AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಲೋಕ ಅದಾಲತ್‌ ಯಶೋಗಾಥೆ: ಒಂದೇ ದಿನ 35.84 ಲಕ್ಷ ಕೇಸ್ ಇತ್ಯರ್ಥ!

ಸೆಪ್ಟೆಂಬರ್​ 14ರಂದು ರಾಜ್ಯಾದ್ಯಂತ ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಒಂದೇ ದಿನದಲ್ಲಿ ಸೌಹಾರ್ದಯುತವಾಗಿ ಬರೋಬ್ಬರಿ 35.84 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಬಗ್ಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮಾಹಿತಿ ನೀಡಿದೆ. ಹಾಗಾದ್ರೆ, ಯಾವೆಲ್ಲಾ ಎಷ್ಟೆಷ್ಟು ಕೇಸ್ ಇತ್ಯರ್ಥಗೊಂಡಿವೆ ಎನ್ನುವ ವಿವರ ಇಲ್ಲಿದೆ.

ರಾಷ್ಟ್ರೀಯ ಲೋಕ ಅದಾಲತ್‌ ಯಶೋಗಾಥೆ: ಒಂದೇ ದಿನ 35.84 ಲಕ್ಷ ಕೇಸ್ ಇತ್ಯರ್ಥ!
ಪ್ರಾತಿನಿಧಿಕ ಚಿತ್ರ
Ramesha M
| Edited By: |

Updated on: Sep 20, 2024 | 7:38 PM

Share

ಬೆಂಗಳೂರು, (ಸೆಪ್ಟೆಂಬರ್ 20): ಇದೇ ಸೆಪ್ಟೆಂಬರ್ 14 ರಂದು ಕರ್ನಾಟಕದಾದ್ಯಂತ ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಒಂದೇ ದಿನದಲ್ಲಿ ಬರೋಬ್ಬರಿ 35.84 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿದೆ. ಇದರಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 2 ಲಕ್ಷ ಪ್ರಕರಣಗಳು ಮತ್ತು 33.84 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿವೆ. ಈ ಬಗ್ಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮಾಹಿತಿ ನೀಡಿದೆ.

ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್ ಮತ್ತು ಶ್ರೀನಿವಾಸ್ ಹರೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ, ಸೆಪ್ಟೆಂಬರ್​ 14ರಂದು ನಡೆದಿದ್ದ ರಾಷ್ಟ್ರೀಯ ಲೋಕ್ ಅದಾಲತ್​ನಲ್ಲಿ 35.84 ಲಕ್ಷ ಕೇಸ್ ಇತ್ಯರ್ಥಪಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇದ್ದ 2 ಲಕ್ಷ ಕೇಸ್​ ಹಾಗೂ 33.84 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದರು.

2,402 ಕೋಟಿ ಪರಿಹಾರ ಮೊತ್ತದೊಂದಿಗೆ ಕೇಸ್​ ಇತ್ಯರ್ಥಗೊಳಿಸಲಾಗಿದೆ. ಅದಾಲತ್​ನಲ್ಲಿ 1,669 ವೈವಾಹಿಕ ಪ್ರಕರಣಗಳು ಇತ್ಯರ್ಥಪಡಿಸಲಾಗಿದೆ. ಇನ್ನು ಸಂಧಾನದ ಮೂಲಕ 248 ದಂಪತಿ ಒಟ್ಟುಗೂಡಿಸಲಾಗಿದೆ. 2,696 ವಿಭಾಗ ದಾವೆ ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. 3,621 ಅಪಘಾತ ಕೇಸ್​​ಗಳಲ್ಲಿ 191 ಕೋಟಿ ಪರಿಹಾರ ನೀಡಲಾಗಿದೆ. 8,517 ಚೆಕ್ ಬೌನ್ಸ್ ಕೇಸ್​ಗಳನ್ನ ಮುಕ್ತಾಯಗೊಳಿಸಲಾಗಿದೆ. 2,598 ಅಮಲ್ದಾರಿ ಕೇಸ್, 73 ಗ್ರಾಹಕರ ವ್ಯಾಜ್ಯಗಳು ಇತ್ಯರ್ಥಗೊಳಿಸಲಾಗಿದ್ದು, 5 ವರ್ಷಕ್ಕೂ ಹಳೆಯ 1,443 ಕೇಸ್ ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ