AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ: 32ನೇ ಬಾರಿಗೆ ಮೊದಲಿಗನಾಗಿ ಮತ ಚಲಾಯಿಸಿದ 82ರ ವಿಶೇಷ ಚೇತನ ಮಿಟ್ಟು ಚಂಗಪ್ಪ

ಪ್ರಜಾಪ್ರಭುತ್ವದಲ್ಲಿ ಮತದಾನ ನಮ್ಮ ಹಕ್ಕು. ಪ್ರತಿಯೊಬ್ಬರು ಮತ ಚಲಾಯಿಸಬೇಕು. ಮಡಿಕೇರಿಯ 82 ವರ್ಷದ ಹಿರಿಯರಲ್ಲಿರುವ ಮತದಾನದ ಉತ್ಸಾಹ ಈಗಿನ ಪೀಳಿಗೆಗೆ ಮಾದರಿಯಾಗಿದೆ. ಹೌದು ಮಡಿಕೇರಿಯ ವಿಟ್ಟು ಚಂಗಪ್ಪ ಅವರು 32ನೇ ಬಾರಿಗೆ ಮೊದಲು ಮತ ಚಲಾಯಿಸಿದ್ದಾರೆ.

TV9 Web
| Edited By: |

Updated on:Apr 27, 2024 | 6:54 PM

Share

ಕೊಡಗು, ಏಪ್ರಿಲ್​ 26: ಪ್ರತಿ ಸಾರ್ವತ್ರಿಕ ಚುನಾವಣೆಯ ಮತದಾನದ ದಿನ ಒಂದೊಂದು ವಿಶೇಷತೆಗೆ ಸಾಕ್ಷಿಯಾಗುತ್ತದೆ. ಈ ಬಾರಿಯ 2024ರ ಲೋಕಸಭೆ ಚುನವಾಣೆಯ (Lok Sabha Election) ಎರಡನೇ ಹಂತದ ಮತದಾನ ನಡೆಯುತ್ತಿದೆ. ಮಡಿಕೇರಿ (Madikeri) ನಗರದ ವಿಶೇಷ ಚೇತನ ಮಿಟ್ಟು ಚಂಗಪ್ಪ (82 ವರ್ಷ) ಇವರು ಮಡಿಕೇರಿ ನಗರದ ಮತಗಟ್ಟೆ ಸಂಖ್ಯೆ 225 ರಲ್ಲಿ 32ನೇ ಬಾರಿಗೆ ಮತ ಚಲಾಯಿಸಿದ್ದಾರೆ. ವಿಶೇಷ ಅಂದರೆ ಯಾವುದೇ ಚುನಾವಣೆ ಇರಲಿ ಮಿಟ್ಟು ಚಂಗಪ್ಪ ಮೊದಲು ಮತ ಚಲಾಯಿಸಿದ್ದಾರೆ.

1962ರಲ್ಲಿ ಪಂಚಾಯಿತಿ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದರು. ಈಗ 2024ರವರೆಗೆ ನಡೆದ ಪಂಚಾಯಿತಿ, ನಗರಸಭೆ, ವಿಧಾನಸಭೆ, ಲೋಕಸಭೆಗೆ ಕಳೆದ 60 ವರ್ಷದಲ್ಲಿ ನಡೆದ 30 ಚುನಾವಣೆಯಲ್ಲಿ ಮಿಟ್ಟು ಚಂಗಪ್ಪ ಮೊದಲಿಗರಾಗಿ ಮತ ಹಾಕುತ್ತಿದ್ದಾರೆ.

ಕೊಡಗು ಜಿಲ್ಲಾ ಕಾಂಗ್ರೆಸ್ ಮುಖಂಡರಾಗಿರುವ ಮಿಟ್ಟು ಚಂಗಪ್ಪ ಒಮ್ಮೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ವರ್ಷದಿಂದ ದೃಷ್ಟಿ ಹೀನರಾಗಿರುವ 82 ವರ್ಷದ ಮಿಟ್ಟು ಚಂಗಪ್ಪ ಅವರಿಗೆ ಮನೆಯಲ್ಲೆ ಮತದಾನ ಮಾಡುವ ಅವಕಾಶ ಇದ್ದರೂ ಮತಗಟ್ಟೆಯಲ್ಲೆ ಮೊದಲ ಮತದಾನ ಮಾಡಬೇಕು ಎಂಬ ಆಸೆಯಿಂದ ತಮ್ಮ ಪತ್ನಿಯ ಸಹಕಾರದಿಂದ ಮಡಿಕೇರಿ ನಗರದ ಸಂತ ಮೈಕಲರ ಶಾಲಾ ಮತಗಟ್ಟೆಗೆ ಬೆಳಿಗ್ಗೆ 6:45ಕ್ಕೆ ಬಂದು ಮೊದಲ ಮತ ಚಲಾಯಿಸಿದರು. ಇವರ ಈ ಉತ್ಸಾಹ ಯುವ ಮತ್ತು ಮತದಾನ ಮಾಡಲು ನಿರ್ಲಕ್ಷ್ಯವಹಿಸುವ ಮತದಾರರಿಗೆ ಪ್ರೇರಣೆಯಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಲೋಕಸಭೆ ಚುನಾವಣೆಗೆ Rapidoದಿಂದ ಉಚಿತ ಸೇವೆ, ಯಾರಿಗೆಲ್ಲ ಲಭ್ಯ, ಇಲ್ಲಿದೆ ಮಾಹಿತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:02 pm, Fri, 26 April 24

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ