AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್​

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಬಾರದು. ದ್ವಂದ್ವ ನಿಲುವು ತಾಳದೇ ಸ್ಪಷ್ಟ ಸಂದೇಶವನ್ನು ನೀಡಬೇಕು. ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದದ್ದು, ಈ ಕಹಿಸತ್ಯ ಹಿಂದಿನ ಅನುಭವದಿಂದಲೇ ತಿಳಿದಿದೆ: ಕಾಂಗ್ರೆಸ್​

ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್​
ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್
Skanda
| Edited By: |

Updated on:Apr 16, 2021 | 10:15 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ವೇಗಕ್ಕೆ ರಾಜ್ಯ ಸರ್ಕಾರ ಕಂಗಾಲಾಗಿ ಹೋಗಿದ್ದು, ಕಠಿಣ ನಿಯಮಾವಳಿಗಳನ್ನು ರೂಪಿಸುವ ಸಲುವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತುರ್ತು ಸಭೆ ನಡೆಸುತ್ತಿದ್ದಾರೆ. ನಾಳೆ (ಏಪ್ರಿಲ್ 17) ಉಪಚುನಾವಣೆ ಮುಗಿದ ಬಳಿಕ ಏಪ್ರಿಲ್​ 18ರಂದು ಸರ್ವಪಕ್ಷ ಸಭೆ ಕರೆದು ಲಾಕ್​ಡೌನ್ ಬಗ್ಗೆ ಚರ್ಚಿಸುವುದಾಗಿಯೂ ಈಗಾಗಲೇ ತಿಳಿಸಿದ್ದಾರೆ. ಆದರೆ, ಸಭೆಗೂ ಮುನ್ನವೇ ಲಾಕ್​ಡೌನ್ ಹೇರುವ ಬಗ್ಗೆ ಕಾಂಗ್ರೆಸ್ ತನ್ನ ಅಭಿಪ್ರಾಯವನ್ನು ತಿಳಿಸಿದ್ದು, ಟ್ವೀಟ್ ಮಾಡುವ ಮೂಲಕ ಲಾಕ್​ಡೌನ್​ ಅತ್ಯಂತ ಭೀಕರವಾದದ್ದು ಎಂದು ಹೇಳಿದೆ.

ನಾಳೆ ನಡೆಯಲಿದೆ ಕೊರೊನಾ ಸರ್ವಪಕ್ಷ ಸಭೆ ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಬಾರದು. ದ್ವಂದ್ವ ನಿಲುವು ತಾಳದೇ ಸ್ಪಷ್ಟ ಸಂದೇಶವನ್ನು ನೀಡಬೇಕು. ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದದ್ದು, ಈ ಕಹಿಸತ್ಯ ಹಿಂದಿನ ಅನುಭವದಿಂದಲೇ ತಿಳಿದಿದೆ. ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪನಿಗಳವರೆಗೂ ಲಾಕ್‌ಡೌನ್‌ಗೆ ಒಗ್ಗುವುದು ಕಷ್ಟಕರ ಎಂದು ರಾಜ್ಯ ಕಾಂಗ್ರೆಸ್ ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದೆ. ಆ ಮೂಲಕ ನಾಳೆ ನಡೆಯುವ ಸರ್ವಪಕ್ಷ ಸಭೆಯಲ್ಲಿಯೂ ಲಾಕ್​ಡೌನ್​ ಕುರಿತಾಗಿ ಕಾಂಗ್ರೆಸ್ ಅಸಮಾಧಾನವನ್ನು ವ್ಯಕ್ತಪಡಿಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ಕೈ ಮೀರುತ್ತಿದೆ ಕೊರೊನಾ ಪರಿಸ್ಥಿತಿ.. ಚುನಾವಣೆ ಅವಸರ ಮುಗಿಯುತ್ತಿದ್ದಂತೆ ಇಂದೇ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

Published On - 10:09 am, Fri, 16 April 21

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು