AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆಯುವ ದಿನಾಂಕ ಇಲ್ಲಿದೆ

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ದೇಶದಲ್ಲಿ ಒಟ್ಟು ಏಳು ಹಂತದಲ್ಲಿ ಮನತಾದನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ನಡೆಯಲಿದೆ. ಇನ್ನು ನಾಮಪತ್ರ ಸಲ್ಲಿಕೆ, ಹಿಂಪಡೆಯಲು ಕೊನೆಯ ದಿನಾಂಕ ಇಲ್ಲಿದೆ..

Lok Sabha Election: ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆಯುವ ದಿನಾಂಕ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Mar 25, 2024 | 3:10 PM

ಬೆಂಗಳೂರು, ಮಾರ್ಚ್ 25: ಲೋಕಸಭೆ ಚುನಾವಣೆಗೆ (Lok Sabha Election) ದಿನಾಂಕ ಘೋಷಣೆಯಾಗಿದೆ. ದೇಶದಲ್ಲಿ ಒಟ್ಟು ಏಳು ಹಂತದಲ್ಲಿ ಮನತಾದನ (Voting) ನಡೆಯಲಿದೆ. ಕರ್ನಾಟಕದಲ್ಲಿ (Karnataka) ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ದಿನ, ನಾಮಪತ್ರ ಪರಿಶೀಲನೆ, ಹಿಂಪಡೆಯುವುದು, ಮತದಾನ ಮತ್ತು ಫಲಿತಾಂಶ ಯಾವಾಗ? ಎಂಬುವುದರ ಕುರಿತ ಮಾಹಿತಿ ಇಲ್ಲಿದೆ…

  •  ನಾಮಪತ್ರಗಳನ್ನು ಸಲ್ಲಿಸಲು ಗುರುವಾರ (ಏಪ್ರಿಲ್​ 4) ಕೊನೆಯ ದಿನವಾಗಿದೆ.
  • ಶುಕ್ರವಾರ (ಏಪ್ರಿಲ್​ 5) ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು.
  • ನಾಮಪತ್ರಗಳನ್ನು ಹಿಂಪಡೆಯಲು ಸೋಮವಾರ (ಏಪ್ರಿಲ್​ 8) ಕೊನೆಯ ದಿನವಾಗಿದೆ.
  • ದಕ್ಷಿಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್​ 26 ರಂದು ಮತದಾನ ನಡೆಯಲಿದೆ.
  • ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ
  • ಮತಗಳ ಎಣಿಕೆ ಮತ್ತು ಫಲಿತಾಂಶ ಜೂನ್​ 4 ರಂದು ನಡೆಯುತ್ತದೆ.

ರಾಜ್ಯದಲ್ಲಿರುವ ಮತದಾರರು

ಜನವರಿಯಲ್ಲಿ ಬಿಡುಗಡೆಯಾದ ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಾರ, ರಾಜ್ಯದಲ್ಲಿ ಒಟ್ಟು 5,37,85,815 ಮತದಾರರಿದ್ದಾರೆ. ಇದರಲ್ಲಿ 2,69,33,750 ಪುರುಷ, 2,68,47,145 ಮಹಿಳಾ ಮತ್ತು 4,920 ಇತರೆ ಮತದಾರರಿದ್ದಾರೆ. ರಾಜ್ಯದ 28 ಕ್ಷೇತ್ರಗಳ ಪೈಕಿ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ನಿರ್ಣಾಯಕರಾಗಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ 1259 ಶತಾಯುಷಿ ಮತದಾರರು

ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಮಂಡ್ಯ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಹಾಸನ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ತುಮಕೂರು ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಮಹಿಳಾ ಮತದಾರರಿದ್ದಾರೆ.

50 ಸಾವಿರ ಅರ್ಜಿಗಳು

ಮತದಾನದ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಲು ಮಾರ್ಚ್​ 31 ಕೊನೆಯ ದಿನಾಂಕವಾಗಿದ್ದು, ಈಗಾಗಲೆ 50 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿ ಸಲ್ಲಿಸಿರುವವರು ಮುಂದಿನ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ