AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ತೆರವಾದರೂ ಸುಧಾರಿಸಿಲ್ಲ ನೇಕಾರರ ಬದುಕು; ಬಾಗಲಕೋಟೆಯಲ್ಲಿ ನೇಯ್ದ ಬಟ್ಟೆ ಮನೆಯಲ್ಲೇ ರಾಶಿ

ನೇಯ್ದ ಪ್ರತಿ ಸೀರೆಗೆ 99 ರೂಪಾಯಿ ಸಿಗುತ್ತಿತ್ತು. ಹೀಗಾಗಿ ನೇಕಾರರ ಜೀವನ ಸಮೃದ್ಧ ಅಲ್ಲದಿದ್ದರೂ ಸ್ವಲ್ಪಮಟ್ಟಿಗೆ ಸುಖಮಯವಾಗಿತ್ತು. ಆದರೆ ಮಾರುಕಟ್ಟೆ ಮುಚ್ಚಿದ ಕಾರಣ ಒಂದು ಕುಟುಂಬದಿಂದ ಕೇವಲ ಒಂದೇ ಸೀರೆ ನೇಯುವ ಪರಿಸ್ಥಿತಿ ಬಂದಿದೆ ಎಂದು ನೇಕಾರರಾದ ವಿಷ್ಣು ತಿಳಿಸಿದ್ದಾರೆ.

ಲಾಕ್‌ಡೌನ್‌ ತೆರವಾದರೂ ಸುಧಾರಿಸಿಲ್ಲ ನೇಕಾರರ ಬದುಕು; ಬಾಗಲಕೋಟೆಯಲ್ಲಿ ನೇಯ್ದ ಬಟ್ಟೆ ಮನೆಯಲ್ಲೇ ರಾಶಿ
ಲಾಕ್‌ಡೌನ್‌ ತೆರವಾದರೂ ಸುಧಾರಿಸಿಲ್ಲ ನೇಕಾರರ ಬದುಕು
TV9 Web
| Edited By: |

Updated on: Jun 28, 2021 | 1:18 PM

Share

ಬಾಗಲಕೋಟೆ: ರಾಜ್ಯದಲ್ಲಿಯೇ ಅತೀ ಹೆಚ್ಚು ನೇಕಾರರು ಇರುವ ಜಿಲ್ಲೆ ಎಂದರೆ ಅದು ಬಾಗಲಕೋಟೆ. ಆದರೆ ಹೆಚ್ಚು ನೇಕಾರರನ್ನೇ ಹೊಂದಿರುವ ಜಿಲ್ಲೆಯಲ್ಲಿ ಅವರ ಗೋಳು ಮಾತ್ರ ನಿರಂತರವಾಗಿದೆ. ಕೊವಿಡ್ ಲಾಕ್​ಡೌನ್‌ ಸಮಯದಲ್ಲಿ ನೇಕಾರರು ಸೀರೆ ವ್ಯಾಪಾರವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಈಗ ಅನ್​ಲಾಕ್​ ಆಗಿದೆ. ಆದರೂ ಕೂಡ ಬಟ್ಟೆ ನೇಯುವ ನೇಕಾರನ ಪರಿಸ್ಥಿತಿ ಮಾತ್ರ ಸುಧಾರಿಸಿಲ್ಲ. ಸೂಕ್ತ ಮಾರುಕಟ್ಟೆ ಸಿಗದ ಕಾರಣ ನೇಯ್ದಿಟ್ಟ ಬಟ್ಟೆಗಳು ಮನೆಯಲ್ಲಿಯೇ ಇಟ್ಟುಕೊಂಡು ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತ ಮಾರುಕಟ್ಟೆ ಇಲ್ಲದೇ ಯಾವುದೇ ಆರ್ಡರ್​ಗಳು ನಮಗೆ ಸಿಗುತ್ತಿಲ್ಲ. ಅಲ್ಲದೇ ಈಗಾಗಲೇ ನೇಯ್ದಿಟ್ಟ ಬಟ್ಟೆಗಳು ಹಾಗೆಯೇ ಮನೆಯಲ್ಲಿಯೇ ಉಳಿದಿವೆ. ಕಳೆದ ವರ್ಷವೂ ಲಾಕ್​ಡೌನ್​ನಲ್ಲಿ ಮಾರುಕಟ್ಟೆ ಬಂದ್ ಆಗಿ ನೇಕಾರರು ಸಾಲದ ಸುಳಿಯಲ್ಲಿ ಸಿಲುಕಿದ್ದರು. ಈಗಲೂ ಪುನಃ ಲಾಕ್​ಡೌನ್ ಹೊಡೆತದಿಂದ ಕಂಗಾಲಾಗಿದ್ದೇವೆ. ಇನ್ನು‌ ಮದುವೆಗಳು ನಡೆಯದೇ ಇರುವುದು ನಮ್ಮ ನಷ್ಟಕ್ಕೆ ಕಾರಣವಾಗಿದೆ ಎಂದು ನೇಕಾರರಾದ ದೀಪಾ ತಿಳಿಸಿದ್ದಾರೆ.

ಸಾಮಾನ್ಯವಾಗಿ ಒಂದು ಸೀರೆ ರೆಡಿಯಾಗಿ ಬರಬೇಕಂದರೆ ಕನಿಷ್ಠ 6 ಗಂಟೆ ಸಮಯ ಹಿಡಿಯುತ್ತದೆ. ಹಾಗಿದ್ದರೂ ಓರ್ವ ನೇಕಾರ ಮಾರುಕಟ್ಟೆ ಓಪನ್‌ ಇದ್ದಾಗ ದಿನವೊಂದಕ್ಕೆ 4 ಸೀರೆಗಳನ್ನು ನೇಯುತ್ತಿದ್ದರು.‌ ಒಂದು ಕುಟುಂಬದಲ್ಲಿ ಮೂರರಿಂದ ನಾಲ್ಕು ಜನ ಒಂದು ದಿನಕ್ಕೆ 16 ಸೀರೆಗಳನ್ನು ನೇಯ್ದು ಅಂದೇ ಅವುಗಳನ್ನು ಮಾರುಕಟ್ಟೆಗೆ ರವಾನೆ ಮಾಡುತ್ತಿದ್ದರು. ಹೀಗೆ ನೇಯ್ದ ಪ್ರತಿ ಸೀರೆಗೆ 99 ರೂಪಾಯಿ ಸಿಗುತ್ತಿತ್ತು. ಹೀಗಾಗಿ ನೇಕಾರರ ಜೀವನ ಸಮೃದ್ಧ ಅಲ್ಲದಿದ್ದರೂ ಸ್ವಲ್ಪಮಟ್ಟಿಗೆ ಸುಖಮಯವಾಗಿತ್ತು. ಆದರೆ ಮಾರುಕಟ್ಟೆ ಮುಚ್ಚಿದ ಕಾರಣ ಒಂದು ಕುಟುಂಬದಿಂದ ಕೇವಲ ಒಂದೇ ಸೀರೆ ನೇಯುವ ಪರಿಸ್ಥಿತಿ ಬಂದಿದೆ ಎಂದು ನೇಕಾರರಾದ ವಿಷ್ಣು ತಿಳಿಸಿದ್ದಾರೆ.

ನೇಯ್ದ ಒಂದು ಸೀರೆಯೂ ಈಗ ಮಾರುಕಟ್ಟೆಗೆ ಹೋಗಲ್ಲ. ಇದರಿಂದ ನೇಯ್ದ ಸೀರೆಗಳು, ಕಣಗಳು ಮಾರಾಟ ಆಗದೇ ಮನೆಯಲ್ಲಿಯೇ ಉಳಿಯುವಂತಾಗಿದೆ. ಕಳೆದ ಸರ್ಕಾರ ನೇಕಾರರಿಗೆ ಘೋಷಿಸಿದ ಪರಿಹಾರ ಕೇವಲ ನೇಕಾರ ಕಾರ್ಡ್ ಹೊಂದಿದವರಿಗೆ ಸಿಕ್ಕಿದ್ದು, ಉಳಿದವರಿಗೆ ಸಿಕ್ಕಿಲ್ಲ. ಈಗ ಪುನಃ 2 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಆದರೆ ಸರ್ಕಾರ ನೀಡಿರುವ ಈ ಪರಿಹಾರ ಯಾವುದಕ್ಕೂ ಸಾಲಲ್ಲ. ಹಾಗಾಗಿ ಸರ್ಕಾರ ನಮ್ಮ ನೆರವಿಗೆ ಬರಬೇಕು. ಮಾರುಕಟ್ಟೆ ಇಲ್ಲದೇ ಸಂಕಷ್ಟಕ್ಕೀಡಾದ ಬಡ ನೇಕಾರರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಬೇಕು ಎಂದು ನೇಕಾರರಾದ ವಿಷ್ಣು ಮನವಿ ಮಾಡಿಕೊಂಡಿದ್ದಾರೆ.

ಒಟ್ಟಿನಲ್ಲಿ ಬಟ್ಟೆ ನೇಯುವಿಕೆಯನ್ನು ಕುಲಕಸುಬಾಗಿ ಮುಂದುವರೆಸಿಕೊಂಡು ಬಂದಿರುವ ನೇಕಾರರಿಗೆ ನೇಕಾರಿಕೆ ಬಿಟ್ಟು ಬೇರೆ ಕಾಯಕ ಬರಲ್ಲ. ಸದ್ಯ ಮಾರುಕಟ್ಟೆ ಇರದೇ ನೇಯ್ದ ಬಟ್ಟೆಗಳು ಮನೆಯಲ್ಲಿಯೇ ಉಳಿದುಕೊಂಡು ನೇಕಾರರ ಸ್ಥಿತಿ ಅಯೋಮಯವಾಗಿದೆ. ಸರ್ಕಾರ ಬಡ ನೇಕಾರರ ಇಂತಹ ಸಂಕಷ್ಟಕ್ಕೆ ಸ್ಪಂದಿಸಿ ಸೂಕ್ತ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಮಾಡಬೇಕಿದೆ.

ಇದನ್ನೂ ಓದಿ:

ಗದಗದಲ್ಲಿ ತಯಾರಾಗುವ ಶಿಗ್ಲಿ ಸೀರೆಗೆ ಮಾರು ಹೋದ ಮಹಿಳೆಯರು; ಬೇಸಿಗೆಗೆ ಹೇಳಿ ಮಾಡಿಸಿದ ಕಾಟನ್ ಸೀರೆ

ಲಾಕ್​ಡೌನ್​ನಿಂದ ಬಾಡುತ್ತಿದೆ ರೈತರ ಬದುಕು; 80 ಸಾವಿರ ಖರ್ಚು ಮಾಡಿ ಬೆಳೆದ ಬೀಟ್ರೂಟ್​ನಿಂದ 80 ರೂ. ಲಾಭವಿಲ್ಲ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?