AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಲಾಕ್​ಡೌನ್ ಉಲ್ಲಂಘಿಸಿ ಓಡಾಟ; 26 ಸಾವಿರ ವಾಹನ ಜಪ್ತಿ, 17 ಕೋಟಿ ರೂಪಾಯಿ ದಂಡ

ನಗರದಲ್ಲಿ ಪೊಲೀಸರು ಈವರೆಗೆ 36 ಸಾವಿರಕ್ಕೂ ಹೆಚ್ಚು ವಾಹನ ಜಪ್ತಿ ಮಾಡಿದ್ದಾರೆ.₹ 17 ಕೋಟಿಗೂ ಹೆಚ್ಚು ಮೊತ್ತದ ದಂಡ ವಸೂಲಿಯಾಗಿದೆ. ಮಾಸ್ಕ್​ ಧರಿಸದವರಿಂದ ಈವರೆಗೆ ಒಟ್ಟು ₹ 3.91 ಕೋಟಿ ದಂಡ ವಸೂಲಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಲಾಕ್​ಡೌನ್ ಉಲ್ಲಂಘಿಸಿ ಓಡಾಟ; 26 ಸಾವಿರ ವಾಹನ ಜಪ್ತಿ, 17 ಕೋಟಿ ರೂಪಾಯಿ ದಂಡ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: May 30, 2021 | 6:19 PM

Share

ಬೆಂಗಳೂರು: ಲಾಕ್​ಡೌನ್​​ ನಿಯಮಗಳನ್ನು ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರನ್ನು ತಡೆದು, ನಗರದಲ್ಲಿ ಪೊಲೀಸರು ಈವರೆಗೆ 36 ಸಾವಿರಕ್ಕೂ ಹೆಚ್ಚು ವಾಹನ ಜಪ್ತಿ ಮಾಡಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ₹ 17 ಕೋಟಿಗೂ ಹೆಚ್ಚು ಮೊತ್ತದ ದಂಡ ವಸೂಲಿಯಾಗಿದೆ. ಮಾಸ್ಕ್​ ಧರಿಸದವರಿಂದ ಈವರೆಗೆ ಒಟ್ಟು ₹ 3.91 ಕೋಟಿ ದಂಡ ವಸೂಲಿ ಮಾಡಲಾಗಿದೆ.

ನಗರದಲ್ಲಿ ಈವರೆಗೆ ಒಟ್ಟು 35,905 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಅದರಲ್ಲಿ 32 ಸಾವಿರ ದ್ವಿಚಕ್ರ ವಾಹನಗಳು, 1678 ಆಟೊಗಳು, 2024 ಕಾರುಗಳು ಸೇರಿವೆ. ಈ ವಾಹನಗಳನ್ನು ಮಾಲೀಕರು ವಾಪಸ್ ಪಡೆಯಲು ಮಾಲೀಕರು ದಂಡ ಕಟ್ಟಬೇಕಿದೆ. ಮಾಸ್ಕ್​ ಧರಿಸದವರಿಗೆ ಮತ್ತು ಸಾಮಾಜಿಕ ಅಂತರ ಕಾಪಾಡದವರಿಗೂ ಪೊಲೀಸರು ದಂಡ ವಿಧಿಸಿದ್ದಾರೆ. ಇಂಥವರಿಂದ ಈವರೆಗೆ ₹ 3.91 ಕೋಟಿ ದಂಡ ವಸೂಲಿ ಮಾಡಲಾಗಿದೆ.

ನಿಗದಿತ ಅವಧಿ ಮೀರಿ ತೆರೆದ ಅಂಗಡಿಗಳಿಗೂ ದಂಡ ಲಾಕ್​ಡೌನ್​ ಹಿನ್ನೆಲೆ ಬೆಂಗಳೂರಿನಾದ್ಯಂತ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಶಿವಾಜಿನಗರ ಸೇರಿದಂತೆ ಹಲವೆಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಈಚೆಗೆ ಶಿವಾಜಿನಗರದಲ್ಲಿ ಎಂದಿನಂತೆ ಜನ ಸಂಚಾರ, ಬೈಕ್ ಹಾಗೂ ಆಟೊಗಳ ಸಂಚಾರ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿಕ್ರಮಕ್ಕೆ ಮುಂದಾದರು.

ಬೆಳ್ ಬೆಳಗ್ಗೆ ಮಾರ್ಕೆಟ್​ಗೆ ಬೈಕ್​ನಲ್ಲಿ ಹೆಲ್ಮೆಟ್ ಹಾಕದೆ ತೆರಳಿದ ಜನರಿಗೂ ಪೊಲೀಸರು ದಂಡ ವಿಧಿಸಿದರು. ಕಡೆ ಅಂಗಡಿ ಮುಂಗಟ್ಟುಗಳನ್ನು ಅವಧಿ ಮೀರಿ ತೆರೆದಿದ್ದವರಿಗೂ ದಂಡ ಹಾಕಲಾಯಿತು. ಅಂಗಡಿಗಳನ್ನು ನಂತರ ಪೊಲೀಸರು ಬಂದ್ ಮಾಡಿಸಿದರು.

ಲಾಕ್​ಡೌನ್ ಭವಿಷ್ಯ ಸಾರ್ವಜನಿಕ ಸಹಕಾರ ಅವಲಂಬಿಸಿದೆ: ಯಡಿಯೂರಪ್ಪ ಕರ್ನಾಟಕ ರಾಜ್ಯದಲ್ಲಿ ಜೂನ್ 7ರ ನಂತರವೂ ಲಾಕ್​ಡೌನ್ ವಿಸ್ತರಿಸುವ ಸಾಧ್ಯತೆ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನರ ಸಹಕಾರವನ್ನು ಪ್ರಸ್ತಾಪಿಸಿದ್ದಾರೆ. ‘ಜನರು ಸಹಕಾರ ನೀಡಿದರೆ ಜೂನ್ 7ರ ನಂತರ ಲಾಕ್​ಡೌನ್ ವಿಸ್ತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕೊರೊನಾ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ ಹೇಗೆ ಕಡಿಮೆಯಾಗುತ್ತಿದೆ ಎಂಬುದನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಅವರು ಹೇಳಿದರು.

‘ಜೂನ್ 7ರ ನಂತರವೂ ಲಾಕ್​ಡೌನ್ ವಿಸ್ತರಿಸಲಾಗುವುದು’ ಎಂಬ ಗಾಳಿಸುದ್ದಿಗಳನ್ನು ಯಡಿಯೂರಪ್ಪ ತಳ್ಳಿಹಾಕಿದ್ದಾರೆ. ಲಾಕ್​ಡೌನ್ ಭವಿಷ್ಯದ ಬಗ್ಗೆ ಜೂನ್ 5ರಂದು ಪರಿಶೀಲಿಸಿ, ನಂತರ ನಿರ್ಧರಿಸಲಾಗುವುದು ಎಂದು ತಿಳಿಸಿದರು.

(Lockdown Rules Violation in Bengaluru 26 Vehicles Seized 17 Crore Fine)

ಇದನ್ನೂ ಓದಿ: ಧಾರವಾಡದ ಲಾಕ್​ಡೌನ್ ಸಡಿಲಿಕೆ ವಿರುದ್ಧ ಜನರ ಅಸಮಾಧಾನ; ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ

ಇದನ್ನೂ ಓದಿ: ಕರ್ನಾಟಕ ಲಾಕ್​ಡೌನ್ ಹಿನ್ನೆಲೆ; ಮೇ ತಿಂಗಳ ಮೋಟಾರು ವಾಹನ ತೆರಿಗೆಗೆ ರಾಜ್ಯದಲ್ಲಿ ವಿನಾಯಿತಿ ಘೋಷಣೆ

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ