AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KS Eshwarappa: ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ 6 ವರ್ಷ ಉಚ್ಚಾಟನೆ

ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ.

KS Eshwarappa: ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ 6 ವರ್ಷ ಉಚ್ಚಾಟನೆ
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಕಿರಣ್​ ಹನಿಯಡ್ಕ
| Edited By: |

Updated on:Apr 22, 2024 | 9:04 PM

Share

ಬೆಂಗಳೂರು, ಏಪ್ರಿಲ್​ 22: ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ (Shivamogga) ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯಜೇಂದ್ರ ಮನವಿ ಮಾಡಿದ್ದರು. ಆದರೆ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಬಂಡಾಯ ಎದ್ದಿರುವ ಈಶ್ವರಪ್ಪ ಮನವೊಲಿಕೆಗೆ ಕೇಂದ್ರ ನಾಯಕರ ತಂಡ, ರಾಜ್ಯ ನಾಯಕರು, ಸ್ಥಳೀಯರ ಮುಖಂಡರು ಯತ್ನಿಸಿದ್ದರೂ ಯಾವುದೇ ಪ್ರಯೋಜವಾಗಿರಲಿಲ್ಲ. ಇತ್ತೀಚೆಗೆ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಮನೆಗೆ ಬಂದಾಗ, ವಿಜಯೇಂದ್ರ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ತಮ್ಮ ಅಸಮಾಧಾನ ಹೊರಹಾಕಿದ್ದರು.

ಇದನ್ನೂ ಓದಿ: ನನ್ನ ಮಗನಿಗೆ ಎಂಎಲ್​​ಸಿ ಬೇಡ, ಬಂಡಾಯವಾಗಿ ಸ್ಪರ್ಧಿಸಿ ಗೆಲ್ಲುತ್ತೇನೆ: ಕೆಎಸ್ ಈಶ್ವರಪ್ಪ

ಇಷ್ಟು ದಿನ ಯಡಿಯೂರಪ್ಪ ಆಯ್ತು. ಈಗ ವಿಜಯೇಂದ್ರಗೆ ಜೈಕಾರ ಹಾಕ್ಬೇಕಾ ಅಂತಾ ಪ್ರಶ್ನಿಸಿದ್ದರು.  ಮೋದಿ ಕಾರ್ಯಕ್ರಮ ಇದ್ದಿದ್ದರಿಂದ ಕೊನೆ ಕ್ಷಣದಲ್ಲಿ RSS ನಾಯಕರೂ ಸಹ ಮನವೊಲಿಕೆಗೆ ಮುಂದಾಗಿದ್ದರು. ರಾಮಮಂದಿರದಿಂದ ಕರೆ ಮಾಡಿದ್ದ ಗೋಪಾಲ್ ಅವರ ಸಂಧಾನಕ್ಕೂ ಈಶ್ವರಪ್ಪ ಸೊಪ್ಪು ಹಾಕಿರಲಿಲ್ಲ.

ಯಾವಾಗ ಈಶ್ವರಪ್ಪ ಸ್ಪರ್ಧೆಯಿಂದ ಹಿಂದೆ ಸರಿಯೋ ಮಾತೇ ಇಲ್ಲವಾಯಿತೋ, ಹೀಗಾಗಿ ನೋಡೋ ವರೆಗೂ ನೋಡಿ, ಹೈಕಮಾಂಡ್ ನಾಯಕರು, ರಾಜ್ಯ ಬಿಜೆಪಿ ನಾಯಕರು ಅವರನ್ನು ಮನವೊಲಿಸೋ ಪ್ರಯತ್ನವನ್ನೇ ಬಿಜೆಪಿ ಕೊನೆಗೆ ಕೈಬಿಟ್ಟಿತ್ತು.

ಇದನ್ನೂ ಓದಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ: ಕೆಎಸ್ ಈಶ್ವರಪ್ಪ

ಇಷ್ಟೇ ಅಲ್ಲ ಪಕ್ಷ ತಾಯಿ ಇದ್ದಂತೆ, ಆ ತಾಯಿ ಕತ್ತನ್ನ ಬಿಎಸ್ ಯಡಿಯೂರಪ್ಪ ಮತ್ತು ಮಕ್ಕಳು ಹಿಸುಕ್ತಿದ್ದಾರೆ ಅಂತಾ ಈಶ್ವರಪ್ಪ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ವಿಜಯೇಂದ್ರ, ಕತ್ತು ಹಿಸುಕಿದ್ರೋ.. ಬೆಳೆಸ್ತಿದ್ದಾರೋ ಅನ್ನೋದು ರಿಸಲ್ಟ್ ಬಂದ್ಮೇಲೆ ಗೊತ್ತಾಗುತ್ತೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:39 pm, Mon, 22 April 24

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು