AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಠಿಣ‌ ನಿಯಮದ ಎಫೆಕ್ಟ್; ಊಟವನ್ನು ಹೊಳೆಗೆ ಸುರಿದ ವ್ಯಾಪಾರಿಗಳು

ಎಂಟು ಫಾಸ್ಟ್‌ಪುಡ್ ಅಂಗಡಿಗಳು ಹಾಗೂ ಬೇಕರಿಯ ಆಹಾರ ಪದಾರ್ಥಗಳನ್ನು ವ್ಯಾಪಾರಿಗಳು ಸುರಿದಿದ್ದಾರೆ. ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕೊರೊನಾ ಕಠಿಣ‌ ನಿಯಮದ ಎಫೆಕ್ಟ್; ಊಟವನ್ನು ಹೊಳೆಗೆ ಸುರಿದ ವ್ಯಾಪಾರಿಗಳು
ಮೈಸೂರಿನಲ್ಲಿ ಊಟವನ್ನು ಹೊಳೆಗೆ ಸುರಿದ ಬೀದಿ ಬದಿಯ ವ್ಯಾಪಾರಿಗಳು
ಮದನ್​ ಕುಮಾರ್​
|

Updated on: Apr 24, 2021 | 8:08 AM

Share

ಮೈಸೂರು: ಒಂದೆಡೆ ಕೊರೊನಾ ನಿಯಂತ್ರಣ ಮಾಡಬೇಕಾದ ಅನಿವಾರ್ಯತೆ, ಇನ್ನೊಂದೆಡೆ ಬದುಕು ಸಾಗಿಸಲೇಬೇಕಾದ ಅನಿವಾರ್ಯತೆ. ಈ ಎರಡರ ನಡುವೆ ಜನರು ಸಿಕ್ಕಿಕೊಂಡು ಒದ್ದಾಡುವಂತ ಪರಿಸ್ಥಿತಿ ಎಲ್ಲೆಲ್ಲೂ ನಿರ್ಮಾಣ ಆಗಿದೆ. ಪ್ರತಿ ನಿತ್ಯ ದುಡಿದರೆ ಮಾತ್ರ ಹೊಟ್ಟೆಪಾಡು ನಡೆಯುತ್ತದೆ ಎಂಬಂತಹ ಜನರ ಬದುಕಿಗೆ ಲಾಕ್​ಡೌನ್​ ನಿಯಮಗಳಿಂದ ಹೆಚ್ಚು ತೊಂದರೆ ಆಗಿದೆ. ಮೈಸೂರಿನಲ್ಲಿ ಬೀದಿ ಬದಿಯ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಮೈಸೂರಿನಲ್ಲಿ ಬೀದಿ ಬದಿಯ ವ್ಯಾಪಾರಿಗಳು ಚಿಂತೆಗೀಡಾಗಿದ್ದಾರೆ. ಕಠಿಣ ಲಾಕ್​ಡೌನ್​ ನಿಯಮಗಳಿಂದಾಗಿ ಅವರ ವ್ಯಾಪಾರಕ್ಕೆ ಹೊಡೆತಬಿದ್ದಿದೆ. ವ್ಯಾಪಾರಕ್ಕೆಂದು ಸಿದ್ಧ ಮಾಡಿಕೊಂಡು ತಂದಿದ್ದ ಅಡುಗೆಯನ್ನು ಹೊಳೆಗೆ ಸುರಿದಿರುವುದು ವರದಿ ಆಗಿದೆ. ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ನಡೆದಿರುವ ಘಟ‌ನೆಯ ವಿಡಿಯೋ ಕೂಡ ವೈರಲ್​ ಆಗುತ್ತಿದೆ.

ನಗರದ ಬೀದಿ ಬದಿಯಲ್ಲಿ ಫಾಸ್ಟ್​ಫುಡ್​, ಬೇಕರಿ ಮುಂತಾದ ಅಂಗಡಿಗಳನ್ನು ಇಟ್ಟುಕೊಂಡು ಅನೇಕರು ಜೀವನ ಸಾಗಿಸುತ್ತಿದ್ದಾರೆ. ಲಾಕ್​ಡೌನ್​ ಆದೇಶದಿಂದಾಗಿ ಅವರೆಲ್ಲರ ವ್ಯಾಪಾರಕ್ಕೆ ತೊಂದರೆ ಆಗಿದೆ. ಈಗಾಗಲೇ ಸಿದ್ಧಪಡಿಸಿಕೊಂಡು ತಂದಿದ್ದ ಆಹಾರ ಪದಾರ್ಥಗಳನ್ನು ಹೊಳೆಗೆ ಸುರಿಯದೇ ಬೇರೆ ದಾರಿ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

‘ಊಟ ಹಳಸಿಹೋದರೆ ಅದರ ಕಥೆ ಮುಗಿಯಿತು. ಅದನ್ನು ತಿನ್ನುವುಂತಿಲ್ಲ. ಚಿಕನ್​ ಅಂಗಡಿಯವರಿಗೆ ನಾವು ದುಡ್ಡು ಎಲ್ಲಿಂದ ಕೊಡುವುದು? ನಾಳೆ ಸಂಘಕ್ಕೆ ದುಡ್ಡು ಕಟ್ಟಬೇಕು. ಬಡವರಿಗೆ ಹೀಗೆ ಮಾಡಿದರೆ ಕಷ್ಟ ಆಗುತ್ತದೆ. ತಿನ್ನುವ ಅನ್ನಕ್ಕೆ ಮಣ್ಣು ಹಾಕುತ್ತಿದ್ದಾರೆ’ ಎಂದು ಬೀದಿ ಬದಿಯ ಫಾಸ್ಟ್​ಫುಡ್​ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಎಂಟು ಫಾಸ್ಟ್‌ಪುಡ್ ಅಂಗಡಿಗಳು ಹಾಗೂ ಬೇಕರಿಯ ಆಹಾರ ಪದಾರ್ಥಗಳನ್ನು ವ್ಯಾಪಾರಿಗಳು ಸುರಿದಿದ್ದಾರೆ. ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: Corona Positive Report : ಕಣ್ಣಲ್ಲೇ ಅಳೆದು ಕೊರೊನಾ ಪಾಸಿಟಿವ್‌ ರಿಪೋರ್ಟ್‌ ಕೊಡ್ತಾರೆ ಆನೆಕಲ್‌ನ ಆಕ್ಷಫರ್ಡ್‌ ಆಸ್ಪತ್ರೆಯಲ್ಲಿ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ