Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: 4 ಸಮಾವೇಶ, 8 ಲೋಕಸಭಾ ಕ್ಷೇತ್ರಗಳ ಟಾರ್ಗೆಟ್: ರಾಜ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಮತಬೇಟೆ

ಬಹಿರಂಗ ಪ್ರಚಾರಕ್ಕೆ ಉಳಿದಿರುವುದು ಆರೇ ಆರು ದಿನ ಮಾತ್ರ. ಮೇ 7 ರಂದು ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಬಿಜೆಪಿ ಅಬ್ಬರದ ಪ್ರಚಾರಕ್ಕೆ ಇಳಿದಿದೆ. ನಿನ್ನೆ ರಾತ್ರಿಯೇ ಬೆಳಗಾವಿಗೆ ಬಂದಿಳಿದಿದ್ದ ಪ್ರಧಾನಿ ಮೋದಿ ಬೆಳಗಾವಿ ಸೇರಿದಂತೆ ಶಿರಸಿ, ದಾವಣಗೆರೆ ಹಾಗೂ ಹೊಸಪೇಟೆಯಲ್ಲಿ ಇಂದು ರ್‍ಯಾಲಿ ಮಾಡಿದರು. ಒಂದಲ್ಲ ಎರಡಲ್ಲ ಒಂದೇ ದಿನ ನಾಲ್ಕು ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರ ಮಾಡಿದ್ದಾರೆ.

Lok Sabha Elections 2024: 4 ಸಮಾವೇಶ, 8 ಲೋಕಸಭಾ ಕ್ಷೇತ್ರಗಳ ಟಾರ್ಗೆಟ್: ರಾಜ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಮತಬೇಟೆ
ಮೋದಿ ಭರ್ಜರಿ ಮತಬೇಟೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 28, 2024 | 8:43 PM

ಬೆಂಗಳೂರು, ಏಪ್ರಿಲ್​ 28: ಲೋಕಸಭಾ ಚುನಾವಣೆಯ (Lok Sabha Elections) ಎರಡನೇ ಹಂತದ ಮತ ಪ್ರಚಾರ ಕಣದಲ್ಲಿ ಮಾತಿನ ಬಾಣಗಳು ಮತ್ತಷ್ಟು ಬಿರುಸುಗೊಂಡಿದ್ದವು. ಎರಡನೇ ಹಂತದ ಮತದಾನ ನಡೆಯಲಿರುವ 8 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಳಗಾವಿ, ಶಿರಸಿ, ದಾವಣಗೆರೆ ಹಾಗೂ ಹೊಸಪೇಟೆಯಲ್ಲಿ ಇಂದು ರ್‍ಯಾಲಿ ಮಾಡಿದರು. ಒಂದೇ ಸಮಾವೇಶದಲ್ಲಿ ಎರಡೆರಡು ಕ್ಷೇತ್ರಗಳ ಮತದಾರರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಮಾತಿನುದ್ದಕ್ಕೂ ರಾಜ್ಯ ಕಾಂಗ್ರೆಸ್ ಸರ್ಕಾರ, ರಾಹುಲ್ ಗಾಂಧಿ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ, ಬೆಂಗಳೂರು ಕೆಫೆ ಬಾಂಬ್ ಸ್ಫೊಟ, ಪಿತ್ರಾರ್ಜಿತ ಆಸ್ತಿ ತೆರಿಗೆಯೇ ಪ್ರಧಾನಿ ಮೋದಿ ಭಾಷಣದ ಮೇನ್ ಹೈಲೈಟ್ಸ್ ಆಗಿತ್ತು.

ರಾಹುಲ್ ಗಾಂಧಿ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ

ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಮತಬೇಟೆ ಆರಂಭಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್​ನ ತುಷ್ಠೀಕರಣದಿಂದಾಗಿ ಕೆಫೆ ಬಾಂಬ್ ಸ್ಫೋಟವನ್ನು ಸಿಲಿಂಡರ್ ಸ್ಫೋಟ ಅಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಮಾಂಗಲ್ಯ ಸರವನ್ನೂ ಹುಡುಕಿಕೊಂಡು ಬರ್ತಾರೆ ಅಂತಾ ವಾಗ್ದಾಳಿ ಮಾಡಿದ್ದಾರೆ. ಇದೇ ವೇಳೆ ಬೆಳಗಾವಿ ನಮ್ಮ ದೇಶದ ರಾಜ ಮಹಾರಾಜರನ್ನು ಕಾಂಗ್ರೆಸ್ ನಾಯಕರು ಅವಮಾನಿಸಿದ್ದಾರೆ. ಈ ಮೂಲಕ ಛತ್ರಪತಿ ಶಿವಾಜಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮಗೆ ಅವಮಾನಿಸಿದ್ದಾರೆ ಅಂತಾ ರಾಹುಲ್ ಗಾಂಧಿ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ನೇಹಾ, ಜೈನಮುನಿ ಹತ್ಯೆ, ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ್ದ ಪ್ರಕರಣ ಪ್ರಸ್ತಾಪಿಸಿ ಕಾಂಗ್ರೆಸ್​ ವಿರುದ್ಧ ಮೋದಿ ಚಾಟಿ

ಶಿರಸಿಯಲ್ಲಿ ಉತ್ತರ ಕನ್ನಡ ಹಾಗೂ ಧಾರವಾಡ ಕ್ಷೇತ್ರಗಳಲ್ಲಿ ಕ್ಯಾಂಪೇನ್ ಮಾಡಿದ ಪ್ರಧಾನಿ ಮೋದಿ ರಾಮಂದಿರ ವಿಚಾರ ಪ್ರಸ್ತಾಪಿಸುತ್ತಾ ಇಲ್ಲೂ ಕಾಂಗ್ರೆಸ್ ವಿರುದ್ಧ ಮಾತಿನ ಬಾಣ ಪ್ರಯೋಗಿಸಿದ್ದಾರೆ. ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ನಾಚಿಕೆಗೇಡಿನ ಸರ್ಕಾರ ವಿದೆ ಅಂತಾ ವಾಗ್ದಾಳಿ ಮಾಡಿದ್ದಾರೆ.

ಇನ್ನು ಹುಬ್ಬಳ್ಳಿಯಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ನೇಹಾ ಹತ್ಯೆ ಮಾಡಲಾಗಿದೆ ಅಂತಾ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಮ್ಮ ಒಬ್ಬಳು ಸಹೋದರಿಗೆ ಆಗಿರೋದನ್ನು ನೋಡಿ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಕರ್ನಾಟಕದಲ್ಲಿ ಪ್ರತಿಯೊಬ್ಬ ತಂದೆ ತಾಯಿಗೆ ತಮ್ಮ ಹೆಣ್ಣುಮಕ್ಕಳ ಬಗ್ಗೆ ಚಿಂತೆಯಾಗಿದೆ. ಯಾರ ಕಾರಣದಿಂದ? ಕಾಂಗ್ರೆಸ್​ನ ಪಾಪದ ಕಾರಣದಿಂದ ಎಂದಿದ್ದಾರೆ.

ನರೇಂದ್ರ ಮೋದಿ ಇರುವುದು ಸ್ವಂತಕ್ಕಾಗಿ ಅಲ್ಲ, ನಿಮಗಾಗಿ

ಹೊಸಪೇಟೆ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನರೇಂದ್ರ ಮೋದಿ ಇರುವುದು ಸ್ವಂತಕ್ಕಾಗಿ ಅಲ್ಲ, ನಿಮಗಾಗಿ. ಬಳ್ಳಾರಿ ಜನ ಬಿಜೆಪಿಯ ವಿಶ್ವಾಸ, ವಿಕಾಸವನ್ನು ನೋಡಿದ್ದಾರೆ. ಕಾಂಗ್ರೆಸ್​​ ಪಕ್ಷದ ವಿಶ್ವಾಸಘಾತಕತನ ನೋಡಿದ್ದಾರೆ. ಸುಷ್ಮಾ ಸ್ವರಾಜ್​​ ಗೆದ್ದಾಗ ಇಲ್ಲಿ ಸಾಕಷ್ಟು ಕೆಲಸ ಮಾಡಿದ್ದರು. ಕಾಂಗ್ರೆಸ್ ಮೇಡಂ ಇಲ್ಲಿಂದ ಗೆದ್ದು ವಿಶ್ವಾಸಘಾತಕತನ ಮಾಡಿದರು. ಸುಳ್ಳು ಹೇಳುವುದು ಮೋಸ ಮಾಡುವುದು ಕಾಂಗ್ರೆಸ್​ ಟ್ರ್ಯಾಕ್​​ ರೆಕಾರ್ಡ್​. ನಿಮ್ಮ ಒಂದೊಂದು ಮತ ಕಾಂಗ್ರೆಸ್​ ತಪ್ಪುಗಳಿಗೆ ಪಾಠ ಕಲಿಸಬೇಕು. ನೀವು ಒತ್ತುವ ಕಮಲದ ಬಟನ್ ನೇರವಾಗಿ ಮೋದಿಗೆ ಹೋಗುತ್ತದೆ. ಬಲಿಷ್ಠ ಮೋದಿ ಬಲಿಷ್ಠ ವಿಕಸಿತ ಸರ್ಕಾರಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ, ವಿಡಿಯೋ ನೋಡಿ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಹೀಗಾಗಿ ಉಳಿದಿರೋ ಒಂದು ವಾರದಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಬಿಜೆಪಿ, ಕಾಂಗ್ರೆಸ್ ಭಾರೀ ಕಸರತ್ತು ನಡೆಸುತ್ತಿವೆ.

ವರದಿ: ಬ್ಯೂರೋ ರಿಪೋರ್ಟ್ ಟಿವಿ9

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:41 pm, Sun, 28 April 24

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​