AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಗಂಗಾ ನದಿಯಲ್ಲಿ ಕೊಚ್ಚಿಹೋಗಿ ಮರ ಹತ್ತಿ ಕುಳಿತಿದ್ದ ಯುವಕನನ್ನು ರೋಚಕ ಕಾರ್ಯಾಚರಣೆಯ ಮೂಲಕ ರಕ್ಷಿಸಿದ ಸ್ಥಳೀಯರು

Karnataka Monsoon 2021: ಸೇತುವೆ ಮೇಲೆ ಹರಿಯುತ್ತಿದ್ದ ವೇದಗಂಗಾ ನದಿ ದಾಟಲು ಯತ್ನಿಸಿದ್ದ ಯುವಕ ದಿಗ್ವಿಜಯ ಕುಲಕರ್ಣಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ. ನದಿಯ ಮಧ್ಯೆ ಸಿಕ್ಕ ಮರ ಹತ್ತಿ ಕುಳಿತು ಸಹಾಯಕ್ಕಾಗಿ ನಿರೀಕ್ಷಿಸುತ್ತಿದ್ದ.

ವೇದಗಂಗಾ ನದಿಯಲ್ಲಿ ಕೊಚ್ಚಿಹೋಗಿ ಮರ ಹತ್ತಿ ಕುಳಿತಿದ್ದ ಯುವಕನನ್ನು ರೋಚಕ ಕಾರ್ಯಾಚರಣೆಯ ಮೂಲಕ ರಕ್ಷಿಸಿದ ಸ್ಥಳೀಯರು
ನದಿಯಲ್ಲಿ ಕೊಚ್ಚಿಹೋಗಿದ್ದ ಯುವಕನ ರಕ್ಷಣೆ
Follow us
TV9 Web
| Updated By: guruganesh bhat

Updated on: Jun 19, 2021 | 5:03 PM

ಬೆಳಗಾವಿ: ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸಿದ್ನಾಳ ಗ್ರಾಮದ ಬಳಿ ವೇದಗಂಗಾ ನದಿ ದಾಟುತ್ತಿದ್ದಾಗ ಕೊಚ್ಚಿಹೋಗಿದ್ದ ಯುವಕನನ್ನು ಸತತ 5 ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ. ಎನ್​ಡಿಆರ್​ಎಫ್​ ತಂಡ ರಕ್ಷಣಾ ಕಾರ್ಯಾಚರನೆ ನಡೆಸುತ್ತಿದ್ದರೂ ಸ್ಥಳೀಯರೇ ನದಿಯಲ್ಲಿ ಕೊಚ್ಚಿಹೋಗಿದ್ದ ದಿಗ್ವಿಜಯ್ ಕುಲಕರ್ಣಿ ಎಂಬ ಯುವಕನ್ನು ರಕ್ಷಿಸಿದ್ದಾರೆ.

ಸೇತುವೆ ಮೇಲೆ ಹರಿಯುತ್ತಿದ್ದ ವೇದಗಂಗಾ ನದಿ ದಾಟಲು ಯತ್ನಿಸಿದ್ದ ಯುವಕ ದಿಗ್ವಿಜಯ ಕುಲಕರ್ಣಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ. ನದಿಯ ಮಧ್ಯೆ ಸಿಕ್ಕ ಮರ ಹತ್ತಿ ಕುಳಿತು ಸಹಾಯಕ್ಕಾಗಿ ನಿರೀಕ್ಷಿಸುತ್ತಿದ್ದ. ಯುವಕನ ರಕ್ಷಣೆಗೆ ಸತತ ಐದು ಗಂಟೆಗಳಿಂದ ಎನ್​ಡಿಆರ್​ಎಫ್ ಯತ್ನಿಸುತ್ತಿತ್ತು. ಆದರೆ ಸ್ಥಳಿಯರು ಎನ್​ಡಿಆರ್​ಎಫ್ ಪ್ರಯತ್ನದ ನಡುವೆಯೂ ತಾವೇ ರಕ್ಷಣೆಗೆ ಮುಂದಾಗಿದ್ದರು. ಯುವಕನಿಗೆ ಹಗ್ಗ ಕಟ್ಟಿದ ಟ್ಯೂಬ್ ನೀಡಿ ಸ್ಥಳೀಯ ನಾಗರಿಕರು ದಡಕ್ಕೆಳೆದು ತಂದಿದ್ದಾರೆ. ಈ ರೋಚಕ ಕಾರ್ಯಾಚರಣೆ ಸ್ಥಳೀಯರ ಮೊಬೈಲ್​ಗಳಲ್ಲಿ ಸೆರೆಯಾಗಿದೆ.

ಮಲಪ್ರಭಾ ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಮಲಪ್ರಭಾ ನದಿಯಲ್ಲಿ ಕೊಚ್ಚಿಹೋಗಿದ್ದ ಯಕ್ಕುಂಡಿ ಬಳಿ ಹುಸೇನ್ ಸಾಬ್ ಅತ್ತಾರ(52) ಎಂಬುವವರ ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದ ಹುಸೇನ್ ಸಾಬ್ ಅತ್ತಾರ ಮಕ್ಕಳ ಜೊತೆ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಆದರೆ ತೆಪ್ಪದಲ್ಲಿ ಸಂಚರಿಸುವಾಗ ತೆಪ್ಪ ಮುಳುಗಿ ಕೊಚ್ಚಿಹೋಗಿದ್ದರು. ಅವರ ಈಜಿ ಇಬ್ಬರು ಮಕ್ಕಳು ಈಜಿ ದಡ ಸೇರಿದ್ದರು.

ಮಳೆಯಿಂದ ಆಗುವ ಅನಾಹುತ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಯಡಿಯೂರಪ್ಪ ಸೂಚನೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಮಳೆಯಿಂದ ಆಗುವ ಅನಾಹುತ ತಡೆಯಲು ಕ್ರಮ ಕೈಗೊಳ್ಳಲಾಗುವುದು. ಮುಳುಗಡೆಯಾಗುವ ಸ್ಥಳಗಳನ್ನು ಈಗಾಗಲೇ ಗುರುತಿಸಿಸಲಾಗಿದ್ದು, ನದಿ ಪಾತ್ರದ ಜನತೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುವುದು. 20 ಜಿಲ್ಲೆಗಳ ಡಿಸಿ, ಜಿಲ್ಲಾ‌ ಉಸ್ತುವಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್​ ನಡೆಸಿ ಮಾಹಿತಿ ಪಡೆಯಲಾಗಿದೆ. ಕೇಂದ್ರ ಸರ್ಕಾರ ಎಲ್ಲಾ ನೆರವು ನೀಡುವುದಾಗಿ ಘೋಷಿಸಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಈ ವರ್ಷ ಮುಂಗಾರು ಬೇಗ ಆರಂಭ ಆಗಿದೆ. ಕೆರೆ ಕಟ್ಟೆಗಳು ತುಂಬುವ ಹಂತದಲ್ಲಿವೆ. ಬಿತ್ತನೆ ಕಾರ್ಯ ಆಗುತ್ತಿದೆ. ಮುಂದಾಗುವ ಅನಾಹುತಗಳ ತಪ್ಪಿಸುವಂತೆ ಎಚ್ಚರಿಕೆ ನೀಡಿದ್ದೇವೆ. ಮುಳುಗಡೆ ಪ್ರದೇಶದಲ್ಲಿರುವವರನ್ನು ಸ್ಥಳಾಂತರ ಮಾಡೋಕೆ ಸೂಚಿಸಿದ್ದೇನೆ. ಎನ್‌ಡಿಆರ್‌ಎಫ್, ಹೆಲಿಕಾಪ್ಟರ್ ವ್ಯವಸ್ಥೆಯನ್ನು ಮಾಡಿ ಕೊಟ್ಟಿರುವ ಪ್ರಧಾನಿಯವರಿಗೆ ಧನ್ಯವಾದ ತಿಳಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಜಿಲ್ಲೆ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಸಹಾಯವಾಣಿ ಸ್ಥಾಪನೆ, ದೂರವಾಣಿ ಮತ್ತಿತರ ಸಂಪರ್ಕ ಸಾಧನಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಬೇಕು. ತುರ್ತು ನಿರ್ವಹಣೆಗೆ ಬೇಕಾದ ಸಾಮಗ್ರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಖರೀದಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಮೂಲಸೌಕರ್ಯಗಳುಳ್ಳ ಕಾಳಜಿ ಕೇಂದ್ರಗಳು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರವಾಹ ನಿರ್ವಹಣೆಗಾಗಿ ಸ್ಥಳೀಯ ಸಂಪನ್ಮೂಲಗಳ ಸದ್ಬಳಕೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳು, ಸ್ವಯಂ ಸೇವಕರ ಸಹಕಾರವನ್ನು ಪಡೆದುಕೊಳ್ಳಬೇಕು. ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರವಾಹದ ಪರಿಣಾಮ ಅತ್ಯಂತ ಕಡಿಮೆಯಾಗುವಂತೆ ಕಾರ್ಯನಿರ್ವಹಿಸಬೇಕು. ಪ್ರವಾಹದ ಹಿನ್ನೆಲೆಯಲ್ಲಿ ಸ್ಥಳಾಂತರಿಸಿದ ಕೆಲವು ಗ್ರಾಮಗಳಿಗೆ ಗ್ರಾಮಸ್ಥರು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಈ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಿ, ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಜಿಲ್ಲಾಡಳಿತಗಳ ಜತೆಗಿನ ಸಭೆಯಲ್ಲಿ ಸೂಚನೆ ನೀಡಿದರು.

ಇದನ್ನೂ ಓದಿ: Karnataka Monsoon 2021: ಮೈಸೂರಿನ ಕಬಿನಿ ಜಲಾಶಯದಲ್ಲಿ ಗರಿಷ್ಠ ನೀರು ಶೇಖರಣೆ; ಮಳೆಯಿಂದ ಸಂತಸ

WTC Final: ಭಾರತ ತಂಡದ ಕಾಲೆಳೆದ ಮಾಜಿ ಮೈಕೆಲ್​ ವಾನರನನ್ನು ನೆಟ್ಟಿಗರು ಮಳೆ ನೀರಿನಲ್ಲಿ ಝಾಡಿಸಿ, ಜಾರಿಸಿದರು!

(Localites rescue a youth who washed up in the Vedanganga River have been rescued by a thrilling operation)

51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್