AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ: 32ನೇ ಬಾರಿಗೆ ಮೊದಲಿಗನಾಗಿ ಮತ ಚಲಾಯಿಸಿದ 82ರ ವಿಶೇಷ ಚೇತನ ಮಿಟ್ಟು ಚಂಗಪ್ಪ

ಪ್ರಜಾಪ್ರಭುತ್ವದಲ್ಲಿ ಮತದಾನ ನಮ್ಮ ಹಕ್ಕು. ಪ್ರತಿಯೊಬ್ಬರು ಮತ ಚಲಾಯಿಸಬೇಕು. ಮಡಿಕೇರಿಯ 82 ವರ್ಷದ ಹಿರಿಯರಲ್ಲಿರುವ ಮತದಾನದ ಉತ್ಸಾಹ ಈಗಿನ ಪೀಳಿಗೆಗೆ ಮಾದರಿಯಾಗಿದೆ. ಹೌದು ಮಡಿಕೇರಿಯ ವಿಟ್ಟು ಚಂಗಪ್ಪ ಅವರು 32ನೇ ಬಾರಿಗೆ ಮೊದಲು ಮತ ಚಲಾಯಿಸಿದ್ದಾರೆ.

TV9 Web
| Edited By: |

Updated on:Apr 27, 2024 | 6:54 PM

Share

ಕೊಡಗು, ಏಪ್ರಿಲ್​ 26: ಪ್ರತಿ ಸಾರ್ವತ್ರಿಕ ಚುನಾವಣೆಯ ಮತದಾನದ ದಿನ ಒಂದೊಂದು ವಿಶೇಷತೆಗೆ ಸಾಕ್ಷಿಯಾಗುತ್ತದೆ. ಈ ಬಾರಿಯ 2024ರ ಲೋಕಸಭೆ ಚುನವಾಣೆಯ (Lok Sabha Election) ಎರಡನೇ ಹಂತದ ಮತದಾನ ನಡೆಯುತ್ತಿದೆ. ಮಡಿಕೇರಿ (Madikeri) ನಗರದ ವಿಶೇಷ ಚೇತನ ಮಿಟ್ಟು ಚಂಗಪ್ಪ (82 ವರ್ಷ) ಇವರು ಮಡಿಕೇರಿ ನಗರದ ಮತಗಟ್ಟೆ ಸಂಖ್ಯೆ 225 ರಲ್ಲಿ 32ನೇ ಬಾರಿಗೆ ಮತ ಚಲಾಯಿಸಿದ್ದಾರೆ. ವಿಶೇಷ ಅಂದರೆ ಯಾವುದೇ ಚುನಾವಣೆ ಇರಲಿ ಮಿಟ್ಟು ಚಂಗಪ್ಪ ಮೊದಲು ಮತ ಚಲಾಯಿಸಿದ್ದಾರೆ.

1962ರಲ್ಲಿ ಪಂಚಾಯಿತಿ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದರು. ಈಗ 2024ರವರೆಗೆ ನಡೆದ ಪಂಚಾಯಿತಿ, ನಗರಸಭೆ, ವಿಧಾನಸಭೆ, ಲೋಕಸಭೆಗೆ ಕಳೆದ 60 ವರ್ಷದಲ್ಲಿ ನಡೆದ 30 ಚುನಾವಣೆಯಲ್ಲಿ ಮಿಟ್ಟು ಚಂಗಪ್ಪ ಮೊದಲಿಗರಾಗಿ ಮತ ಹಾಕುತ್ತಿದ್ದಾರೆ.

ಕೊಡಗು ಜಿಲ್ಲಾ ಕಾಂಗ್ರೆಸ್ ಮುಖಂಡರಾಗಿರುವ ಮಿಟ್ಟು ಚಂಗಪ್ಪ ಒಮ್ಮೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ವರ್ಷದಿಂದ ದೃಷ್ಟಿ ಹೀನರಾಗಿರುವ 82 ವರ್ಷದ ಮಿಟ್ಟು ಚಂಗಪ್ಪ ಅವರಿಗೆ ಮನೆಯಲ್ಲೆ ಮತದಾನ ಮಾಡುವ ಅವಕಾಶ ಇದ್ದರೂ ಮತಗಟ್ಟೆಯಲ್ಲೆ ಮೊದಲ ಮತದಾನ ಮಾಡಬೇಕು ಎಂಬ ಆಸೆಯಿಂದ ತಮ್ಮ ಪತ್ನಿಯ ಸಹಕಾರದಿಂದ ಮಡಿಕೇರಿ ನಗರದ ಸಂತ ಮೈಕಲರ ಶಾಲಾ ಮತಗಟ್ಟೆಗೆ ಬೆಳಿಗ್ಗೆ 6:45ಕ್ಕೆ ಬಂದು ಮೊದಲ ಮತ ಚಲಾಯಿಸಿದರು. ಇವರ ಈ ಉತ್ಸಾಹ ಯುವ ಮತ್ತು ಮತದಾನ ಮಾಡಲು ನಿರ್ಲಕ್ಷ್ಯವಹಿಸುವ ಮತದಾರರಿಗೆ ಪ್ರೇರಣೆಯಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಲೋಕಸಭೆ ಚುನಾವಣೆಗೆ Rapidoದಿಂದ ಉಚಿತ ಸೇವೆ, ಯಾರಿಗೆಲ್ಲ ಲಭ್ಯ, ಇಲ್ಲಿದೆ ಮಾಹಿತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:02 pm, Fri, 26 April 24

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?