Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ತೆರವಾದರೂ ಸುಧಾರಿಸಿಲ್ಲ ನೇಕಾರರ ಬದುಕು; ಬಾಗಲಕೋಟೆಯಲ್ಲಿ ನೇಯ್ದ ಬಟ್ಟೆ ಮನೆಯಲ್ಲೇ ರಾಶಿ

ನೇಯ್ದ ಪ್ರತಿ ಸೀರೆಗೆ 99 ರೂಪಾಯಿ ಸಿಗುತ್ತಿತ್ತು. ಹೀಗಾಗಿ ನೇಕಾರರ ಜೀವನ ಸಮೃದ್ಧ ಅಲ್ಲದಿದ್ದರೂ ಸ್ವಲ್ಪಮಟ್ಟಿಗೆ ಸುಖಮಯವಾಗಿತ್ತು. ಆದರೆ ಮಾರುಕಟ್ಟೆ ಮುಚ್ಚಿದ ಕಾರಣ ಒಂದು ಕುಟುಂಬದಿಂದ ಕೇವಲ ಒಂದೇ ಸೀರೆ ನೇಯುವ ಪರಿಸ್ಥಿತಿ ಬಂದಿದೆ ಎಂದು ನೇಕಾರರಾದ ವಿಷ್ಣು ತಿಳಿಸಿದ್ದಾರೆ.

ಲಾಕ್‌ಡೌನ್‌ ತೆರವಾದರೂ ಸುಧಾರಿಸಿಲ್ಲ ನೇಕಾರರ ಬದುಕು; ಬಾಗಲಕೋಟೆಯಲ್ಲಿ ನೇಯ್ದ ಬಟ್ಟೆ ಮನೆಯಲ್ಲೇ ರಾಶಿ
ಲಾಕ್‌ಡೌನ್‌ ತೆರವಾದರೂ ಸುಧಾರಿಸಿಲ್ಲ ನೇಕಾರರ ಬದುಕು
Follow us
TV9 Web
| Updated By: preethi shettigar

Updated on: Jun 28, 2021 | 1:18 PM

ಬಾಗಲಕೋಟೆ: ರಾಜ್ಯದಲ್ಲಿಯೇ ಅತೀ ಹೆಚ್ಚು ನೇಕಾರರು ಇರುವ ಜಿಲ್ಲೆ ಎಂದರೆ ಅದು ಬಾಗಲಕೋಟೆ. ಆದರೆ ಹೆಚ್ಚು ನೇಕಾರರನ್ನೇ ಹೊಂದಿರುವ ಜಿಲ್ಲೆಯಲ್ಲಿ ಅವರ ಗೋಳು ಮಾತ್ರ ನಿರಂತರವಾಗಿದೆ. ಕೊವಿಡ್ ಲಾಕ್​ಡೌನ್‌ ಸಮಯದಲ್ಲಿ ನೇಕಾರರು ಸೀರೆ ವ್ಯಾಪಾರವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಈಗ ಅನ್​ಲಾಕ್​ ಆಗಿದೆ. ಆದರೂ ಕೂಡ ಬಟ್ಟೆ ನೇಯುವ ನೇಕಾರನ ಪರಿಸ್ಥಿತಿ ಮಾತ್ರ ಸುಧಾರಿಸಿಲ್ಲ. ಸೂಕ್ತ ಮಾರುಕಟ್ಟೆ ಸಿಗದ ಕಾರಣ ನೇಯ್ದಿಟ್ಟ ಬಟ್ಟೆಗಳು ಮನೆಯಲ್ಲಿಯೇ ಇಟ್ಟುಕೊಂಡು ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತ ಮಾರುಕಟ್ಟೆ ಇಲ್ಲದೇ ಯಾವುದೇ ಆರ್ಡರ್​ಗಳು ನಮಗೆ ಸಿಗುತ್ತಿಲ್ಲ. ಅಲ್ಲದೇ ಈಗಾಗಲೇ ನೇಯ್ದಿಟ್ಟ ಬಟ್ಟೆಗಳು ಹಾಗೆಯೇ ಮನೆಯಲ್ಲಿಯೇ ಉಳಿದಿವೆ. ಕಳೆದ ವರ್ಷವೂ ಲಾಕ್​ಡೌನ್​ನಲ್ಲಿ ಮಾರುಕಟ್ಟೆ ಬಂದ್ ಆಗಿ ನೇಕಾರರು ಸಾಲದ ಸುಳಿಯಲ್ಲಿ ಸಿಲುಕಿದ್ದರು. ಈಗಲೂ ಪುನಃ ಲಾಕ್​ಡೌನ್ ಹೊಡೆತದಿಂದ ಕಂಗಾಲಾಗಿದ್ದೇವೆ. ಇನ್ನು‌ ಮದುವೆಗಳು ನಡೆಯದೇ ಇರುವುದು ನಮ್ಮ ನಷ್ಟಕ್ಕೆ ಕಾರಣವಾಗಿದೆ ಎಂದು ನೇಕಾರರಾದ ದೀಪಾ ತಿಳಿಸಿದ್ದಾರೆ.

ಸಾಮಾನ್ಯವಾಗಿ ಒಂದು ಸೀರೆ ರೆಡಿಯಾಗಿ ಬರಬೇಕಂದರೆ ಕನಿಷ್ಠ 6 ಗಂಟೆ ಸಮಯ ಹಿಡಿಯುತ್ತದೆ. ಹಾಗಿದ್ದರೂ ಓರ್ವ ನೇಕಾರ ಮಾರುಕಟ್ಟೆ ಓಪನ್‌ ಇದ್ದಾಗ ದಿನವೊಂದಕ್ಕೆ 4 ಸೀರೆಗಳನ್ನು ನೇಯುತ್ತಿದ್ದರು.‌ ಒಂದು ಕುಟುಂಬದಲ್ಲಿ ಮೂರರಿಂದ ನಾಲ್ಕು ಜನ ಒಂದು ದಿನಕ್ಕೆ 16 ಸೀರೆಗಳನ್ನು ನೇಯ್ದು ಅಂದೇ ಅವುಗಳನ್ನು ಮಾರುಕಟ್ಟೆಗೆ ರವಾನೆ ಮಾಡುತ್ತಿದ್ದರು. ಹೀಗೆ ನೇಯ್ದ ಪ್ರತಿ ಸೀರೆಗೆ 99 ರೂಪಾಯಿ ಸಿಗುತ್ತಿತ್ತು. ಹೀಗಾಗಿ ನೇಕಾರರ ಜೀವನ ಸಮೃದ್ಧ ಅಲ್ಲದಿದ್ದರೂ ಸ್ವಲ್ಪಮಟ್ಟಿಗೆ ಸುಖಮಯವಾಗಿತ್ತು. ಆದರೆ ಮಾರುಕಟ್ಟೆ ಮುಚ್ಚಿದ ಕಾರಣ ಒಂದು ಕುಟುಂಬದಿಂದ ಕೇವಲ ಒಂದೇ ಸೀರೆ ನೇಯುವ ಪರಿಸ್ಥಿತಿ ಬಂದಿದೆ ಎಂದು ನೇಕಾರರಾದ ವಿಷ್ಣು ತಿಳಿಸಿದ್ದಾರೆ.

ನೇಯ್ದ ಒಂದು ಸೀರೆಯೂ ಈಗ ಮಾರುಕಟ್ಟೆಗೆ ಹೋಗಲ್ಲ. ಇದರಿಂದ ನೇಯ್ದ ಸೀರೆಗಳು, ಕಣಗಳು ಮಾರಾಟ ಆಗದೇ ಮನೆಯಲ್ಲಿಯೇ ಉಳಿಯುವಂತಾಗಿದೆ. ಕಳೆದ ಸರ್ಕಾರ ನೇಕಾರರಿಗೆ ಘೋಷಿಸಿದ ಪರಿಹಾರ ಕೇವಲ ನೇಕಾರ ಕಾರ್ಡ್ ಹೊಂದಿದವರಿಗೆ ಸಿಕ್ಕಿದ್ದು, ಉಳಿದವರಿಗೆ ಸಿಕ್ಕಿಲ್ಲ. ಈಗ ಪುನಃ 2 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಆದರೆ ಸರ್ಕಾರ ನೀಡಿರುವ ಈ ಪರಿಹಾರ ಯಾವುದಕ್ಕೂ ಸಾಲಲ್ಲ. ಹಾಗಾಗಿ ಸರ್ಕಾರ ನಮ್ಮ ನೆರವಿಗೆ ಬರಬೇಕು. ಮಾರುಕಟ್ಟೆ ಇಲ್ಲದೇ ಸಂಕಷ್ಟಕ್ಕೀಡಾದ ಬಡ ನೇಕಾರರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಬೇಕು ಎಂದು ನೇಕಾರರಾದ ವಿಷ್ಣು ಮನವಿ ಮಾಡಿಕೊಂಡಿದ್ದಾರೆ.

ಒಟ್ಟಿನಲ್ಲಿ ಬಟ್ಟೆ ನೇಯುವಿಕೆಯನ್ನು ಕುಲಕಸುಬಾಗಿ ಮುಂದುವರೆಸಿಕೊಂಡು ಬಂದಿರುವ ನೇಕಾರರಿಗೆ ನೇಕಾರಿಕೆ ಬಿಟ್ಟು ಬೇರೆ ಕಾಯಕ ಬರಲ್ಲ. ಸದ್ಯ ಮಾರುಕಟ್ಟೆ ಇರದೇ ನೇಯ್ದ ಬಟ್ಟೆಗಳು ಮನೆಯಲ್ಲಿಯೇ ಉಳಿದುಕೊಂಡು ನೇಕಾರರ ಸ್ಥಿತಿ ಅಯೋಮಯವಾಗಿದೆ. ಸರ್ಕಾರ ಬಡ ನೇಕಾರರ ಇಂತಹ ಸಂಕಷ್ಟಕ್ಕೆ ಸ್ಪಂದಿಸಿ ಸೂಕ್ತ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಮಾಡಬೇಕಿದೆ.

ಇದನ್ನೂ ಓದಿ:

ಗದಗದಲ್ಲಿ ತಯಾರಾಗುವ ಶಿಗ್ಲಿ ಸೀರೆಗೆ ಮಾರು ಹೋದ ಮಹಿಳೆಯರು; ಬೇಸಿಗೆಗೆ ಹೇಳಿ ಮಾಡಿಸಿದ ಕಾಟನ್ ಸೀರೆ

ಲಾಕ್​ಡೌನ್​ನಿಂದ ಬಾಡುತ್ತಿದೆ ರೈತರ ಬದುಕು; 80 ಸಾವಿರ ಖರ್ಚು ಮಾಡಿ ಬೆಳೆದ ಬೀಟ್ರೂಟ್​ನಿಂದ 80 ರೂ. ಲಾಭವಿಲ್ಲ

ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು