ಕೊರೊನಾ ಕಠಿಣ‌ ನಿಯಮದ ಎಫೆಕ್ಟ್; ಊಟವನ್ನು ಹೊಳೆಗೆ ಸುರಿದ ವ್ಯಾಪಾರಿಗಳು

ಎಂಟು ಫಾಸ್ಟ್‌ಪುಡ್ ಅಂಗಡಿಗಳು ಹಾಗೂ ಬೇಕರಿಯ ಆಹಾರ ಪದಾರ್ಥಗಳನ್ನು ವ್ಯಾಪಾರಿಗಳು ಸುರಿದಿದ್ದಾರೆ. ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕೊರೊನಾ ಕಠಿಣ‌ ನಿಯಮದ ಎಫೆಕ್ಟ್; ಊಟವನ್ನು ಹೊಳೆಗೆ ಸುರಿದ ವ್ಯಾಪಾರಿಗಳು
ಮೈಸೂರಿನಲ್ಲಿ ಊಟವನ್ನು ಹೊಳೆಗೆ ಸುರಿದ ಬೀದಿ ಬದಿಯ ವ್ಯಾಪಾರಿಗಳು

Updated on: Apr 24, 2021 | 8:08 AM

ಮೈಸೂರು: ಒಂದೆಡೆ ಕೊರೊನಾ ನಿಯಂತ್ರಣ ಮಾಡಬೇಕಾದ ಅನಿವಾರ್ಯತೆ, ಇನ್ನೊಂದೆಡೆ ಬದುಕು ಸಾಗಿಸಲೇಬೇಕಾದ ಅನಿವಾರ್ಯತೆ. ಈ ಎರಡರ ನಡುವೆ ಜನರು ಸಿಕ್ಕಿಕೊಂಡು ಒದ್ದಾಡುವಂತ ಪರಿಸ್ಥಿತಿ ಎಲ್ಲೆಲ್ಲೂ ನಿರ್ಮಾಣ ಆಗಿದೆ. ಪ್ರತಿ ನಿತ್ಯ ದುಡಿದರೆ ಮಾತ್ರ ಹೊಟ್ಟೆಪಾಡು ನಡೆಯುತ್ತದೆ ಎಂಬಂತಹ ಜನರ ಬದುಕಿಗೆ ಲಾಕ್​ಡೌನ್​ ನಿಯಮಗಳಿಂದ ಹೆಚ್ಚು ತೊಂದರೆ ಆಗಿದೆ. ಮೈಸೂರಿನಲ್ಲಿ ಬೀದಿ ಬದಿಯ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಮೈಸೂರಿನಲ್ಲಿ ಬೀದಿ ಬದಿಯ ವ್ಯಾಪಾರಿಗಳು ಚಿಂತೆಗೀಡಾಗಿದ್ದಾರೆ. ಕಠಿಣ ಲಾಕ್​ಡೌನ್​ ನಿಯಮಗಳಿಂದಾಗಿ ಅವರ ವ್ಯಾಪಾರಕ್ಕೆ ಹೊಡೆತಬಿದ್ದಿದೆ. ವ್ಯಾಪಾರಕ್ಕೆಂದು ಸಿದ್ಧ ಮಾಡಿಕೊಂಡು ತಂದಿದ್ದ ಅಡುಗೆಯನ್ನು ಹೊಳೆಗೆ ಸುರಿದಿರುವುದು ವರದಿ ಆಗಿದೆ. ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ನಡೆದಿರುವ ಘಟ‌ನೆಯ ವಿಡಿಯೋ ಕೂಡ ವೈರಲ್​ ಆಗುತ್ತಿದೆ.

ನಗರದ ಬೀದಿ ಬದಿಯಲ್ಲಿ ಫಾಸ್ಟ್​ಫುಡ್​, ಬೇಕರಿ ಮುಂತಾದ ಅಂಗಡಿಗಳನ್ನು ಇಟ್ಟುಕೊಂಡು ಅನೇಕರು ಜೀವನ ಸಾಗಿಸುತ್ತಿದ್ದಾರೆ. ಲಾಕ್​ಡೌನ್​ ಆದೇಶದಿಂದಾಗಿ ಅವರೆಲ್ಲರ ವ್ಯಾಪಾರಕ್ಕೆ ತೊಂದರೆ ಆಗಿದೆ. ಈಗಾಗಲೇ ಸಿದ್ಧಪಡಿಸಿಕೊಂಡು ತಂದಿದ್ದ ಆಹಾರ ಪದಾರ್ಥಗಳನ್ನು ಹೊಳೆಗೆ ಸುರಿಯದೇ ಬೇರೆ ದಾರಿ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

‘ಊಟ ಹಳಸಿಹೋದರೆ ಅದರ ಕಥೆ ಮುಗಿಯಿತು. ಅದನ್ನು ತಿನ್ನುವುಂತಿಲ್ಲ. ಚಿಕನ್​ ಅಂಗಡಿಯವರಿಗೆ ನಾವು ದುಡ್ಡು ಎಲ್ಲಿಂದ ಕೊಡುವುದು? ನಾಳೆ ಸಂಘಕ್ಕೆ ದುಡ್ಡು ಕಟ್ಟಬೇಕು. ಬಡವರಿಗೆ ಹೀಗೆ ಮಾಡಿದರೆ ಕಷ್ಟ ಆಗುತ್ತದೆ. ತಿನ್ನುವ ಅನ್ನಕ್ಕೆ ಮಣ್ಣು ಹಾಕುತ್ತಿದ್ದಾರೆ’ ಎಂದು ಬೀದಿ ಬದಿಯ ಫಾಸ್ಟ್​ಫುಡ್​ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಎಂಟು ಫಾಸ್ಟ್‌ಪುಡ್ ಅಂಗಡಿಗಳು ಹಾಗೂ ಬೇಕರಿಯ ಆಹಾರ ಪದಾರ್ಥಗಳನ್ನು ವ್ಯಾಪಾರಿಗಳು ಸುರಿದಿದ್ದಾರೆ. ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: Corona Positive Report : ಕಣ್ಣಲ್ಲೇ ಅಳೆದು ಕೊರೊನಾ ಪಾಸಿಟಿವ್‌ ರಿಪೋರ್ಟ್‌ ಕೊಡ್ತಾರೆ ಆನೆಕಲ್‌ನ ಆಕ್ಷಫರ್ಡ್‌ ಆಸ್ಪತ್ರೆಯಲ್ಲಿ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us