AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರೇ ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ: ಸಿದ್ದರಾಮಯ್ಯ ಪ್ರಶ್ನೆ

ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾಲಿ ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಇಬ್ಬರೂ ನಾಯಕರು ಇತ್ತೀಚೆಗೆ ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ಬರೀ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ. ಅದರಲ್ಲೂ ದೇವೇಗೌಡರೇ ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇವೇಗೌಡರೇ ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ: ಸಿದ್ದರಾಮಯ್ಯ ಪ್ರಶ್ನೆ
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಸಿದ್ದರಾಮಯ್ಯ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Apr 21, 2024 | 3:07 PM

Share

ಕೋಲಾರ, ಏಪ್ರಿಲ್​ 21: ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿರುವುದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ. ದೇವೇಗೌಡರೇ (DeveGowda) ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ ಎಂದು ಸಿಎಂ ಸಿದ್ದರಾಮ್ಯಯ (Siddaramaiah) ಪ್ರಶ್ನೆ ಮಾಡಿದ್ದಾರೆ. ಜಿಲ್ಲೆಯ ಬಂಗಾರಪೇಟೆಯಲ್ಲಿ ಮಾತನಾಡಿದ ಅವರು, ಹಾಲಿ ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ಇಬ್ಬರೂ ನಾಯಕರು ಬರೀ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ರೈತರ ಸಾಲ ಮನ್ನಾ ಮಾಡಿದ್ದೆ: ಸಿದ್ದರಾಮಯ್ಯ 

ದೇವೇಗೌಡರು ಹೇಳುತ್ತಾರೆ ಮೋದಿ ಅಕ್ಷಯ ಪಾತ್ರೆ ನೀಡಿದ್ದಾರೆ ಅಂತಾ. ಮೋದಿ ಪ್ರಧಾನಿ ಆದ ಬಳಿಕ 124 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಮೋದಿ ಸರ್ಕಾರ 1 ರೂ. ಕೂಡ ರೈತರ ಸಾಲಮನ್ನಾ ಮಾಡಿಲ್ಲ. 72 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ‌ ಮಾಡಿದ್ದು ಕಾಂಗ್ರೆಸ್ ಸರ್ಕಾರ. ನಾನು ರೈತರ ಸಾಲ ಮನ್ನಾ ಮಾಡಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ: ಯಡಿಯೂರಪ್ಪ

ಯಡಿಯೂರಪ್ಪ ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಎಂದಾಗ ನಾವು ಏನಾದರೂ ನೋಟು ಪ್ರಿಂಟ್ ಮಾಡ್ತೀವಾ ಎಂದಿದ್ದರು. ಲೋಕಸಭಾ ಚುನಾವಣೆಯಲ್ಲಿ 5 ಗ್ಯಾರಂಟಿ ನೀಡಿದ್ದೇವೆ. ರೈತರ ಬೆಳೆಗಳಿಗಾಗಿ ಸ್ವಾಮಿನಾಥನ್ ವರದಿ ಜಾರಿಗೆ ತರುತ್ತೇವೆ. ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದೇ ಮೋದಿ ಸಾಧನೆ. ಮೋದಿ ಬಡವರ ಪರ ಇಲ್ಲ, ಬಂಡವಾಳಶಾಹಿಗಳ ಪರವಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್​ ದಾಖಲು

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಈವರೆಗೂ ಹಣ ನೀಡಿಲ್ಲ. ರಾಜ್ಯದಲ್ಲಿ ಬರಗಾಲ ಇದೆ ಈವರೆಗೂ ಬರಪರಿಹಾರ ನೀಡಿಲ್ಲ. ಖುದ್ದು ನಾನೇ ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಮಾಡಿದ್ದೇನೆ. ಕೇಂದ್ರ ಸಚಿವ ಅಮಿತ್ ಶಾರನ್ನೂ ಭೇಟಿಯಾಗಿ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರದಿಂದ ಬಿಡಿಗಾಸು ಬಂದಿಲ್ಲ. ಈಗ ಚುನಾವಣಾ ನೀತಿ ಸಂಹಿತೆ ಇದೆ ಎಂದು ಕೇಂದ್ರ ಹೇಳುತ್ತಿದೆ ಎಂದಿದ್ದಾರೆ.

ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಮೋದಿ ಅಕ್ಕಿ ಕೊಡಲಿಲ್ಲ: ಸಿಎಂ ಆರೋಪ

ಅನ್ನಭಾಗ್ಯ ಯೋಜನೆಗೆ ನರೇಂದ್ರ ಮೋದಿ ರಾಜ್ಯಕ್ಕೆ ಅಕ್ಕಿ ಕೊಡಲಿಲ್ಲ. ಹಣ ಕೊಡ್ತೀವಿ ಅಂತಾ ಹೇಳಿದ್ರು, ಈವರೆಗೂ ಕೇಂದ್ರ ಕೊಡಲಿಲ್ಲ. ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡರು ಸಹ ಅಕ್ಕಿ ಕೊಡಿಸಲಿಲ್ಲ ಎಂದು ಆರೋಪ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ