AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ

ಅತ್ತ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ಪರ ಮತಶಿಕಾರಿ ನಡೆಸಿದರೆ, ಇತ್ತ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಮತಯಾಚಿಸಿದರು. HSR ಲೇಔಟ್​ನಲ್ಲಿರುವ ಆಟದ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರದ ವಿರುದ್ಧ ಗುಡುಗಿದ್ದಾರೆ. ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.

ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
ಪ್ರಸನ್ನ ಗಾಂವ್ಕರ್​
| Edited By: |

Updated on:Apr 23, 2024 | 10:35 PM

Share

ಬೆಂಗಳೂರು, ಏಪ್ರಿಲ್​​ 23: ಚುನಾವಣಾ ಪ್ರಚಾರದಲ್ಲಿ 2 ದಿನದಿಂದ ಎಂತೆಂಥಾ ಮಾತು ಬರುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಕಿತ್ತುಕೊಳ್ಳಲಿದೆ ಅಂತಿದ್ದಾರೆ. ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿಕೆಗೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ತಿರುಗೇಟು ನೀಡಿದ್ದಾರೆ. ನಗರ HSR ಲೇಔಟ್​ನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಪ್ರಚಾರ ವೇಳೆ ಮಾತನಾಡಿದ ಅವರು, ಮಹಿಳೆಯರ ಮನಸಿನಲ್ಲಿರುವ ಸೇವಾಭಾವನೆ ಬಿಜೆಪಿಗೆ ಅರ್ಥವಾಗಲ್ಲ. ಪ್ರಧಾನಿ ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಯವರು ಯಾವುದೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾತನಾಡಲ್ಲ. ಬಿಜೆಪಿಯವರು ನರೇಂದ್ರ ಮೋದಿ ಇಟ್ಟುಕೊಂಡು ಮತ ಕೇಳುತ್ತಿದ್ದಾರೆ. ಬಿಜೆಪಿ ಭಾವನಾತ್ಮಕ ವಿಚಾರ ಮುಂದಿಟ್ಟು ರಾಜಕೀಯ ಮಾಡ್ತಿದ್ದಾರೆ. ಅವರಿಗೆ ಮಹಿಳೆಯರ ಕಷ್ಟ ಅರ್ಥವಾಗಲ್ಲ. ರೈತರು ಸಾಲ ಹೆಚ್ಚಾದಾಗ ಮಹಿಳೆಯರು ಮಾಂಗಲ್ಯ ಅಡವಿಡುತ್ತಾರೆ. ಮನೆಯಲ್ಲಿ ಯಾರಿಗಾದರೂ ಕಷ್ಟ ಬಂದರೆ ಮಾಂಗಲ್ಯ ಅಡವಿಡುತ್ತಾರೆ. ಅದರ ಬೆಲೆ ಅವರಿಗೆ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ಹಿಂದೂ, ಮುಸ್ಲಿಂರ ಮಧ್ಯೆ ಕಿತ್ತಾಟ ತಂದಿಡ್ತಾರೆ

ರೈತರ ವಿರೋಧಿ ಕೃಷಿ ಕಾಯ್ದೆ ವಿರುದ್ಧ ವರ್ಷಾನುಗಟ್ಟಲೆ ಹೋರಾಟ ಮಾಡಿದ್ದಾರೆ. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ 609 ರೈತರು ಮೃತಪಟ್ಟರು. ಆಗ ಪ್ರಧಾನಿ ಮೋದಿಗೆ ಮಾಂಗಲ್ಯ ನೆನಪಾಗಲಿಲ್ವಾ? ಮಣಿಪುರದಲ್ಲಿ ಹೆಣ್ಣನ್ನು ಬೆತ್ತಲೆಮಾಡಿ ಮೆರವಣಿಗೆ ಮಾಡಿದ್ದರು ಆ ಸಂದರ್ಭದಲ್ಲಿ ಮೋದಿ ಎಲ್ಲಿದ್ರು? ಬಾಯಿಬಿಡಲಿಲ್ವಲ್ಲಾ? ದೇಶದ ಬಗ್ಗೆ ಕಿಂಚಿಂತೂ ಕಾಳಜಿಯಿಲ್ಲದ ಮೋದಿಗೆ ನಾಚಿಕೆ ಆಗ್ಬೇಕು. ನಿಮಗೆ ಪರೋಪಕಾರ ಬೇಕಾ? ಅಹಂಕಾರ ಬೇಕಾ? ಸುಳ್ಳು ಹೇಳುವವರು ಬೇಕಾ? ಸತ್ಯ ಹೇಳುವವರು ಬೇಕಾ? ನೈಜತೆ ಬೇಕಾ ನಾಟಕೀಯತೆ ಬೇಕಾ ನೀವೇ ತೀರ್ಮಾನ ಮಾಡಿ. ಬಿಜೆಪಿಯವರು ಕೇವಲ ಹಿಂದೂ, ಮುಸ್ಲಿಂ ಎಂದು ಕಿತ್ತಾಟ ತಂದಿಡ್ತಾರೆ ಎಂದು ಹಿರಿಹಾಯ್ದಿದ್ದಾರೆ.

ಮೋದಿ ಸೂಪರ್​ಮ್ಯಾನ್​ ಅಲ್ಲ, ಬೆಲೆ ಏರಿಕೆ ಮ್ಯಾನ್

ದೇಶದಲ್ಲಿ ಇಂದು ಯಾವ ಪರಿಸ್ಥಿತಿ ಇದೆ ಎಂದು ನಿಮಗೆ ಗೊತ್ತು. ಬಹುದೊಡ್ಡ ಸಮಸ್ಯೆ ನಿರುದ್ಯೋಗ ಹಾಗೂ ಬೆಲೆ ಏರಿಕೆ. ಬೆಲೆ ಏರಿಕೆ ಆದಾಗ ಮಹಿಳೆಯರ ಮೇಲೆ ಕಷ್ಟ ಬೀಳುತ್ತೆ. ಡೀಸೆಲ್, ಪೆಟ್ರೋಲ್, ಗ್ಯಾಸ್​ ಸಿಲಿಂಡರ್ ದರ ಹೆಚ್ಚಾಗಿದೆ. ಮೋದಿ 10 ವರ್ಷದ ಆಡಳಿತದಲ್ಲಿ ನಿಮಗೇನು ಸಿಕ್ಕಿದೆ. ನಿತ್ಯ ಟಿವಿಯಲ್ಲಿ ಸೂಪರ್​ಮ್ಯಾನ್ ಇಮೇಜ್ ತೋರಿಸ್ತಾರೆ. ಮೋದಿ ಸೂಪರ್​ಮ್ಯಾನ್​ ಅಲ್ಲ, ಬೆಲೆ ಏರಿಕೆ ಮ್ಯಾನ್.​​ ನಿಮ್ಮ ಜೀವನದಲ್ಲಿ ಯಾವುದೇ ಬದಲಾವಣೆಯೇ ಆಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Priyanka Gandhi: ಎಸ್​ಸಿ, ಎಸ್​ಟಿಗೆ ವಿಶೇಷ ಅನುದಾನ, ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ: ಪ್ರಿಯಾಂಕಾ ಗಾಂಧಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಜಾರಿ ಮಾಡಲಾಗಿದೆ. ಪ್ರತಿ ತಿಂಗಳು ಮಹಿಳೆಯರ ಅಕೌಂಟ್​ಗೆ 2,000 ರೂ. ಹೋಗ್ತಿದೆ. ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಜಾರಿಯಾಗ್ತಿದೆ. ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಯಿಂದ ಪ್ರತಿವರ್ಗಕ್ಕೂ ಅನ್ಯಾಯವಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 pm, Tue, 23 April 24

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?