AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ, 3 ದಿನ ಮದ್ಯ ಮಾರಾಟ ನಿಷೇಧ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಅಬ್ಬರಿಸಿದ್ದೇನು.. ಬೊಬ್ಬರಿದಿದ್ದೇನು.. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಊರೂರು ಸುತ್ತಿದ್ರು. ಆರೋಪಕ್ಕೆ ಪ್ರತ್ಯಾರೋಪದೊಂದಿಗೆ ಗುಟುರು ಹಾಕಿದ್ರು. ಚುನಾವಣೆ ಘೋಷಣೆ ಆದಾಗಿನಿಂದಲೂ ಲೋಕಸಭಾ ಅಖಾಡಗಳು ರಣರಣ ಅಂತಿದ್ವು. ಇದೀಗ, ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ 14 ಕ್ಷೇತ್ರಗಳು ಸಜ್ಜಾಗಿವೆ. ಮತಯುದ್ಧಕ್ಕೆ ಇನ್ನೊಂದು ದಿನವಷ್ಟೇ ಬಾಕಿಯಿದ್ದು, ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಇನ್ನು 3 ದಿನ ಎಣ್ಣೆ ಸಿಗುವುದಿಲ್ಲ.

ಕರ್ನಾಟಕದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ, 3 ದಿನ ಮದ್ಯ ಮಾರಾಟ ನಿಷೇಧ
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Apr 24, 2024 | 7:18 PM

ಬೆಂಗಳೂರು, (ಏಪ್ರಿಲ್ 24):  ಕರ್ನಾಟಕದಲ್ಲಿ (Karnataka) ಮೊದಲ ಹಂತದ (ದೇಶದ 2ನೇ ಹಂತ) ಲೋಕಸಭಾ (Loksabha Elections 2024) ಸಮರದ ಅಬ್ಬರ ಬಹಿರಂಗ ಪ್ರಚಾರಕ್ಕೆ ಇಂದು (ಏಪ್ರಿಲ್ 24) ತೆರೆ ಬಿದ್ದಿದೆ. ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ, ಹೀಗಾಗಿ ಇಂದು (ಏಪ್ರಿಲ್ 24) ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ನರೇಂದ್ರ ಮೋದಿ ಅಮಿತ್​ ಶಾ.. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಯಡಿಯೂರಪ್ಪ, ಕುಮಾರಸ್ವಾಮಿ.. ಒಬ್ಬರಿಬ್ಬರಲ್ಲ, ರಾಷ್ಟ್ರ ನಾಯಕರಿಂದ ಹಿಡಿದು, ರಾಜ್ಯದ ಕಲಿಗಳೆಲ್ಲ ದಿಕ್ಕು ದಿಕ್ಕುಗಳಲ್ಲೂ ಮತಬೇಟೆಯಾಡಿದ್ದಾರೆ. ಇದೀಗ, ರಾಜ್ಯದ 14 ಕ್ಷೇತ್ರಗಳಲ್ಲಿ ನಡೆಯುವ ಮೊದಲ ಹಂತದ ಮತದಾನಕ್ಕೆ, ಬಹಿರಂಗ ಪ್ರಚಾರ ಅಂತ್ಯವಾಗಿದೆ. ಸಂಜೆ 6 ಗಂಟೆಯಿಂದ 14 ಕ್ಷೇತ್ರಗಳಲ್ಲಿ 144 ಸೆಕ್ಷನ್​​​​​​ ಜಾರಿಯಾಗಿದ್ದು, ಸಭೆ, ಸಮಾರಂಭ, ಮೆರವಣಿಗೆ, ಧ್ವನಿವರ್ಧಕ ಬಳಕೆಗೆಲ್ಲ ಬ್ರೇಕ್​​ ಬಿದ್ದಿದೆ.

ಮನೆ ಮನೆ ಪ್ರಚಾರಕ್ಕೆ ಹಲವು ಷರತ್ತು

ಕರ್ನಾಟಕದಲ್ಲಿ ಮೊದಲ ಹಂತದ (ದೇಶದ 2ನೇ ಹಂತ) ಲೋಕಸಭಾ ಸಮರದ ಅಬ್ಬರ ಬಹಿರಂಗ ಪ್ರಚಾರಕ್ಕೆ ಇಂದು (ಏಪ್ರಿಲ್ 24) ತೆರೆ ಬಿದ್ದಿದೆ. ಹೀಗಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಮುಖಂಡರು ಕ್ಷೇತ್ರ ಬಿಟ್ಟು ತೆರಳಿದ್ದಾರೆ. ಇನ್ನು ಅಭ್ಯರ್ಥಿಗಳು ಮಾತ್ರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು ನಡೆಸಲಿದ್ದಾರೆ.

ಮನೆ ಮನೆ ಮತಯಾಚನೆ ವೇಳೆ 10 ಜನಕ್ಕಿಂತ ಹೆಚ್ಚಿನ ಜನರು ಇರುವಂತಿಲ್ಲ. ಅಭ್ಯರ್ಥಿ ಅಥವಾ ಅಭ್ಯರ್ಥಿ ಪರವಾಗಿ ಏಜೆಂಟ್ ಮೂರು ವಾಹನಗಳ ಬಳಸುವುದಕ್ಕೆ ಮಾತ್ರ ಅವಕಾಶವಿದೆ. ಈ ಮೂರು ವಾಹನಗಳಿಗೆ ಕಡ್ಡಾಯವಾಗಿ ಅನುಮತಿಯನ್ನು ಮೊದಲೇ ಪಡೆದಿರಬೇಕು. ಒಂದು ವಾಹನದಲ್ಲಿ ವಾಹನ ಚಾಲಕರು ಸೇರಿದಂತೆ 4 ಜನರಿಗಿಂತ ಹೆಚ್ಚು ಜನರು ಇರುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇದನ್ನೂ ಓದಿ: Bengaluru Metro: ಲೋಕಸಭಾ ಚುನಾವಣೆ 2024- ಏಪ್ರಿಲ್ 26 ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಹೊರಗಿನವರು ಇದ್ದರೆ ಕ್ರಮ:

ಬಹಿರಂಗ ಪ್ರಚಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಘಟಾನುಘಟಿ ನಾಯಕರು ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಒಂದು ವೇಳೆ ಚುನಾವಣಾ ಸಿಬ್ಬಂದಿ ಕ್ಷೇತ್ರಕ್ಕೆ ಸಂಬಂಧಪಡದವರು ಕಂಡು ಬಂದರೆ ಸೂಕ್ತ ಕ್ರಮ ಜರುಗಿಸಲಿದ್ದಾರೆ. ಹೊಟೇಲ್‌, ಬಾರ್‌ ಆ್ಯಂಡ್‌ ರೆಸ್ಟೊರೆಂಟ್‌ ಸೇರಿದಂತೆ ಇತರೆ ತಂಗುದಾಣಗಳ ಸ್ಥಳಗಳ ಮೇಲೆ ನಿಗಾವಹಿಸಲಿದ್ದು, ತಪಾಸಣೆ ಕಾರ್ಯ ನಡೆಸಲಿದ್ದಾರೆ. ಅಭ್ಯರ್ಥಿಗಳು ಮನೆಮನೆಗೆ ತೆರಳಿ ಮತಯಾಚಿಸಿ ಮತದಾರರ ಮನವೊಲಿಕೆಗೆ ಪ್ರಯತ್ನಿಸಲಿದ್ದಾರೆ. ಅಲ್ಲದೇ, ಪೊಲೀಸರು, ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ವಿವಿಧ ತನಿಖಾ ತಂಡದ ಅಧಿಕಾರಿಗಳು ಸಹ ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯದಲ್ಲಿ ತೊಡಗಲಿದ್ದಾರೆ.

ಕೊನೆ ಕ್ಷಣದ ಕಸರತ್ತು

ಇನ್ನು, ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ ಆಗಿರುವುದರಿಂದ ಹಲವು ಕ್ಷೇತ್ರಗಳಲ್ಲಿ ನಾಯಕರು ಇಂದು ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಮಾಡಿದ್ರು. ಮಂಡ್ಯದ ಹಲವು ಭಾಗಗಳಲ್ಲಿ ಜೆಡಿಎಸ್​ ಅಭ್ಯರ್ಥಿ ಎಚ್​ಡಿ.ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದರು. ಕಾಂಗ್ರೆಸ್​ ಅಭ್ಯರ್ಥಿ ಪರ ನಟ ದರ್ಶನ್​ ಕೂಡ ಮತಯಾಚಿಸಿದ್ರು. ಇನ್ನು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಬಿಎಸ್​ವೈ ರೋಡ್​ ಶೋ ನಡೆಸಿದ್ರು.. ಹಾಸನದ ಹಲವು ಭಾಗಗಳಲ್ಲಿ ಎಚ್​ಡಿ.ದೇವೇಗೌಡರು, ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ರು.

14 ಕ್ಷೇತ್ರಗಳಲ್ಲಿ 3 ದಿನ ಮದ್ಯ ಮಾರಾಟ ನಿಷೇಧ

ನಾಡಿದ್ದು ಅಂದರೆ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, 14 ಕ್ಷೇತ್ರಗಳಲ್ಲಿ ಇಂದು(ಏಪ್ರಿಲ್ 24) ಸಂಜೆ 6ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಆಗಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.. ಇಂದು ಸಂಜೆ 6 ಗಂಟೆಯಿಂದಲೇ ಲಿಕ್ಕರ್ ಶಾಪ್​​ಗಳು ಕ್ಲೋಸ್​ ಆಗಿದ್ದು, ಶುಕ್ರವಾರದ (ಏಪ್ರಿಲ್ 26ರಂದು ಮತದಾನ ಮುಗಿಯುವವರೆಗೆ) ತನಕ ಮದ್ಯ ಮಾರಾಟ ನಿಷೇಧಿಸಲಾಗಿದೆ. ಹೀಗಾಗಿ ಸಂಜೆ ಬಾರ್​​ಗಳು ಬಂದ್​​​ ಆಗುವ ಸಮಯ ಹತ್ತಿರ ಆಗುತ್ತಿದ್ದಂತೆಯೇ ಮದ್ಯ ಪ್ರಿಯರು ಓಡೋಡಿ ಹೋಗಿ ಎಣ್ಣೆ ಖರೀದಿಸಿದ್ದಾರೆ. ಮೂರು ದಿನಕ್ಕೆ ಆಗವಷ್ಟು ಮದ್ಯ ಖರೀದಿಗೆ ಮುಗಿಬಿದ್ದಿರುವ ದೃಶ್ಯ ಕಂಡುಬಂದಿದೆ.

ಏನೇ ಹೇಳಿ, ಇಷ್ಟು ದಿನದ್ದು ಒಂದು ಲೆಕ್ಕವಾದ್ರೆ, ಇನ್ನೆರಡು ದಿನದ್ದೇ ಮತ್ತೊಂದು ರೀತಿ ಇರಲಿದೆ.. ಇಲ್ಲಿ ತನಕ ಅಬ್ಬರಿಸಿದ್ದ ನಾಯಕರೆಲ್ಲ ಮನೆಯಲ್ಲೇ ಕೂತು ರಣತಂತ್ರ ಹೆಣೆಯಲಿದ್ದಾರೆ. ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಾ, ಮತಶಿಕಾರಿ ನಡೆಸಲಿದ್ದಾರೆ.

ಏ. 26ರಂದು ಯಾವೆಲ್ಲಾ ಕ್ಷೇತ್ರಗಳಲ್ಲಿ ಮತದಾನ

  1. ಬೆಂಗಳೂರು ಕೇಂದ್ರ
  2. ಬೆಂಗಳೂರು ದಕ್ಷಿಣ
  3. ಬೆಂಗಳೂರು ಉತ್ತರ
  4. ಬೆಂಗಳೂರು ಗ್ರಾಮಾಂತರ
  5. ಮಂಡ್ಯ
  6. ಮೈಸೂರು-ಕೊಡಗು
  7. ಚಾಮರಾನಗರ
  8. ದಕ್ಷಿಣ ಕನ್ನಡ
  9. ಹಾಸನ
  10. ಶಿವಮೊಗ್ಗ
  11. ಉತ್ತರ ಕನ್ನಡ
  12. ತುಮಕೂರು
  13. ಕೋಲಾರ
  14. ಚಿಕ್ಕಬಳ್ಳಾಪುರ

ಮೇಲಿನ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಈ ಎಲ್ಲಾ ಕ್ಷೇತ್ರಗಳ ಸರ ಹದ್ದಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!