AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್​

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಬಾರದು. ದ್ವಂದ್ವ ನಿಲುವು ತಾಳದೇ ಸ್ಪಷ್ಟ ಸಂದೇಶವನ್ನು ನೀಡಬೇಕು. ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದದ್ದು, ಈ ಕಹಿಸತ್ಯ ಹಿಂದಿನ ಅನುಭವದಿಂದಲೇ ತಿಳಿದಿದೆ: ಕಾಂಗ್ರೆಸ್​

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್​
ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್
Skanda
| Updated By: ಸಾಧು ಶ್ರೀನಾಥ್​|

Updated on:Apr 16, 2021 | 10:15 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ವೇಗಕ್ಕೆ ರಾಜ್ಯ ಸರ್ಕಾರ ಕಂಗಾಲಾಗಿ ಹೋಗಿದ್ದು, ಕಠಿಣ ನಿಯಮಾವಳಿಗಳನ್ನು ರೂಪಿಸುವ ಸಲುವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತುರ್ತು ಸಭೆ ನಡೆಸುತ್ತಿದ್ದಾರೆ. ನಾಳೆ (ಏಪ್ರಿಲ್ 17) ಉಪಚುನಾವಣೆ ಮುಗಿದ ಬಳಿಕ ಏಪ್ರಿಲ್​ 18ರಂದು ಸರ್ವಪಕ್ಷ ಸಭೆ ಕರೆದು ಲಾಕ್​ಡೌನ್ ಬಗ್ಗೆ ಚರ್ಚಿಸುವುದಾಗಿಯೂ ಈಗಾಗಲೇ ತಿಳಿಸಿದ್ದಾರೆ. ಆದರೆ, ಸಭೆಗೂ ಮುನ್ನವೇ ಲಾಕ್​ಡೌನ್ ಹೇರುವ ಬಗ್ಗೆ ಕಾಂಗ್ರೆಸ್ ತನ್ನ ಅಭಿಪ್ರಾಯವನ್ನು ತಿಳಿಸಿದ್ದು, ಟ್ವೀಟ್ ಮಾಡುವ ಮೂಲಕ ಲಾಕ್​ಡೌನ್​ ಅತ್ಯಂತ ಭೀಕರವಾದದ್ದು ಎಂದು ಹೇಳಿದೆ.

ನಾಳೆ ನಡೆಯಲಿದೆ ಕೊರೊನಾ ಸರ್ವಪಕ್ಷ ಸಭೆ ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಬಾರದು. ದ್ವಂದ್ವ ನಿಲುವು ತಾಳದೇ ಸ್ಪಷ್ಟ ಸಂದೇಶವನ್ನು ನೀಡಬೇಕು. ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದದ್ದು, ಈ ಕಹಿಸತ್ಯ ಹಿಂದಿನ ಅನುಭವದಿಂದಲೇ ತಿಳಿದಿದೆ. ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪನಿಗಳವರೆಗೂ ಲಾಕ್‌ಡೌನ್‌ಗೆ ಒಗ್ಗುವುದು ಕಷ್ಟಕರ ಎಂದು ರಾಜ್ಯ ಕಾಂಗ್ರೆಸ್ ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದೆ. ಆ ಮೂಲಕ ನಾಳೆ ನಡೆಯುವ ಸರ್ವಪಕ್ಷ ಸಭೆಯಲ್ಲಿಯೂ ಲಾಕ್​ಡೌನ್​ ಕುರಿತಾಗಿ ಕಾಂಗ್ರೆಸ್ ಅಸಮಾಧಾನವನ್ನು ವ್ಯಕ್ತಪಡಿಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ಕೈ ಮೀರುತ್ತಿದೆ ಕೊರೊನಾ ಪರಿಸ್ಥಿತಿ.. ಚುನಾವಣೆ ಅವಸರ ಮುಗಿಯುತ್ತಿದ್ದಂತೆ ಇಂದೇ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

Published On - 10:09 am, Fri, 16 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!