AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 2ನೇ ಹಂತದ ಮತದಾನ: ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲು

ಬೇಸಿಗೆ ರಜೆ ಮತ್ತು ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.07 ರಂದು ಮತದಾನ ಹಿನ್ನೆಲೆಯಲ್ಲಿ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರಾಜ್ಯದ 2ನೇ ಹಂತದ ಮತದಾನ: ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲು
ರೈಲು
ವಿವೇಕ ಬಿರಾದಾರ
|

Updated on:May 06, 2024 | 8:55 AM

Share

ಬೆಂಗಳೂರು, ಮೇ 06: ಬೇಸಿಗೆ ರಜೆ ಮತ್ತು ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.07 ರಂದು ಮತದಾನ (Voting) ಹಿನ್ನೆಲೆಯಲ್ಲಿ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯ (South Western Railway Zone) ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು (Train) ಓಡಿಸಲು ನಿರ್ಧರಿಸಿದೆ. ಹಾಗಿದ್ದರೆ ಯಾವ ಯಾವ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಬಿಡಲಾಗಿದೆ? ದಿನಾಂಕ, ಸಮಯ ಇಲ್ಲಿದೆ.

ರೈಲು ಪ್ರಯಾಣದ ಮಾಹಿತಿ

  1. ರೈಲು ಸಂಖ್ಯೆ 06231: ಮೇ 6 ರಂದು ರಾತ್ರಿ 7 ಗಂಟೆಗೆ ಬೆಂಗಳೂರಿನ ಸರ್​ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ವಿಜಯಪುರಕ್ಕೆ ತಲುಪಲಿದೆ. ಮೇ 7ರ ರಾತ್ರಿ 7 ಗಂಟೆಗೆ ವಿಜಯಪುರ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 06232) ಮೇ 8 ರಂದು ಸರ್​​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ತಲುಪುತ್ತದೆ.
  2. ರೈಲು ಸಂಖ್ಯೆ 06227: ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಮೇ 06 ರಂದು ರಾತ್ರಿ 11 ಗಂಟೆಗೆ ಹೊರಡುವ ರೈಲು ಮರುದಿನ ಮೇ 07 ರಂದು ಬೀದರ್​ಗೆ ತಲುಪಲಿದೆ. ಮೇ 07 ರಂದು ಮಧ್ಯಾಹ್ನ 02:10 ನಿಮಿಷಕ್ಕೆ ಬೀದರ್​ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 06228) ಮರುದಿನ ಯಶವಂತಪುರ ರೈಲು ನಿಲ್ದಾಣಕ್ಕೆ ತಲುಪಲಿದೆ.
  3. ರೈಲು ಸಂಖ್ಯೆ 07319: ಮೇ 6 ರಂದು ರಾತ್ರಿ 9 ಗಂಟೆಗೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ವಿಜಯನಗರಕ್ಕೆ ತಲುಪಲಿದೆ. ವಿಜಯನಗರ ರೈಲು ನಿಲ್ದಾಣದಿಂದ ಮೇ 7 ರಂದು ಹೊರಡುವ ರೈಲು (ಗಾಡಿ ಸಂಖ್ಯೆ 07320) ಮೇ 8 ರಂದು ಯಶವಂತಪುರ ರೈಲು ನಿಲ್ದಾಣ ತಲುಪುತ್ತದೆ.
  4. ರೈಲು ಸಂಖ್ಯೆ 07373: ಮೇ 6 ರಂದು ರಾತ್ರಿ 9 ಗಂಟೆಗೆ ಮೈಸೂರು ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ತಾಳಗುಪ್ಪ ತಲುಪಲಿದೆ. ಮೇ 7 ರಂದು ಸಂಜೆ 6 ಗಂಟೆಗೆ ತಾಳಗುಪ್ಪ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 07374) ಮೇ 8 ರಂದು ಮೈಸೂರು ರೈಲು ನಿಲ್ದಾಣ ತಲುಪುತ್ತದೆ.
  5. ರೈಲು ಸಂಖ್ಯೆ 07317: ಮೇ 6 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ರೈಲು ನಿಲ್ದಾಣದಿಂದ ಹೊರಡುವ ಅಂದು ರಾತ್ರಿ 8 ಗಂಟೆಗೆ ಯಶವಂತಪುರ ರೈಲು ನಿಲ್ದಾಣ ತಲುಪಲಿದೆ.
  6. ರೈಲು ಸಂಖ್ಯೆ 07375: ಮೇ 6 ರಂದು ಬೆಳಿಗ್ಗೆ 8:45ಕ್ಕೆ ಬೆಳಗಾವಿ ರೈಲು ನಿಲ್ದಾಣದಿಂದ ಹೊರಡುವ ಅಂದು ರಾತ್ರಿ 8:15 ಗಂಟೆಗೆ ಮೈಸೂರು ರೈಲು ನಿಲ್ದಾಣ ತಲುಪಲಿದೆ.
  7. ರೈಲು ಸಂಖ್ಯೆ 06241: ಮೇ 6 ರಂದು ರಾತ್ರಿ 8:15ಕ್ಕೆ ಮೈಸೂರು ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 07 ರಂದು ಕಾರವಾರ ರೈಲು ನಿಲ್ದಾಣ ತಲುಪಲಿದೆ.
  8. ರೈಲು ಸಂಖ್ಯೆ 06242: ಮೇ 7 ರಂದು ರಾತ್ರಿ 10 ಗಂಟೆಗೆ ಕಾರವಾರ ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 08 ರಂದು ಮೈಸೂರು ರೈಲು ನಿಲ್ದಾಣ ತಲುಪಲಿದೆ.
  9. ರೈಲು ಸಂಖ್ಯೆ 08321: ಮೇ 9 ಮತ್ತು 16 ರಂದು ರಾತ್ರಿ 9:45ಕ್ಕೆ ಸಂಬಲಾಪುರ ರೈಲು ನಿಲ್ದಾಣದಿಂದ ಹೊರಡುವ ರೈಲು ಮೇ 08 ಮತ್ತು 17 ರಂದು ಸರ್​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ತಲುಪಲಿದೆ. ಮೇ 11 ರಂದು ಮತ್ತು 18 ರಂದು ಮಧ್ಯಾಹ್ನ 1 ಗಂಟೆಗೆ ಸರ್​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಿಂದ ಹೊರಡುವ ರೈಲು (ಗಾಡಿ ಸಂಖ್ಯೆ 08322) ಮೇ 12 ಮತ್ತು 19 ರಂದು ಸಂಬಲಾಪುರ ರೈಲು ನಿಲ್ದಾಣ ತಲುಪುತ್ತದೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 am, Mon, 6 May 24

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ