AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಮಾಡುವಂತೆ ಸರ್ಕಾರಕ್ಕೆ ನೇರ ಸಲಹೆ ನೀಡಿದ ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ

ವೈಜ್ಞಾನಿಕವಾಗಿ 15 ದಿನ ಲಾಕ್​ಡೌನ್ ಮಾಡಿ. ಕಾಟಾಚಾರಕ್ಕೆ ಒಂದು ವಾರ ಮಾಡುವುದಲ್ಲ. ಕೊರೊನಾ ಸೋಂಕಿನ ಚೈನ್ ಮುರಿಯಬೇಕು ಅಂದ್ರೆ 15 ದಿನ ಲಾಕ್​ಡೌನ್ ಮಾಡಿ ಎಂದು ಸ್ಪಷ್ಟ ಮಾತಿನಲ್ಲಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಲಾಕ್​ಡೌನ್ ಮಾಡುವಂತೆ ಸರ್ಕಾರಕ್ಕೆ ನೇರ ಸಲಹೆ ನೀಡಿದ ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Apr 20, 2021 | 6:15 PM

Share

ಬೆಂಗಳೂರು: ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಕೊರೊನಾ ಸೋಂಕಿನ ಎರಡನೆಯ ಅಲೆ ವಿಪರೀತವಾಗಿದೆ. ಅದಕ್ಕೆ ಕಡಿವಾಣ ಹಾಕಬೇಕೆಂದರೆ ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜನ‌ ಆಗುವುದಿಲ್ಲ. ಹಾಗಾಗಿ ಲಾಕ್​ಡೌನ್ ಮಾಡಿ, ಲಾಕ್​ಡೌನ್ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾ ಅವರು ಕೊರೊನಾ ಸಂಕಷ್ಟದ ಹಿನ್ನೆಲೆ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಕುಮಾರಸ್ವಾಮಿ ತಮ್ಮ ಸಲಹೆಯನ್ನು ಸರ್ಕಾರದ ಮುಂದಿಟ್ಟರು. ಇನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ ಅಸಲಿಗೆ ರಾಜ್ಯಪಾಲರು ಸಭೆ ಕರೆದಿರುವುದೇ ಕಾನೂನುಬಾಹಿರ. ಇದು ಸಂವಿಧಾನ ಬಾಹಿರ ಎಂದು ಕಿಡಿಕಾರಿದರು. ಲಾಕ್​ಡೌನ್​ ವಿಚಾರದಲ್ಲಿ ಯಾವುದೇ ಮರ್ಜಿ ಬೇಡ: ಸ್ವತಃ ಕೊರೊನಾ ಸೋಂಕಿತರಾಗಿ ಪಡಿಪಾಟಲು ಪಟ್ಟಿರುವ ಮಾಜಿ ಸಿಎಂ ಹೆಚ್​ಡಿಕೆ ಅವರು ಕೊರೊನಾ ಮತ್ತು ಈಗಿನ ಸರ್ಕಾರಿ ವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಿಸಿದ್ದಾರೆ. ಜನರ ಜೀವನದ ಜೊತೆ ಚೆಲ್ಲಾಟ ಆಡಬೇಡಿ. ಜನರ ಜೀವನ ಉಳಿಸುವುದು ಸರ್ಕಾರದ ಆದ್ಯ ಕರ್ತವ್ಯ. ನಾನು ಯಾರ ಬಗ್ಗೆಯೂ ಸಹ ಆಕ್ಷೇಪ ಮಾಡಲ್ಲ. ಕೆಲವರು ಆಕ್ಷೇಪ ಎತ್ತಿದರೂ ಮೊದಲು ಲಾಕ್​ಡೌನ್ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವೈಜ್ಞಾನಿಕವಾಗಿ 15 ದಿನ ಲಾಕ್​ಡೌನ್ ಮಾಡಿ. ಕಾಟಾಚಾರಕ್ಕೆ ಒಂದು ವಾರ ಮಾಡುವುದಲ್ಲ. ಕೊರೊನಾ ಸೋಂಕಿನ ಚೈನ್ ಮುರಿಯಬೇಕು ಅಂದ್ರೆ 15 ದಿನ ಲಾಕ್​ಡೌನ್ ಮಾಡಿ ಎಂದು ಸ್ಪಷ್ಟ ಮಾತಿನಲ್ಲಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಬೆಂಗಳೂರು ಸೇರಿ ಹೆಚ್ಚು ಕೇಸ್​ ಇರುವ ಕಡೆ ಲಾಕ್​ಡೌನ್ ಆಗಬೇಕು. ಹೆಚ್ಚು ಪ್ರಕರಣ ಇರುವ ಜಿಲ್ಲೆಗಳಲ್ಲಿಯೂ ಲಾಕ್​ಡೌನ್ ಮಾಡಿ. ಕನಿಷ್ಠ 15 ದಿನಗಳ ಕಾಲ‌ ಲಾಕ್​ಡೌನ್ ಮಾಡಿ ಎಂದು HDK ಸಲಹೆ ನೀಡಿದರು. ಇದೇ ವೇಳೆ ಲಾಕ್​ಡೌನ್ ಹಾವಳಿಯಿಂದ ಏನೆಲ್ಲ ಕಷ್ಟಕಾರ್ಪಣ್ಯಗಳು ಎದುರಾಗಲಿದೆ ಎಂಬುದರ ಬಗ್ಗೆ ಬೆಳಕು ಚೆಲ್ಲಿದ ಕುಮಾರಸ್ವಾಮಿ ಅವರು ಬಡವರಿಗೆ ಒಂದು ತಿಂಗಳು ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು.

ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಬಗ್ಗೆ ಗಮನಹರಿಸಿ. ಹಾಗಾಗಿ ನಾನು ಸಿಎಂ‌ ಯಡಿಯೂರಪ್ಪ ಅವರಿಗೆ ಮನವಿ ಮಾಡ್ತೇನೆ ಮೊದಲು ಲಾಕ್ ಡೌನ್ ಮಾಡಿ ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು. ಅಧಿಕಾರಿಗಳ ಮೂಲಕ‌ ಆರ್ಥಿಕ ನೆರವು ನೀಡಲು ಆಗಲ್ಲ. ಬದಲಿಗೆ ಪರ್ಯಾಯ ಮಾರ್ಗದ ಮೂಲಕ‌ ಯೋಚನೆ ಮಾಡಿ ಎಂದೂ ಗವರ್ನರ್​ ನೇತೃತ್ವದ ಸರ್ವಪಕ್ಷ ಸಭೆಯಲ್ಲಿ HDK ತಮ್ಮ ಸಲಹೆ ಮುಂದಿಟ್ಟಿದ್ದಾರೆ.

(Lockdown some cities due to coronavirus former chief minister hd kumaraswamy suggests karnataka government)

Published On - 6:05 pm, Tue, 20 April 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ