AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್​

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಬಾರದು. ದ್ವಂದ್ವ ನಿಲುವು ತಾಳದೇ ಸ್ಪಷ್ಟ ಸಂದೇಶವನ್ನು ನೀಡಬೇಕು. ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದದ್ದು, ಈ ಕಹಿಸತ್ಯ ಹಿಂದಿನ ಅನುಭವದಿಂದಲೇ ತಿಳಿದಿದೆ: ಕಾಂಗ್ರೆಸ್​

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್​
ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್
Skanda
| Edited By: |

Updated on:Apr 16, 2021 | 10:15 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ವೇಗಕ್ಕೆ ರಾಜ್ಯ ಸರ್ಕಾರ ಕಂಗಾಲಾಗಿ ಹೋಗಿದ್ದು, ಕಠಿಣ ನಿಯಮಾವಳಿಗಳನ್ನು ರೂಪಿಸುವ ಸಲುವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತುರ್ತು ಸಭೆ ನಡೆಸುತ್ತಿದ್ದಾರೆ. ನಾಳೆ (ಏಪ್ರಿಲ್ 17) ಉಪಚುನಾವಣೆ ಮುಗಿದ ಬಳಿಕ ಏಪ್ರಿಲ್​ 18ರಂದು ಸರ್ವಪಕ್ಷ ಸಭೆ ಕರೆದು ಲಾಕ್​ಡೌನ್ ಬಗ್ಗೆ ಚರ್ಚಿಸುವುದಾಗಿಯೂ ಈಗಾಗಲೇ ತಿಳಿಸಿದ್ದಾರೆ. ಆದರೆ, ಸಭೆಗೂ ಮುನ್ನವೇ ಲಾಕ್​ಡೌನ್ ಹೇರುವ ಬಗ್ಗೆ ಕಾಂಗ್ರೆಸ್ ತನ್ನ ಅಭಿಪ್ರಾಯವನ್ನು ತಿಳಿಸಿದ್ದು, ಟ್ವೀಟ್ ಮಾಡುವ ಮೂಲಕ ಲಾಕ್​ಡೌನ್​ ಅತ್ಯಂತ ಭೀಕರವಾದದ್ದು ಎಂದು ಹೇಳಿದೆ.

ನಾಳೆ ನಡೆಯಲಿದೆ ಕೊರೊನಾ ಸರ್ವಪಕ್ಷ ಸಭೆ ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಬಾರದು. ದ್ವಂದ್ವ ನಿಲುವು ತಾಳದೇ ಸ್ಪಷ್ಟ ಸಂದೇಶವನ್ನು ನೀಡಬೇಕು. ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದದ್ದು, ಈ ಕಹಿಸತ್ಯ ಹಿಂದಿನ ಅನುಭವದಿಂದಲೇ ತಿಳಿದಿದೆ. ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪನಿಗಳವರೆಗೂ ಲಾಕ್‌ಡೌನ್‌ಗೆ ಒಗ್ಗುವುದು ಕಷ್ಟಕರ ಎಂದು ರಾಜ್ಯ ಕಾಂಗ್ರೆಸ್ ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದೆ. ಆ ಮೂಲಕ ನಾಳೆ ನಡೆಯುವ ಸರ್ವಪಕ್ಷ ಸಭೆಯಲ್ಲಿಯೂ ಲಾಕ್​ಡೌನ್​ ಕುರಿತಾಗಿ ಕಾಂಗ್ರೆಸ್ ಅಸಮಾಧಾನವನ್ನು ವ್ಯಕ್ತಪಡಿಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ಕೈ ಮೀರುತ್ತಿದೆ ಕೊರೊನಾ ಪರಿಸ್ಥಿತಿ.. ಚುನಾವಣೆ ಅವಸರ ಮುಗಿಯುತ್ತಿದ್ದಂತೆ ಇಂದೇ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

Published On - 10:09 am, Fri, 16 April 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ