AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ ಸೋಲು, ಮಾಹಿತಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ: ಬೆಂಗಳೂರಿನ ಕಾಂಗ್ರೆಸ್ ಶಾಸಕರಿಗೆ ಬುಲಾವ್

ಲೋಕಸಭೆಯಲ್ಲಿ ಹೀನಾಯ ಸೋಲಿಂದ ಸಿಎಂ ಸಿದ್ದರಾಮಯ್ಯ ಅಲರ್ಟ್​ ಆಗಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಶಾಸಕರಿಗೆ ಬುಲಾವ್​ ಕೊಟ್ಟಿದ್ದಾರೆ. ಶಾಸಕರ ಜೊತೆ ಸಭೆ ನಡೆಸುವ ಮೂಲಕ ಫಲಿತಾಂಶದ ಮಾಹಿತಿ ಸಂಗ್ರಹಕ್ಕೆ ಸಿದ್ಧತೆ ನಡೆಸಿದ್ದಾರೆ. ಸಿಎಂ ಸಭೆಗೆ ಯಾರೆಲ್ಲ ಹಾಜರಾಗಲಿದ್ದಾರೆ? ತಿಳಿಯಲು ಮುಂದೆ ಓದಿ.

ಲೋಕಸಭೆ ಚುನಾವಣೆ ಸೋಲು, ಮಾಹಿತಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ: ಬೆಂಗಳೂರಿನ ಕಾಂಗ್ರೆಸ್ ಶಾಸಕರಿಗೆ ಬುಲಾವ್
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on:Jun 10, 2024 | 3:14 PM

Share

ಬೆಂಗಳೂರು, ಜೂನ್ 10: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌ಗೆ ಚೇತರಿಸಿಕೊಳ್ಳುವುದೇ ತಲೆನೋವಾಗಿದೆ. 20 ಸ್ಥಾನದಲ್ಲಿ ಗೆಲ್ಲುತ್ತೇವೆ ಎನ್ನುತ್ತಿದ್ದ ಕಾಂಗ್ರೆಸ್​ (Congress) ನಾಯಕರ ನಿರೀಕ್ಷೆ ಹುಸಿಯಾಗಿದೆ. ಕೇವಲ 9 ಸ್ಥಾನ ಗೆದ್ದ ‘ಕೈ’ ನಾಯಕರಿಗೆ ಸೋಲಿನ ಆಘಾತವಾಗಿದೆ. ಇದರ ಬೆನ್ನಲ್ಲೇ ರಾಜ್ಯ ನಾಯಕರ ಮೇಲೆ ಕೇಂದ್ರ ನಾಯಕರು ಒತ್ತಡದ ಮೇಲೆ ಒತ್ತಡ ಹಾಕ್ತಿದ್ದಾರೆ. ಮೊನ್ನೆಯಷ್ಟೇ ಸಚಿವರು, ಶಾಸಕರ ಜೊತೆ ಸಭೆ ಮಾಡಿದ್ದ ರಾಹುಲ್​ ಗಾಂಧಿ ಅಸಮಾಧಾನ ಹೊರಹಾಕಿದ್ದರು. 18 ಸಚಿವರ ಬಗ್ಗೆ ವರದಿ ಕೇಳಿದ್ದರು. ಇದಿಷ್ಟೇ ಅಲ್ಲ, ಕಾಂಗ್ರೆಸ್​ನಲ್ಲೇ ಕೆಲ ಶಾಸಕರು ಗ್ಯಾರಂಟಿ ಯೋಜನೆಯೇ ಕೈ ಹಿಡಿದಿಲ್ಲ, ಬಂದ್ ಮಾಡಬೇಕು ಎಂತೆಲ್ಲಾ ಮಾತನಾಡಿದರು. ಹೀಗಾಗಿ ಅಲರ್ಟ್ ಆಗಿರುವ ಸಿಎಂ ಸಿದ್ದರಾಮಯ್ಯ (Siddaramaiah), ಕಾಂಗ್ರೆಸ್ ಶಾಸಕರ ಸಭೆ ಕರೆದಿದ್ದಾರೆ.

ಲೋಕಸಭೆಯಲ್ಲಿ ಹೀನಾಯ ಸೋಲಿಂದ ಸಿಎಂ ಸಿದ್ದರಾಮಯ್ಯ ಅಲರ್ಟ್​ ಆಗಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಶಾಸಕರಿಗೆ ಬುಲಾವ್​ ಕೊಟ್ಟಿದ್ದಾರೆ. ಶಾಸಕರ ಜೊತೆ ಸಭೆ ನಡೆಸುವ ಮೂಲಕ ಫಲಿತಾಂಶದ ಮಾಹಿತಿ ಸಂಗ್ರಹಕ್ಕೆ ಸಿದ್ಧತೆ ನಡೆಸಿದ್ದಾರೆ. ಇದಿಷ್ಟೇ ಅಲ್ಲ, ಬಿಬಿಎಂಪಿ ಚುನಾವಣೆಯ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಯಾರೆಲ್ಲ ಭಾಗಿ?

ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ, ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್, ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್, ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ಹೆಬ್ಬಾಳ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್, ಪುಲಕೇಶಿನಗರ ಶಾಸಕ ಎ.ಸಿ.ಶ್ರೀನಿವಾಸ್, ಸರ್ವಜ್ಞನಗರ ‘ಕೈ’ ಶಾಸಕ ಕೆ.ಜೆ.ಜಾರ್ಜ್, ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ವಿಜಯನಗರ ‘ಕೈ’ ಶಾಸಕ ಎಂ.ಕೃಷ್ಣಪ್ಪಗೆ ಬುಲಾವ್ ನೀಡಲಾಗಿದ್ದು, ಇವರೆಲ್ಲರೂ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಸೋಲಿನ ಪರಾಮರ್ಶೆಗೆ ಸಮಿತಿ ರಚಿಸಲು ಎಐಸಿಸಿ ನಿರ್ಧಾರ

ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲು ಹಿನ್ನೆಲೆಯಲ್ಲಿ ಸೋಲಿನ ಪರಾಮರ್ಶೆಗೆ ಸಮಿತಿ ರಚಿಸಲು ಎಐಸಿಸಿ ನಿರ್ಧರಿಸಿದೆ. ಎಐಸಿಸಿ ಹಾಗೂ ರಾಜ್ಯ ನಾಯಕರ ನೇತೃತ್ವದ ಸಮಿತಿ ರಚನೆಗೆ ನಿರ್ಧಾರ ಮಾಡಲಾಗಿದೆ. ಕ್ಷೇತ್ರವಾರು ಮಾಹಿತಿ ಪಡೆದು ಯಾವ ಕಾರಣಕ್ಕೆ ಸೋಲಾಗಿದೆ ಎಂಬ ಮಾಹಿತಿ ಸಂಗ್ರಹಿಸಲಿದ್ದಾರೆ. ಇಷ್ಟು ದಿನ ಕೆಲ ಸಚಿವರು ತಮ್ಮ ಭವಿಷ್ಯಕ್ಕೆ ಆತಂಕ ಇಲ್ಲ ಅಂದುಕೊಂಡಿದ್ದರು. ಆದರೆ, ಇದೀಗ ಸಮಿತಿ ರಚನೆಯ ಮೂಲಕ ಸಚಿವರ ಭವಿಷ್ಯಕ್ಕೂ ತೂಗುಗತ್ತಿಯಾಗಲಿದೆ.

ಮಗನ ಸೋಲು; ಹೆಬ್ಬಾಳ್ಕರ್​ಗೆ ಸಿಂಪತಿ ತೋರಿಸಿದ ಸಿಎಂ!

ಸಚಿವೆ ಲಕ್ಷೀ ಹೆಬ್ಬಾಳ್ಕರ್ ಪುತ್ರ ಮೃಣಾಲ್​ ಹೆಬ್ಬಾಳ್ಕರ್​​ಗೆ ಸೋಲಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕರುಣೆ ತೋರಿಸಿದ್ದಾರೆ. ನಿನ್ನೆ ಸಿಎಂ ಭೇಟಿಗೆ ಬೆಳಗಾವಿಯ ಕಾಂಗ್ರೆಸ್​ ನಾಯಕರು ಆಗಮಿಸಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್​ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬಂದಿದ್ದರು. ಪ್ರಿಯಾಂಕಾಗೆ ಅಭಿನಂದಿಸುವ ವೇಳೆ ಪಕ್ಕದಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ನಿಂತಿದ್ದರು. ಈ ವೇಳೆ ಸಾರಿ ಕಣಮ್ಮಾ ಅಂತಾ ಸಿಎಂ ಸಿಂಪತಿ ತೋರಿಸಿದ್ದಾರೆ.

ಇದನ್ನೂ ಓದಿ: ಸ್ಥಗಿತವಾಗುತ್ತಾ ಗ್ಯಾರಂಟಿ ಯೋಜನೆಗಳು? ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಮತ್ತೆ ಶಾಕಿಂಗ್ ಹೇಳಿಕೆ

ಇನ್ನು ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ವಿಚಾರವೂ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ನಮ್ಮಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ನಡೆದಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Mon, 10 June 24

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ