AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 2ನೇ ಹಂತದ ಮತದಾನ: ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲು

ಬೇಸಿಗೆ ರಜೆ ಮತ್ತು ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.07 ರಂದು ಮತದಾನ ಹಿನ್ನೆಲೆಯಲ್ಲಿ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರಾಜ್ಯದ 2ನೇ ಹಂತದ ಮತದಾನ: ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲು
ರೈಲು
ವಿವೇಕ ಬಿರಾದಾರ
|

Updated on:May 06, 2024 | 8:55 AM

Share

ಬೆಂಗಳೂರು, ಮೇ 06: ಬೇಸಿಗೆ ರಜೆ ಮತ್ತು ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.07 ರಂದು ಮತದಾನ (Voting) ಹಿನ್ನೆಲೆಯಲ್ಲಿ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯ (South Western Railway Zone) ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು (Train) ಓಡಿಸಲು ನಿರ್ಧರಿಸಿದೆ. ಹಾಗಿದ್ದರೆ ಯಾವ ಯಾವ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಬಿಡಲಾಗಿದೆ? ದಿನಾಂಕ, ಸಮಯ ಇಲ್ಲಿದೆ.

ರೈಲು ಪ್ರಯಾಣದ ಮಾಹಿತಿ

  1. ರೈಲು ಸಂಖ್ಯೆ 06231: ಮೇ 6 ರಂದು ರಾತ್ರಿ 7 ಗಂಟೆಗೆ ಬೆಂಗಳೂರಿನ ಸರ್​ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ವಿಜಯಪುರಕ್ಕೆ ತಲುಪಲಿದೆ. ಮೇ 7ರ ರಾತ್ರಿ 7 ಗಂಟೆಗೆ ವಿಜಯಪುರ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 06232) ಮೇ 8 ರಂದು ಸರ್​​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ತಲುಪುತ್ತದೆ.
  2. ರೈಲು ಸಂಖ್ಯೆ 06227: ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಮೇ 06 ರಂದು ರಾತ್ರಿ 11 ಗಂಟೆಗೆ ಹೊರಡುವ ರೈಲು ಮರುದಿನ ಮೇ 07 ರಂದು ಬೀದರ್​ಗೆ ತಲುಪಲಿದೆ. ಮೇ 07 ರಂದು ಮಧ್ಯಾಹ್ನ 02:10 ನಿಮಿಷಕ್ಕೆ ಬೀದರ್​ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 06228) ಮರುದಿನ ಯಶವಂತಪುರ ರೈಲು ನಿಲ್ದಾಣಕ್ಕೆ ತಲುಪಲಿದೆ.
  3. ರೈಲು ಸಂಖ್ಯೆ 07319: ಮೇ 6 ರಂದು ರಾತ್ರಿ 9 ಗಂಟೆಗೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ವಿಜಯನಗರಕ್ಕೆ ತಲುಪಲಿದೆ. ವಿಜಯನಗರ ರೈಲು ನಿಲ್ದಾಣದಿಂದ ಮೇ 7 ರಂದು ಹೊರಡುವ ರೈಲು (ಗಾಡಿ ಸಂಖ್ಯೆ 07320) ಮೇ 8 ರಂದು ಯಶವಂತಪುರ ರೈಲು ನಿಲ್ದಾಣ ತಲುಪುತ್ತದೆ.
  4. ರೈಲು ಸಂಖ್ಯೆ 07373: ಮೇ 6 ರಂದು ರಾತ್ರಿ 9 ಗಂಟೆಗೆ ಮೈಸೂರು ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ತಾಳಗುಪ್ಪ ತಲುಪಲಿದೆ. ಮೇ 7 ರಂದು ಸಂಜೆ 6 ಗಂಟೆಗೆ ತಾಳಗುಪ್ಪ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 07374) ಮೇ 8 ರಂದು ಮೈಸೂರು ರೈಲು ನಿಲ್ದಾಣ ತಲುಪುತ್ತದೆ.
  5. ರೈಲು ಸಂಖ್ಯೆ 07317: ಮೇ 6 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ರೈಲು ನಿಲ್ದಾಣದಿಂದ ಹೊರಡುವ ಅಂದು ರಾತ್ರಿ 8 ಗಂಟೆಗೆ ಯಶವಂತಪುರ ರೈಲು ನಿಲ್ದಾಣ ತಲುಪಲಿದೆ.
  6. ರೈಲು ಸಂಖ್ಯೆ 07375: ಮೇ 6 ರಂದು ಬೆಳಿಗ್ಗೆ 8:45ಕ್ಕೆ ಬೆಳಗಾವಿ ರೈಲು ನಿಲ್ದಾಣದಿಂದ ಹೊರಡುವ ಅಂದು ರಾತ್ರಿ 8:15 ಗಂಟೆಗೆ ಮೈಸೂರು ರೈಲು ನಿಲ್ದಾಣ ತಲುಪಲಿದೆ.
  7. ರೈಲು ಸಂಖ್ಯೆ 06241: ಮೇ 6 ರಂದು ರಾತ್ರಿ 8:15ಕ್ಕೆ ಮೈಸೂರು ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ಕಾರವಾರ ರೈಲು ನಿಲ್ದಾಣ ತಲುಪಲಿದೆ.
  8. ರೈಲು ಸಂಖ್ಯೆ 06242: ಮೇ 7 ರಂದು ರಾತ್ರಿ 10 ಗಂಟೆಗೆ ಕಾರವಾರ ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 08 ರಂದು ಮೈಸೂರು ರೈಲು ನಿಲ್ದಾಣ ತಲುಪಲಿದೆ.
  9. ರೈಲು ಸಂಖ್ಯೆ 08321: ಮೇ 9 ಮತ್ತು 16 ರಂದು ರಾತ್ರಿ 9:45ಕ್ಕೆ ಸಂಬಲಾಪುರ ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 08 ಮತ್ತು 17 ರಂದು ಸರ್​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ತಲುಪಲಿದೆ. ಮೇ 11 ರಂದು ಮತ್ತು 18 ರಂದು ಮಧ್ಯಾಹ್ನ 1 ಗಂಟೆಗೆ ಸರ್​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 08322) ಮೇ 12 ಮತ್ತು 19 ರಂದು ಸಂಬಲಾಪುರ ರೈಲು ನಿಲ್ದಾಣ ತಲುಪುತ್ತದೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 am, Mon, 6 May 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು