AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಠಿಣ‌ ನಿಯಮದ ಎಫೆಕ್ಟ್; ಊಟವನ್ನು ಹೊಳೆಗೆ ಸುರಿದ ವ್ಯಾಪಾರಿಗಳು

ಎಂಟು ಫಾಸ್ಟ್‌ಪುಡ್ ಅಂಗಡಿಗಳು ಹಾಗೂ ಬೇಕರಿಯ ಆಹಾರ ಪದಾರ್ಥಗಳನ್ನು ವ್ಯಾಪಾರಿಗಳು ಸುರಿದಿದ್ದಾರೆ. ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕೊರೊನಾ ಕಠಿಣ‌ ನಿಯಮದ ಎಫೆಕ್ಟ್; ಊಟವನ್ನು ಹೊಳೆಗೆ ಸುರಿದ ವ್ಯಾಪಾರಿಗಳು
ಮೈಸೂರಿನಲ್ಲಿ ಊಟವನ್ನು ಹೊಳೆಗೆ ಸುರಿದ ಬೀದಿ ಬದಿಯ ವ್ಯಾಪಾರಿಗಳು
ಮದನ್​ ಕುಮಾರ್​
|

Updated on: Apr 24, 2021 | 8:08 AM

Share

ಮೈಸೂರು: ಒಂದೆಡೆ ಕೊರೊನಾ ನಿಯಂತ್ರಣ ಮಾಡಬೇಕಾದ ಅನಿವಾರ್ಯತೆ, ಇನ್ನೊಂದೆಡೆ ಬದುಕು ಸಾಗಿಸಲೇಬೇಕಾದ ಅನಿವಾರ್ಯತೆ. ಈ ಎರಡರ ನಡುವೆ ಜನರು ಸಿಕ್ಕಿಕೊಂಡು ಒದ್ದಾಡುವಂತ ಪರಿಸ್ಥಿತಿ ಎಲ್ಲೆಲ್ಲೂ ನಿರ್ಮಾಣ ಆಗಿದೆ. ಪ್ರತಿ ನಿತ್ಯ ದುಡಿದರೆ ಮಾತ್ರ ಹೊಟ್ಟೆಪಾಡು ನಡೆಯುತ್ತದೆ ಎಂಬಂತಹ ಜನರ ಬದುಕಿಗೆ ಲಾಕ್​ಡೌನ್​ ನಿಯಮಗಳಿಂದ ಹೆಚ್ಚು ತೊಂದರೆ ಆಗಿದೆ. ಮೈಸೂರಿನಲ್ಲಿ ಬೀದಿ ಬದಿಯ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಮೈಸೂರಿನಲ್ಲಿ ಬೀದಿ ಬದಿಯ ವ್ಯಾಪಾರಿಗಳು ಚಿಂತೆಗೀಡಾಗಿದ್ದಾರೆ. ಕಠಿಣ ಲಾಕ್​ಡೌನ್​ ನಿಯಮಗಳಿಂದಾಗಿ ಅವರ ವ್ಯಾಪಾರಕ್ಕೆ ಹೊಡೆತಬಿದ್ದಿದೆ. ವ್ಯಾಪಾರಕ್ಕೆಂದು ಸಿದ್ಧ ಮಾಡಿಕೊಂಡು ತಂದಿದ್ದ ಅಡುಗೆಯನ್ನು ಹೊಳೆಗೆ ಸುರಿದಿರುವುದು ವರದಿ ಆಗಿದೆ. ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ನಡೆದಿರುವ ಘಟ‌ನೆಯ ವಿಡಿಯೋ ಕೂಡ ವೈರಲ್​ ಆಗುತ್ತಿದೆ.

ನಗರದ ಬೀದಿ ಬದಿಯಲ್ಲಿ ಫಾಸ್ಟ್​ಫುಡ್​, ಬೇಕರಿ ಮುಂತಾದ ಅಂಗಡಿಗಳನ್ನು ಇಟ್ಟುಕೊಂಡು ಅನೇಕರು ಜೀವನ ಸಾಗಿಸುತ್ತಿದ್ದಾರೆ. ಲಾಕ್​ಡೌನ್​ ಆದೇಶದಿಂದಾಗಿ ಅವರೆಲ್ಲರ ವ್ಯಾಪಾರಕ್ಕೆ ತೊಂದರೆ ಆಗಿದೆ. ಈಗಾಗಲೇ ಸಿದ್ಧಪಡಿಸಿಕೊಂಡು ತಂದಿದ್ದ ಆಹಾರ ಪದಾರ್ಥಗಳನ್ನು ಹೊಳೆಗೆ ಸುರಿಯದೇ ಬೇರೆ ದಾರಿ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

‘ಊಟ ಹಳಸಿಹೋದರೆ ಅದರ ಕಥೆ ಮುಗಿಯಿತು. ಅದನ್ನು ತಿನ್ನುವುಂತಿಲ್ಲ. ಚಿಕನ್​ ಅಂಗಡಿಯವರಿಗೆ ನಾವು ದುಡ್ಡು ಎಲ್ಲಿಂದ ಕೊಡುವುದು? ನಾಳೆ ಸಂಘಕ್ಕೆ ದುಡ್ಡು ಕಟ್ಟಬೇಕು. ಬಡವರಿಗೆ ಹೀಗೆ ಮಾಡಿದರೆ ಕಷ್ಟ ಆಗುತ್ತದೆ. ತಿನ್ನುವ ಅನ್ನಕ್ಕೆ ಮಣ್ಣು ಹಾಕುತ್ತಿದ್ದಾರೆ’ ಎಂದು ಬೀದಿ ಬದಿಯ ಫಾಸ್ಟ್​ಫುಡ್​ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಎಂಟು ಫಾಸ್ಟ್‌ಪುಡ್ ಅಂಗಡಿಗಳು ಹಾಗೂ ಬೇಕರಿಯ ಆಹಾರ ಪದಾರ್ಥಗಳನ್ನು ವ್ಯಾಪಾರಿಗಳು ಸುರಿದಿದ್ದಾರೆ. ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: Corona Positive Report : ಕಣ್ಣಲ್ಲೇ ಅಳೆದು ಕೊರೊನಾ ಪಾಸಿಟಿವ್‌ ರಿಪೋರ್ಟ್‌ ಕೊಡ್ತಾರೆ ಆನೆಕಲ್‌ನ ಆಕ್ಷಫರ್ಡ್‌ ಆಸ್ಪತ್ರೆಯಲ್ಲಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ