ಕೊರೊನಾ ಕಠಿಣ‌ ನಿಯಮದ ಎಫೆಕ್ಟ್; ಊಟವನ್ನು ಹೊಳೆಗೆ ಸುರಿದ ವ್ಯಾಪಾರಿಗಳು

ಎಂಟು ಫಾಸ್ಟ್‌ಪುಡ್ ಅಂಗಡಿಗಳು ಹಾಗೂ ಬೇಕರಿಯ ಆಹಾರ ಪದಾರ್ಥಗಳನ್ನು ವ್ಯಾಪಾರಿಗಳು ಸುರಿದಿದ್ದಾರೆ. ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕೊರೊನಾ ಕಠಿಣ‌ ನಿಯಮದ ಎಫೆಕ್ಟ್; ಊಟವನ್ನು ಹೊಳೆಗೆ ಸುರಿದ ವ್ಯಾಪಾರಿಗಳು
ಮೈಸೂರಿನಲ್ಲಿ ಊಟವನ್ನು ಹೊಳೆಗೆ ಸುರಿದ ಬೀದಿ ಬದಿಯ ವ್ಯಾಪಾರಿಗಳು
Follow us
|

Updated on: Apr 24, 2021 | 8:08 AM

ಮೈಸೂರು: ಒಂದೆಡೆ ಕೊರೊನಾ ನಿಯಂತ್ರಣ ಮಾಡಬೇಕಾದ ಅನಿವಾರ್ಯತೆ, ಇನ್ನೊಂದೆಡೆ ಬದುಕು ಸಾಗಿಸಲೇಬೇಕಾದ ಅನಿವಾರ್ಯತೆ. ಈ ಎರಡರ ನಡುವೆ ಜನರು ಸಿಕ್ಕಿಕೊಂಡು ಒದ್ದಾಡುವಂತ ಪರಿಸ್ಥಿತಿ ಎಲ್ಲೆಲ್ಲೂ ನಿರ್ಮಾಣ ಆಗಿದೆ. ಪ್ರತಿ ನಿತ್ಯ ದುಡಿದರೆ ಮಾತ್ರ ಹೊಟ್ಟೆಪಾಡು ನಡೆಯುತ್ತದೆ ಎಂಬಂತಹ ಜನರ ಬದುಕಿಗೆ ಲಾಕ್​ಡೌನ್​ ನಿಯಮಗಳಿಂದ ಹೆಚ್ಚು ತೊಂದರೆ ಆಗಿದೆ. ಮೈಸೂರಿನಲ್ಲಿ ಬೀದಿ ಬದಿಯ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಮೈಸೂರಿನಲ್ಲಿ ಬೀದಿ ಬದಿಯ ವ್ಯಾಪಾರಿಗಳು ಚಿಂತೆಗೀಡಾಗಿದ್ದಾರೆ. ಕಠಿಣ ಲಾಕ್​ಡೌನ್​ ನಿಯಮಗಳಿಂದಾಗಿ ಅವರ ವ್ಯಾಪಾರಕ್ಕೆ ಹೊಡೆತಬಿದ್ದಿದೆ. ವ್ಯಾಪಾರಕ್ಕೆಂದು ಸಿದ್ಧ ಮಾಡಿಕೊಂಡು ತಂದಿದ್ದ ಅಡುಗೆಯನ್ನು ಹೊಳೆಗೆ ಸುರಿದಿರುವುದು ವರದಿ ಆಗಿದೆ. ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ನಡೆದಿರುವ ಘಟ‌ನೆಯ ವಿಡಿಯೋ ಕೂಡ ವೈರಲ್​ ಆಗುತ್ತಿದೆ.

ನಗರದ ಬೀದಿ ಬದಿಯಲ್ಲಿ ಫಾಸ್ಟ್​ಫುಡ್​, ಬೇಕರಿ ಮುಂತಾದ ಅಂಗಡಿಗಳನ್ನು ಇಟ್ಟುಕೊಂಡು ಅನೇಕರು ಜೀವನ ಸಾಗಿಸುತ್ತಿದ್ದಾರೆ. ಲಾಕ್​ಡೌನ್​ ಆದೇಶದಿಂದಾಗಿ ಅವರೆಲ್ಲರ ವ್ಯಾಪಾರಕ್ಕೆ ತೊಂದರೆ ಆಗಿದೆ. ಈಗಾಗಲೇ ಸಿದ್ಧಪಡಿಸಿಕೊಂಡು ತಂದಿದ್ದ ಆಹಾರ ಪದಾರ್ಥಗಳನ್ನು ಹೊಳೆಗೆ ಸುರಿಯದೇ ಬೇರೆ ದಾರಿ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

‘ಊಟ ಹಳಸಿಹೋದರೆ ಅದರ ಕಥೆ ಮುಗಿಯಿತು. ಅದನ್ನು ತಿನ್ನುವುಂತಿಲ್ಲ. ಚಿಕನ್​ ಅಂಗಡಿಯವರಿಗೆ ನಾವು ದುಡ್ಡು ಎಲ್ಲಿಂದ ಕೊಡುವುದು? ನಾಳೆ ಸಂಘಕ್ಕೆ ದುಡ್ಡು ಕಟ್ಟಬೇಕು. ಬಡವರಿಗೆ ಹೀಗೆ ಮಾಡಿದರೆ ಕಷ್ಟ ಆಗುತ್ತದೆ. ತಿನ್ನುವ ಅನ್ನಕ್ಕೆ ಮಣ್ಣು ಹಾಕುತ್ತಿದ್ದಾರೆ’ ಎಂದು ಬೀದಿ ಬದಿಯ ಫಾಸ್ಟ್​ಫುಡ್​ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಎಂಟು ಫಾಸ್ಟ್‌ಪುಡ್ ಅಂಗಡಿಗಳು ಹಾಗೂ ಬೇಕರಿಯ ಆಹಾರ ಪದಾರ್ಥಗಳನ್ನು ವ್ಯಾಪಾರಿಗಳು ಸುರಿದಿದ್ದಾರೆ. ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: Corona Positive Report : ಕಣ್ಣಲ್ಲೇ ಅಳೆದು ಕೊರೊನಾ ಪಾಸಿಟಿವ್‌ ರಿಪೋರ್ಟ್‌ ಕೊಡ್ತಾರೆ ಆನೆಕಲ್‌ನ ಆಕ್ಷಫರ್ಡ್‌ ಆಸ್ಪತ್ರೆಯಲ್ಲಿ

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ