭಾಲ್ಕಿ ತಾಲೂಕಿನಲ್ಲಿ ಕೆಂಪು ಕಲ್ಲಿನ ಕ್ಯಾರಿಗಳು ಅಕ್ರಮದ ಸದ್ದು ಮಾಡ್ತಿವೆ. ಚಟ್ನಳ್ಳಿ, ಅಣದೂರು ವಾಡಿ, ಸಗೋಳ್ಳಗಿ ತಾಂಡಾ ಹಾಗೂ ಖಾನಾಪುರ ಸುತ್ತಮುತ್ತಲೂ ಅಕ್ರಮ ಗಣಿಗಾರಿಕೆ ಜೋರಾಗಿ ನಡೀತಿದೆ. ಅಧಿಕಾರಿಗಳು, ರಾಜಕೀಯ ‌ಮುಖಂಡರ ಬೆನ್ನಿಗಿಟ್ಟುಕೊಂಡು ದೊಡ್ಡ ದೊಡ್ಡ ಯಂತ್ರಗಳಿಂದ ಕಲ್ಲು ಕೊರೆದು ಸಾಗಿಸ್ತಿದ್ದಾರೆ.

ಸರ್ಕಾರದ ನೀತಿ ನಿಯಮಗಳನ್ನೂ ಲೆಕ್ಕಿಸದೆ ಎಲ್ಲೆಂದರಲ್ಲಿ ರಾಜಾರೋಷವಾಗಿ, ಮನಬಂದಂತೆ ಭೂತಾಯಿಯನ್ನ ನಾಶ ಮಾಡ್ತಿದ್ದಾರೆ. ಇಷ್ಟೆಲ್ಲಾ ಆಗ್ತಿದ್ರೂ ಪೊಲೀಸರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಫಲವತ್ತಾದ ಜಮೀನಲ್ಲಿ, ಪ್ರವಾಸಿ ಸ್ಥಳ, ಊರು ಹಾಗೂ ರಸ್ತೆ ಅಕ್ಕಪಕ್ಕದಲ್ಲಿ ಗಣಿಗಾರಿಕೆ ನಡೆಸದಂತೆ ಕಾನೂನಿದೆ. ಆದ್ರೆ, ದಂಧೆಕೋರರು ಯಾವುದಕ್ಕೂ ಡೋಂಟ್​ಕೇರ್ ಎನ್ನದೇ ತಮ್ಮ ಆಟ ಮುಂದುವರಿಸಿದ್ದಾರೆ. ಜನರು ಯಾವಾಗ ಆಕ್ರೋಶ ಹೊರಹಾಕಿದರೂ ಖದೀಮರು ಒಂದೆರಡು ದಿನ ಕಲ್ಲು ಗಣಿಕಾರಿಕೆ ನಿಲ್ಲಿಸಿ ಮತ್ತೆ ತಮ್ಮ ಕೆಲಸ ಆರಂಭಿಸುತ್ತಿದ್ದಾರೆ.

ಇನ್ನು ಗಣಿಗಾರಿಕೆ ನಡೆಸ್ತಿರೋರಿಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ದಂಡ ವಿಧಿಸೋದು ಬಿಟ್ರೆ ಕಠಿಣ ಕ್ರಮ ಕೈಗೊಂಡಿಲ್ಲ. ಇದ್ರಿಂದ ಸುಂದರ ಪರಿಸರದ ಜೊತೆಗೆ, ಗಣಿಗಾರಿಕೆಯಿಂದ ಮೇಲೆದ್ದು ಬರ್ತಿರೋ ಧೂಳು ಜನರಿಗೆ ಸಮಸ್ಯೆ ಉಂಟುಮಾಡಿದೆ. ಈ ಬಗ್ಗೆ ಅಧಿಕಾರಿಗಳು ಗಣಿಗಾರಿಕೆ ಬಗ್ಗೆ ಗಮನಕ್ಕೆ ಬಂದಿಲ್ಲ. ಪರಿಶೀಲಿಸಿ ಕ್ರಮ ಕೈಗೊಳ್ತೀನಿ ಎಂದಿದ್ದಾರೆ.

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ