ಲೋಕಸಭೆ ಚುನಾವಣೆ: ಹಲವು ವಿಶೇಷಗಳಿಗೆ ಸಾಕ್ಷಿಯಾದ ರಾಜ್ಯದ 2ನೇ ಹಂತದ ಮತದಾನ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದ ಎರಡನೇ ಹಂತದ ಮತದಾನ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ.

ಲೋಕಸಭೆ ಚುನಾವಣೆ: ಹಲವು ವಿಶೇಷಗಳಿಗೆ ಸಾಕ್ಷಿಯಾದ ರಾಜ್ಯದ 2ನೇ ಹಂತದ ಮತದಾನ
ಮತದಾನ ಮಾಡಿದ ಶತಾಯುಷಿಗಳು
Follow us
| Updated By: ವಿವೇಕ ಬಿರಾದಾರ

Updated on: May 07, 2024 | 2:45 PM

ಬೆಂಗಳೂರು ಮೇ 07: ಲೋಕಸಭೆ ಚುನಾವಣೆಗೆ (Lok Sabha Election) ರಾಜ್ಯದ ಎರಡನೇ ಹಂತದ ಮತದಾನ ನಡೆದಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ (Voting) ನಡೆಯಿತು. ಒಟ್ಟು 227 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು (ಮೇ 07) ನಿರ್ಧಾರವಾಗಿದೆ. ಎರಡನೇ ಹಂತದ ಮತದಾನ ಪ್ರಕ್ರಿಯೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ.

ಮತದಾನ ಮಾಡಿದ ಶತಾಯುಷಿ

ಗದಗ: ಗದಗ ತಾಲೂಕಿನ ಶಿರುಂಜ ಗ್ರಾಮದ ಶತಾಯುಷಿ ಈರಮ್ಮ ಗುಡ್ಡದ (103) ಅವರು ಮೊಮ್ಮಕ್ಕಳ ಸಹಾಯದಿಂದ ಸರ್ಕಾರಿ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 191ಕ್ಕೆ ನಡೆದುಕೊಂಡು ಬಂದು ಮತದಾನ ಮಾಡಿದರು. ಮತದಾನದ ಹುಕ್ಕು ಚಲಾಯಿಸಿ ಯುವ ಜನಾಂಗಕ್ಕೆ ಮಾದರಿಯಾಗಿದ್ದಾರೆ.

ಮತ ಚಲಾಯಿಸಿದ ನವ ಜೋಡಿ

ಕೊಪ್ಪಳ: ಮದುವೆ ಮಂಟಪದಿಂದ ನವ ಜೋಡಿ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 47ಕ್ಕೆ ಆಗಮಿಸಿ ಮತದಾನ ಮಾಡಿದರು. ವಧು ಮಮತಾ ಹಾಗೂ ವರ ನನ್ನೆಪ್ಪ ಅವರು ಮತದಾನ ಮಾಡಿದರು.

ಇನ್ನು ಕುಕನೂರು ತಾಲೂಕಿನ ಕುದುರಿಮೋತಿ ಗ್ರಾಮದ ಶತಾಯುಷಿ ನೀಲಕಂಠಯ್ಯ ಹಿರೇಮಠ (105) ಎಂಬುವರು ಸಂಬಂಧಿಯೊಬ್ಬರ ಸಹಾಯದೊಂದಿಗೆ ಸರ್ಕಾರಿ ಶಾಲೆಯ ಬೂತ್ ನಂಬರ್ 3ಕ್ಕೆ ಆಗಮಿಸಿ ಮತ ಚಲಾಯಿಸಿದರು. ಇಳಿ ವಯಸ್ಸಿನಲ್ಲಿ ಕೂಡ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿ ಶತಾಯುಷಿ ನೀಲಕಂಠಯ್ಯ ಅವರು ಮಾದರಿಯಾಗಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಲೋಕಸಭೆ ಚುನಾವಣೆ: ಕಾಂಗ್ರೆಸ್-ಬಿಜೆಪಿಯ ಪ್ಲಸ್, ಮೈನಸ್ ಏನು?

ವಿದೇಶದಿಂದ ಬಂದು ಮತದಾನ

ಬೆಳಗಾವಿ: ಕಳೆದ 10 ವರ್ಷಗಳಿಂದ ಅಬುದಾಬಿಯಲ್ಲಿರುವ ಯುವಕ ಸೂರಜ್ ಉಪಾಶೆ ಎಂಬ ಯುವಕ ಮತದಾನಕ್ಕಾಗಿ ಊರಿಗೆ ಬಂದಿದ್ದಾರೆ. ಇಂದು ಹುಕ್ಕೇರಿ ಪಟ್ಟಣದ ಗಾಂಧಿನಗರ ಶಾಲೆಯಲ್ಲಿ ಮತದಾನ ಮಾಡಿದರು. ಎಲ್ಲರೂ ತಮ್ಮ ಹಕ್ಕು ಚಲಾಯಿಸುವಂತೆ ಯುವಕ ಮನವಿ ಮಾಡಿದ್ದಾರೆ.

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ

ಶಿವಮೊಗ್ಗ: ಹೊಸನಗರ ತಾಲೂಕಿನ ಆಡುಗೋಡಿಯ ಕಲಾವತಿ ಎಂಬುವರ ಪತಿ ವೆಂಕಟೇಶ್ ಅನಾರೋಗ್ಯದ ಕಾರಣ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮುಂಜಾನೆ ನಿಧನರಾಗಿದ್ದಾರೆ. ಪತಿಯ ಸಾವಿನ ವಿಚಾರ ತಿಳಿದು ದುಃಖದಲ್ಲೇ ಕಲಾವತಿಯವರು ಮತಗಟ್ಟೆಗೆ ಆಗಮಿಸಿ ಮತ ಹಾಕಿದ್ದಾರೆ. ಇದೀಗ ಮೃತ ಪತಿ ದೇಹ ನೋಡಲು ಹೋಗಿದ್ದಾರೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಮತಗಟ್ಟೆಯಲ್ಲಿ ಮತ ಚಲಾಯಿಸಿದ ವ್ಯಕ್ತಿ

ಧಾರವಾಡ: ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿರುವ ಶ್ರೀನಿವಾಸ ಪರಾಂಡೆ (77) ಎಂಬುವರು ಏ. 26 ರಂದು ಮಂಡಿ ನೋವಿನ ಸಂಬಂಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇಂದಿನವರೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಮಧ್ಯೆಯೂ ವ್ಹೀಲ್ ಚೇರ್‌ ಮೂಲಕ ನಗರದ ಎಮ್ಮಿಕೇರಿ ಸರ್ಕಾರಿ ಶಾಲೆಗೆ ಆಗಮಿಸಿ ಮತ ಚಲಾವಣೆ ಮಾಡಿದರು.

ಅರಮನೆ ಮತಗಟ್ಟೆ

ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯತ್​ ಕಚೇರಿಯಲ್ಲಿ ಅರಮನೆ ಮಾದರಿಯಲ್ಲಿ ಮತಗಟ್ಟೆ ನಿರ್ಮಾಣ ಮಾಡಲಾಗಿದೆ. ಮತದಾರರನ್ನು ಸೆಳೆಯಲು ಚುನಾವಣಾ ಅಧಿಕಾರಿಗಳು ವಿನೂತನ ಪ್ರಯೋಗ ಮಾಡಿದ್ದಾರೆ. ಇನ್ನು ಚುನಾವಣಾ ಅಧಿಕಾರಿಗಳು ರಾಜ-ಮಹಾರಾಜ ವೇಷ ಭೂಷಣ ತೊಟ್ಟಿದ್ದಾರೆ. ಮತದಾನದ ಬಳಿಕ ಮತದಾರರನ್ನು ಸಿಂಹಾಸನದ ಮೇಲೆ ಕೂಡಿಸಿ ಕಿರಿಟ ಹಾಕಿ ಸನ್ಮಾನ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಲೋಕಸಭಾ ಚುನಾವಣೆಯ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?