AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ಮತದಾನದ ವೇಳೆ ಕೆಲವೆಡೆ ಗದ್ದಲ, ಗೊಂದಲ, ಎಲ್ಲೆಲ್ಲಿ ಏನೇನನಾಯ್ತು? ಇಲ್ಲಿದೆ ವಿವರ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಬಹುತೇಕ ಶಾಂತವಾಗಿಯೇ ನಡೆಯುತ್ತಿದೆ. ಕೆಲವೆಡೆ ಸಣ್ಣ ಪುಟ್ಟ ಗೊಂದಲ, ಗಲಾಟೆ ನಡೆದಿದೆ. ಕೆಲವೆಡೆ ಮತಯಂತ್ರದಲ್ಲಿ ಲೋಪ ಕಂಡುಬಂದಿದ್ದು, ನಂತರ ಅವುಗಳನ್ನು ಸರಿಪಡಿಸಿ ಮತದಾನ ಮುಂದುವರಿಸಲಾಯೊತು. ಎಲ್ಲೆಲ್ಲಿ ಏನೇನಾಯಿತು ಎಂಬ ವಿವರ ಇಲ್ಲಿದೆ.

ಲೋಕಸಭೆ ಚುನಾವಣೆ: ಮತದಾನದ ವೇಳೆ ಕೆಲವೆಡೆ ಗದ್ದಲ, ಗೊಂದಲ, ಎಲ್ಲೆಲ್ಲಿ ಏನೇನನಾಯ್ತು? ಇಲ್ಲಿದೆ ವಿವರ
ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡಿ ಮತದಾರರಿಗೆ ಆಮಿಷವೊಡ್ಡಿದ ಕಾಂಗ್ರೆಸ್: ಕುಮಾರಸ್ವಾಮಿ ಆರೋಪ
Ganapathi Sharma
|

Updated on:Apr 26, 2024 | 2:30 PM

Share

ಬೆಂಗಳೂರು, ಏಪ್ರಿಲ್ 26: ಲೋಕಸಭೆ ಚುನಾವಣೆಯ (Lok Sabha Elections) ಮೊದಲ ಹಂತದ ಮತದಾನ (Voting) ರಾಜ್ಯದ 14 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಇದೇ ವೇಳೆ, ಕೆಲವೆಡೆ ಗೊಂದಲ ಗಲಾಟೆಗಳು ನಡೆದಿವೆ. ಮಂಡ್ಯದಲ್ಲಿ ಮತದಾನ ಯಂತ್ರ ಕೈ ಕೊಟ್ಟಿದ್ದರಿಂದ ಬೆಳಗ್ಗೆಯೇ ಗೊಂದಲ ಸೃಷ್ಟಿಯಾಗಿತ್ತು. ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ರಂಪಾಟದಿಂದ ಕೆಲ ಕಾಲ ಆತಂಕದ ಸನ್ನಿವೇಶ ಸೃಷ್ಟಿಯಾಗಿತ್ತು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗ್ಯಾರಂಟಿ ಕಾರ್ಡ್​ ಹಂಚಿದ ಆರೋಪ ಕೇಳಿ ಬಂದಿದ್ದು, ಇನ್ನು ಕೆಲವೆಡೆ ಮತದಾನ ದಿನವೂ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಅಭಿಯಾನ ನಡೆಸಿದ್ದಾರೆ.

ಮಂಗಳೂರಿನಲ್ಲಿ ನಡೆದಿದ್ದೇನು?

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ರಂಪಾಟ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಿ ಹೊರ ಬಂದಾಗ, ಈ ರಂಪಾಟ ನಡೆದಿದೆ. ಬಿಜೆಪಿ ಕಾರ್ಯಕರ್ತರು ಪೊಲೀಸ್ ಅಧಿಕಾರಿಯನ್ನೇ ತಳ್ಳಿ ವಾಗ್ವಾದ ನಡೆಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಸ್ಥಳದಲ್ಲಿದ್ದ ಪೊಲೀಸರು ಮತಗಟ್ಟೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರನ್ನ ಓಡಿಸಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಸೋಲಿನ ಭೀತಿಯಿಂದ ಬಿಜೆಪಿಯವರು ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಗ್ಯಾರಂಟಿ ಕಾರ್ಡ್ ಹಂಚಿಕೆ ಆರೋಪ

ಜೆಡಿಎಸ್ ನಾಯಕರು ಕಾಂಗ್ರೆಸ್ ನಾಯಕರ ವಿರುದ್ಧ ಗ್ಯಾರಂಟಿ ಕಾರ್ಡ್​ ಹಂಚಿಕೆ ಆರೋಪ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇನ್ನು ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ, ಕಾಂಗ್ರೆಸ್​ನವರು ಗ್ಯಾರಂಟಿ ಪತ್ರ ಪ್ರದರ್ಶನ ಮಾಡಿದ್ದಾರೆ. ಇಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್​ ಹಂಚಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೆಲ್ಲದರ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಮತದಾನದ ದಿನವೂ ಚೊಂಬು ಅಭಿಯಾನ ನಡೆಸಿದ್ದಾರೆ. ಚೊಂಬು ಪೋಸ್ಟರ್ ಧರಿಸಿದ ಕಾಂಗ್ರೆಸ್ ಏಜೆಂಟರು, ‘ಚೊಂಬೇಶ್ವರನ ಸಹವಾಸ ದಿನವಿಡೀ ಉಪವಾಸ’ ಅಂತಾ ಅಭಿಯಾನ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ರಾಷ್ಟ್ರೀಯ ಯುವಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಖಾಲಿ ಚೊಂಬು ಹಾಗೂ ಗ್ಯಾಸ್ ಸಿಲಿಂಡರ್ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಲೋಕಸಭೆ ಚುನಾವಣೆಗೆ Rapidoದಿಂದ ಉಚಿತ ಸೇವೆ, ಯಾರಿಗೆಲ್ಲ ಲಭ್ಯ, ಇಲ್ಲಿದೆ ಮಾಹಿತಿ

ಇದೆಲ್ಲದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಮತದಾರರು ಹೈರಾಣದರು. ಮತ ಕೇಂದ್ರದಲ್ಲಿ ಶಾಮಿಯಾನ ಹಾಕದ್ದಕ್ಕೆ ಆಕ್ರೋಶ ಹೊರಹಾಕಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಮತದಾರರು ಹೈರಾಣ

ಅತ್ತ ಆನೇಕಲ್​ ಪಟ್ಟಣದಲ್ಲಿ ಪೆಂಡಾಲ್ ಹಾಕಿದ್ದಕ್ಕೆ ವಾಗ್ವಾದ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಪೆಂಡಲ್​ಗಳಿಗೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಮಂಡ್ಯ ಜಿಲ್ಲೆ ಶ್ರೀರಂಗ ಪಟ್ಟಣ ಮತ್ತು ಕೆಆರ್​ಎಸ್​ನಲ್ಲಿ ಮತಯಂತ್ರ ಕೈ ಕೊಟ್ಟಿತ್ತು. ಹೀಗಾಗಿ ಮತ ಯಂತ್ರ ಸರಿಪಡಿಸಲು ಅಧಿಕಾರಿಗಳು ಹರಸಾಹಸ ಪಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:24 pm, Fri, 26 April 24

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?