AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 2ನೇ ಹಂತದ ಮತದಾನ: ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲು

ಬೇಸಿಗೆ ರಜೆ ಮತ್ತು ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.07 ರಂದು ಮತದಾನ ಹಿನ್ನೆಲೆಯಲ್ಲಿ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರಾಜ್ಯದ 2ನೇ ಹಂತದ ಮತದಾನ: ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲು
ರೈಲು
ವಿವೇಕ ಬಿರಾದಾರ
|

Updated on:May 06, 2024 | 8:55 AM

Share

ಬೆಂಗಳೂರು, ಮೇ 06: ಬೇಸಿಗೆ ರಜೆ ಮತ್ತು ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.07 ರಂದು ಮತದಾನ (Voting) ಹಿನ್ನೆಲೆಯಲ್ಲಿ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯ (South Western Railway Zone) ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು (Train) ಓಡಿಸಲು ನಿರ್ಧರಿಸಿದೆ. ಹಾಗಿದ್ದರೆ ಯಾವ ಯಾವ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಬಿಡಲಾಗಿದೆ? ದಿನಾಂಕ, ಸಮಯ ಇಲ್ಲಿದೆ.

ರೈಲು ಪ್ರಯಾಣದ ಮಾಹಿತಿ

  1. ರೈಲು ಸಂಖ್ಯೆ 06231: ಮೇ 6 ರಂದು ರಾತ್ರಿ 7 ಗಂಟೆಗೆ ಬೆಂಗಳೂರಿನ ಸರ್​ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ವಿಜಯಪುರಕ್ಕೆ ತಲುಪಲಿದೆ. ಮೇ 7ರ ರಾತ್ರಿ 7 ಗಂಟೆಗೆ ವಿಜಯಪುರ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 06232) ಮೇ 8 ರಂದು ಸರ್​​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ತಲುಪುತ್ತದೆ.
  2. ರೈಲು ಸಂಖ್ಯೆ 06227: ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಮೇ 06 ರಂದು ರಾತ್ರಿ 11 ಗಂಟೆಗೆ ಹೊರಡುವ ರೈಲು ಮರುದಿನ ಮೇ 07 ರಂದು ಬೀದರ್​ಗೆ ತಲುಪಲಿದೆ. ಮೇ 07 ರಂದು ಮಧ್ಯಾಹ್ನ 02:10 ನಿಮಿಷಕ್ಕೆ ಬೀದರ್​ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 06228) ಮರುದಿನ ಯಶವಂತಪುರ ರೈಲು ನಿಲ್ದಾಣಕ್ಕೆ ತಲುಪಲಿದೆ.
  3. ರೈಲು ಸಂಖ್ಯೆ 07319: ಮೇ 6 ರಂದು ರಾತ್ರಿ 9 ಗಂಟೆಗೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ವಿಜಯನಗರಕ್ಕೆ ತಲುಪಲಿದೆ. ವಿಜಯನಗರ ರೈಲು ನಿಲ್ದಾಣದಿಂದ ಮೇ 7 ರಂದು ಹೊರಡುವ ರೈಲು (ಗಾಡಿ ಸಂಖ್ಯೆ 07320) ಮೇ 8 ರಂದು ಯಶವಂತಪುರ ರೈಲು ನಿಲ್ದಾಣ ತಲುಪುತ್ತದೆ.
  4. ರೈಲು ಸಂಖ್ಯೆ 07373: ಮೇ 6 ರಂದು ರಾತ್ರಿ 9 ಗಂಟೆಗೆ ಮೈಸೂರು ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ತಾಳಗುಪ್ಪ ತಲುಪಲಿದೆ. ಮೇ 7 ರಂದು ಸಂಜೆ 6 ಗಂಟೆಗೆ ತಾಳಗುಪ್ಪ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 07374) ಮೇ 8 ರಂದು ಮೈಸೂರು ರೈಲು ನಿಲ್ದಾಣ ತಲುಪುತ್ತದೆ.
  5. ರೈಲು ಸಂಖ್ಯೆ 07317: ಮೇ 6 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ರೈಲು ನಿಲ್ದಾಣದಿಂದ ಹೊರಡುವ ಅಂದು ರಾತ್ರಿ 8 ಗಂಟೆಗೆ ಯಶವಂತಪುರ ರೈಲು ನಿಲ್ದಾಣ ತಲುಪಲಿದೆ.
  6. ರೈಲು ಸಂಖ್ಯೆ 07375: ಮೇ 6 ರಂದು ಬೆಳಿಗ್ಗೆ 8:45ಕ್ಕೆ ಬೆಳಗಾವಿ ರೈಲು ನಿಲ್ದಾಣದಿಂದ ಹೊರಡುವ ಅಂದು ರಾತ್ರಿ 8:15 ಗಂಟೆಗೆ ಮೈಸೂರು ರೈಲು ನಿಲ್ದಾಣ ತಲುಪಲಿದೆ.
  7. ರೈಲು ಸಂಖ್ಯೆ 06241: ಮೇ 6 ರಂದು ರಾತ್ರಿ 8:15ಕ್ಕೆ ಮೈಸೂರು ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ಕಾರವಾರ ರೈಲು ನಿಲ್ದಾಣ ತಲುಪಲಿದೆ.
  8. ರೈಲು ಸಂಖ್ಯೆ 06242: ಮೇ 7 ರಂದು ರಾತ್ರಿ 10 ಗಂಟೆಗೆ ಕಾರವಾರ ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 08 ರಂದು ಮೈಸೂರು ರೈಲು ನಿಲ್ದಾಣ ತಲುಪಲಿದೆ.
  9. ರೈಲು ಸಂಖ್ಯೆ 08321: ಮೇ 9 ಮತ್ತು 16 ರಂದು ರಾತ್ರಿ 9:45ಕ್ಕೆ ಸಂಬಲಾಪುರ ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 08 ಮತ್ತು 17 ರಂದು ಸರ್​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ತಲುಪಲಿದೆ. ಮೇ 11 ರಂದು ಮತ್ತು 18 ರಂದು ಮಧ್ಯಾಹ್ನ 1 ಗಂಟೆಗೆ ಸರ್​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 08322) ಮೇ 12 ಮತ್ತು 19 ರಂದು ಸಂಬಲಾಪುರ ರೈಲು ನಿಲ್ದಾಣ ತಲುಪುತ್ತದೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 am, Mon, 6 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್