AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್​​ಗಳಿಗೆ ಹೈಕೋರ್ಟ್ ಅನುಮತಿ

ಮತದಾನ ಮಾಡಿ ಬಂದವರಿಗೆ ಉಚಿತ ಆಹಾರದ ಕೊಡುಗೆ ನೀಡಬೇಕೆಂದು ಬಯಸಿರುವ ಬೆಂಗಳೂರಿನ ಹೋಟೆಲ್​​ಗಳಿಗೆ ಕರ್ನಾಟಕ ಹೈಕೋರ್ಟ್ ಸಿಹಿ ಸುದ್ದಿ ನೀಡಿದೆ. ಉಚಿತ ಆಹಾರ ನೀಡಲು ಷರತ್ತುಬದ್ಧ ಅನುಮತಿ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಸದುದ್ದೇಶದೊಂದಿಗೆ ಕಳೆದ ವರ್ಷ ವಿಧಾನಸಭಾ ಚುನಾವಣೆ ವೇಳೆಯೂ ಕೆಲವು ಹೋಟೆಲ್​​ಗಳು ಉಚಿತ ಆಹಾರದ ಕೊಡುಗೆ ನೀಡಿದ್ದವು.

ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್​​ಗಳಿಗೆ ಹೈಕೋರ್ಟ್ ಅನುಮತಿ
ಹೈಕೋರ್ಟ್
ಗಣಪತಿ ಶರ್ಮಾ
|

Updated on: Apr 24, 2024 | 9:14 AM

Share

ಬೆಂಗಳೂರು, ಏಪ್ರಿಲ್ 24: ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ. ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಚವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಅನುಮತಿ ನೀಡಿದೆ. ಈ ವಿಚಾರವಾಗಿ ಹೈಕೋರ್ಟ್​ ಮಂಗಳವಾರ ಮಧ್ಯಂತರ ಆದೇಶ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್​ಗಳು ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಇದೇ ರೀತಿಯ ಪ್ರಯತ್ನ ಮಾಡಿದ್ದವು.

ಹೋಟೆಲ್​​ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದಾರೆ.

ಅರ್ಜಿದಾರರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಬಾರದು ಎಂಬ ಷರತ್ತಿನೊಂದಿಗೆ, ಅರ್ಜಿದಾರರ ಸಂಘ ಮತ್ತು ಅದರ ಸದಸ್ಯರು 2024 ರ ಏಪ್ರಿಲ್ 26, ರಂದು ಬೆಂಗಳೂರಿನಲ್ಲಿ ಮತದಾರರಿಗೆ ಉಚಿತ ಆಹಾರವನ್ನು ವಿತರಿಸಲು ಅನುಮತಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿದ್ದು ಈ ಕೆಲಸ ಮಾಡುತ್ತಿಲ್ಲ. ಮತ ಚಲಾಯಿಸಿದವರಿಗೆ ಮಾತ್ರ ಈ ರೀತಿಯ ಉಚಿತ ಆಹಾರ ನೀಡಲಾಗುತ್ತದೆ ಎಂದು ಅರ್ಜಿದಾರರು ಹೈಕೋರ್ಟ್​ಗೆ ಸಲ್ಲಿಸಿದ್ದ ಮನವಿಯಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಬೆಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಕಡಿಮೆ ಮತದಾನವಾಗುತ್ತಿದೆ. ಹೀಗಾಗಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮಾತ್ರ ಈ ವಿಧಾನವನ್ನು ಅನುಸರಿಸುತ್ತಿದ್ದೇವೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ವೇಳೆ ಉಚಿತ ಆಹಾರ ನೀಡಲಾಗಿತ್ತು. ಆಗಲೂ ನಮ್ಮ ವಿರುದ್ಧ ಯಾವುದೇ ನಿಯಮ ಉಲ್ಲಂಘನೆಯ ದೂರುಗಳು ದಾಖಲಾಗಿಲ್ಲ ಎಂದು ಅರ್ಜಿದಾರರು ಕೋರ್ಟ್​​ಗೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ