AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಆರ್ಥಿಕ ಚಟುವಟಿಕೆ ಚುರುಕಿಗೆ ರಾಜ್ಯ ಸರ್ಕಾರ ಪ್ಲ್ಯಾನ್; ಲಾಕ್​ಡೌನ್ ನಿಯಮಾವಳಿ ಕೊಂಚ ಸಡಿಲಿಕೆ

ರಫ್ತು ಆಧಾರಿತ ಕೈಗಾರಿಕೆಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಿರುವ ಸರ್ಕಾರ ಕೊರೊನಾ ಸೋಂಕು ಹರಡದಂತೆ ನಿಯಮವನ್ನೂ ಸೂಚಿಸಿದೆ. ಅದರಂತೆ, ಶೇಕಡಾ 10ರಷ್ಟು ಕಾರ್ಮಿಕರಿಗೆ ವಾರದಲ್ಲಿ 2 ಬಾರಿ ಕೊರೊನಾ ಟೆಸ್ಟ್ ಮಾಡಬೇಕು.

Karnataka Lockdown: ಆರ್ಥಿಕ ಚಟುವಟಿಕೆ ಚುರುಕಿಗೆ ರಾಜ್ಯ ಸರ್ಕಾರ ಪ್ಲ್ಯಾನ್; ಲಾಕ್​ಡೌನ್ ನಿಯಮಾವಳಿ ಕೊಂಚ ಸಡಿಲಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 02, 2021 | 8:11 PM

Share

ಬೆಂಗಳೂರು: ಆರ್ಥಿಕ ಚಟುವಟಿಕೆ ಚುರುಕಿಗೆ ಕರ್ನಾಟಕ ಸರ್ಕಾರ ಹೊಸ ಪ್ಲ್ಯಾನ್ ಹಾಕಿಕೊಂಡಿದೆ. ಅದರ ಅನ್ವಯ ಲಾಕ್​ಡೌನ್ ಮಾರ್ಗಸೂಚಿಯಲ್ಲಿ ಕೊಂಚ ಸಡಿಲಿಕೆ ಮಾಡಿಕೊಳ್ಳಲಾಗಿದೆ. ರಫ್ತು ಆಧಾರಿತ ಕೈಗಾರಿಕೆಗಳಿಗೆ ಸರ್ಕಾರದಿಂದ ಅವಕಾಶ ಲಭ್ಯವಾಗಿದೆ. ಶೇಕಡಾ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆ ಮಾಡಬಹುದು ಎಂದು ಸರ್ಕಾರ ಆದೇಶ ಹೊರಡಿಸಿದೆ. ನಾಳೆಯಿಂದಲೇ ಈ ನಿಯಮ ಅನ್ವಯ ಆಗುವಂತೆ ಸರ್ಕಾರ ಆದೇಶ ನೀಡಿದೆ.

ರಫ್ತು ಆಧಾರಿತ ಕೈಗಾರಿಕೆಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಿರುವ ಸರ್ಕಾರ ಕೊರೊನಾ ಸೋಂಕು ಹರಡದಂತೆ ನಿಯಮವನ್ನೂ ಸೂಚಿಸಿದೆ. ಅದರಂತೆ, ಶೇಕಡಾ 10ರಷ್ಟು ಕಾರ್ಮಿಕರಿಗೆ ವಾರದಲ್ಲಿ 2 ಬಾರಿ ಕೊರೊನಾ ಟೆಸ್ಟ್ ಮಾಡಬೇಕು. ಸಾವಿರಕ್ಕೂ ಹೆಚ್ಚು ಕಾರ್ಮಿಕರಿರುವ ಕೈಗಾರಿಕೆಗಳಲ್ಲಿ ಕೊವಿಡ್ ಟೆಸ್ಟ್ ಮಾಡಬೇಕು. ವಾರದಲ್ಲಿ 2 ಬಾರಿ ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸಬೇಕು ಎಂದು ತಿಳಿಸಲಾಗಿದೆ.

ಪ್ರಸ್ತುತ ಜಾರಿಯಲ್ಲಿರುವ ಲಾಕ್​ಡೌನ್​ ನಿಯಮ ಸ್ವಲ್ಪ ಸಡಿಲಿಕೆ ಆಗಲಿದೆ ಎಂಬ ಬಗ್ಗೆ ಈ ಮೊದಲೇ ಅಂದಾಜಿಸಲಾಗಿತ್ತು. ರಫ್ತು ಆಧಾರಿತ ಕೈಗಾರಿಕೆಗಳಿಗೆ ಪೂರ್ಣ ವಿನಾಯಿತಿ ಸಿಗುವ ಸಾಧ್ಯತೆ ಹೇಳಲಾಗಿತ್ತು. ಉತ್ಪಾದಕ ವಲಯದ ಕಬ್ಬಿಣ, ಉಕ್ಕು ಆಧಾರಿತ ಕೈಗಾರಿಕೆಗಳಿಗೆ ಪೂರ್ಣ ವಿನಾಯಿತಿ, ಎಲೆಕ್ಟ್ರಾನಿಕ್ ವಲಯದ ಕಂಪನಿಗಳಿಗೆ ಅವಕಾಶ ಸಾಧ್ಯತೆ ಎನ್ನಲಾಗಿತ್ತು.

ಲಾಕ್​ಡೌನ್ ಬಗ್ಗೆ ಶನಿವಾರ ನಿರ್ಧಾರ ಶನಿವಾರ ಮತ್ತೊಮ್ಮೆ ಸಭೆ ನಡೆಸಿ ಲಾಕ್​ಡೌನ್ ಮುಂದುವರಿಕೆ ಅಥವಾ ಅನ್​ಲಾಕ್ ಪ್ರಕ್ರಿಯೆ ಬಗ್ಗೆ​ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ. ಜೂನ್ 5ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಲಾಕ್​ಡೌನ್ ವಿಸ್ತರಿಸಬೇಕಾ ಬೇಡವಾ ಎಂದು ನಿರ್ಧರಿಸಲಾಗುವುದು ಎಂದು ಮಾಹಿತಿ ಲಭ್ಯವಾಗಿದೆ. ಇಂದಿನ ಸಭೆಯಲ್ಲಿ ಚರ್ಚೆ ನಡೆಸಿರುವ ಸಿಎಂ ಬಿಎಸ್​ವೈ ಜೂನ್ 5ರಂದು ಅಂತಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವಾರ ಲಾಕ್​ಡೌನ್ ಮುಂದುವರಿಕೆಗೆ ನಿರ್ಧಾರ? ಕೊವಿಡ್ ಉಸ್ತುವಾರಿಗಳು, ಅಧಿಕಾರಿಗಳು ಭಾಗವಹಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಒಂದು ವಾರ ಲಾಕ್​ಡೌನ್ ಮುಂದುವರಿಕೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ನಾಳೆಯೇ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದೂ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಕಾರಣ ಶಂಕೆ

ಲಾಕ್‌ಡೌನ್ ನಿಮಿತ್ತ ಬಂದ್ ಆಗಿದ್ದ ಬೈಕ್ ಶೋ ರೂಮ್ ಈಗ ಕೊವಿಡ್ ಕೇರ್ ಸೆಂಟರ್; ಹಾವೇರಿಯ ಶೋ ರೂಮ್ ಮಾಲೀಕನಿಂದ ಮಾದರಿ ಕೆಲಸ

Published On - 7:56 pm, Wed, 2 June 21

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ