AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯ: 3 ಕ್ಷೇತ್ರಗಳಲ್ಲಿ ಶೇ. 94.49 ರಷ್ಟು ಮತದಾನ

ಲೋಕಸಭೆ ಚುನಾವಣೆ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯವಾಗಿದೆ. ಬೆಂಗಳೂರು, ಕೇಂದ್ರ, ಉತ್ತರ, ದಕ್ಷಿಣ ಕ್ಷೇತ್ರಗಳಲ್ಲಿ ಶೇ. 94.49 ರಷ್ಟು ಅಂಚೆ ಮತದಾನ ಮಾಡಲಾಗಿದೆ. 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯ: 3 ಕ್ಷೇತ್ರಗಳಲ್ಲಿ ಶೇ. 94.49 ರಷ್ಟು ಮತದಾನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 19, 2024 | 5:19 PM

Share

ಬೆಂಗಳೂರು, ಏಪ್ರಿಲ್ 19: ಬಿಬಿಎಂಪಿ (bbmp) ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯವಾಗಿದೆ. 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರ ಅಂಚೆ ಮತದಾನಕ್ಕೆ (Voting) ಅವಕಾಶ ನೀಡಲಾಗಿತ್ತು. ಪಾಲಿಕೆ ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶೇ. 94.49 ರಷ್ಟು ಅಂಚೆ ಮತದಾನವಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಂದ ಬಾರಿ ಮತದಾನವಾಗಿದೆ. ಬೆಂಗಳೂರು ನಗರ ಪ್ರದೇಶದಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಮತದಾನ ಮಾಡಲಾಗಿದೆ.

ನಗರದಲ್ಲಿ 85 ವರ್ಷ ಮೇಲ್ಪಟ್ಟ ಒಟ್ಟು 1,13,108 ಹಿರಿಯ ನಾಗರಿಕರ ಪೈಕಿ 7,556 ಹಿರಿಯರು ಮಾತ್ರ ಮನೆಯಿಂದಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದರು. ಅದೇ ರೀತಿಯಾಗಿ 30,693 ಅಂಗವಿಕಲರ ಪೈಕಿ 302 ಮಂದಿ ಮಾತ್ರ ಮನೆಯಿಂದ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿದ್ದರು. ಇದರಿಂದ ಒಟ್ಟು ನೋಂದಾಯಿತ ಮನೆ ಮತದಾರರ ಸಂಖ್ಯೆ 7,858ಕ್ಕೆ ಏರಿಕೆ ಆಗಿತ್ತು.

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ಭಾವಚಿತ್ರದ ನಕಲಿ ಎಟಿಎಂ ಕಾರ್ಡ್ ವಿತರಿಸಿ ಕಾಂಗ್ರೆಸ್‌ನಿಂದ ವಿನೂತನ ಪ್ರಚಾರ

ಲೋಕಸಭೆ ಚುನಾವಣೆಗೆ ಕರ್ನಾಟಕದ 28 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಅಂದರೆ ಏಪ್ರಿಲ್ 26 ಮತ್ತು ಮೇ 7 ರಂದು (ಎರಡನೇ ಮತ್ತು ಮೂರನೇ ಹಂತ) ಮತದಾನ ನಡೆಯಲಿದೆ.

ಹಂತ 1: ಉಡುಪಿ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.

ಇದನ್ನೂ ಓದಿ: ಮತದಾರರಿಗೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹಂತ 2: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ.

ಕ್ಷೇತ್ರ                                     ನೋಂದಣಿ           ಮತದಾನ          ಶೇ.

ಬೆಂಗಳೂರು ಉತ್ತರ                   2062                         1923             93.26% ಬೆಂಗಳೂರು ಕೇಂದ್ರ                  1822                          1720             94.40% ಬೆಂಗಳೂರು ದಕ್ಷಿಣ                   2523                          2411              95.56% ಒಟ್ಟು                                         6407                          6054             94.49%

ವರದಿ: ಶಾಂತ ಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:53 pm, Fri, 19 April 24

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ