Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ರಾಹುಲ್ ಗಾಂಧಿ ಕಾಯ್ತಿದ್ದಾರೆ: ಜನಾರ್ದನ ರೆಡ್ಡಿ

ಕೊಪ್ಪಳ ತಾಲೂಕಿನ ಹ್ಯಾಟಿ ಮುಂಡರಗಿಯಲ್ಲಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸಿಎಂ ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳುವುದಿಲ್ಲ. ಯಾರಿಗೂ ಕೂಡ ದುಡ್ಡನ್ನು ಕೊಡಲ್ಲ. ಆದರೆ ಹೈಕಮಾಂಡ್​ಗೆ ದುಡ್ಡು ಕೊಡುವ ಸಿಎಂ ಬೇಕಾಕಿದ್ದಾರೆ. ಹೀಗಾಗಿ ಚುನಾವಣೆ ಮುಗಿದ ತಕ್ಷಣ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ಕಾಂಗ್ರೆಸ್​ ಮುಖಂಡ ರಾಹುಲ್ ಗಾಂಧಿ​ ಕಾಯುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 23, 2024 | 5:03 PM

ಕೊಪ್ಪಳ, ಏಪ್ರಿಲ್​ 23: ಕಾಂಗ್ರೆಸ್ ಹೈಕಮಾಂಡ್​ಗೆ ದುಡ್ಡು ಕೊಡುವ ಸಿಎಂ ಬೇಕಿದ್ದಾರೆ. ಹೀಗಾಗಿ ಚುನಾವಣೆ ಮುಗಿದ ತಕ್ಷಣ ಸಿದ್ದರಾಮಯ್ಯರನ್ನು (Siddaramaiah) ಸಿಎಂ ಸ್ಥಾನದಿಂದ ಇಳಿಸಲು ಕಾಂಗ್ರೆಸ್​ ಮುಖಂಡ ರಾಹುಲ್ ಗಾಂಧಿ​ ಕಾಯುತ್ತಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ (Janardhana Reddy) ವಾಗ್ದಾಳಿ ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಹ್ಯಾಟಿ ಮುಂಡರಗಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳುವುದಿಲ್ಲ. ಯಾರಿಗೂ ಕೂಡ ದುಡ್ಡನ್ನು ಕೊಡಲ್ಲ. ಆದರೆ ಹೈಕಮಾಂಡ್​ಗೆ ದುಡ್ಡು ಕೊಡುವ ಸಿಎಂ ಬೇಕಾಕಿದ್ದಾರೆ ಎಂದು ಹೇಳಿದ್ದಾರೆ.

ಹೈಕಮಾಂಡ್​ಗೆ ಡಿ.ಕೆ.ಶಿವಕುಮಾರ್​ರಂತಹ ಮುಖ್ಯಮಂತ್ರಿ ಬೇಕಾಗಿದೆ. ಅದಕ್ಕೆ ಡಿ.ಕೆ,ಶಿವಕುಮಾರ್​ರನ್ನು ಸಿಎಂ ಮಾಡಲು ರಾಹುಲ್ ಕಾಯುತ್ತಿದ್ದಾರೆ. ಮಂಡ್ಯ ಸಮಾವೇಶದಲ್ಲಿ ರಾಹುಲ್ ಈ ಸಂದೇಶ ರವಾನೆ ಮಾಡಿದ್ದಾರೆ ಎಂದಿದ್ದಾರೆ.

ಸಚಿವ ಶಿವರಾಜ್ ತಂಗಡಗಿ ವಿರುದ್ಧ ಮತ್ತೆ ಹರಿಹಾಯ್ದ ಜನಾರ್ದನ ರೆಡ್ಡಿ

ಸಚಿವ ಶಿವರಾಜ್​ ತಂಗಡಗಿರನ್ನು ಮಂತ್ರಿ ಎನ್ಬೇಕೋ, ಕಂತ್ರಿ ಎನ್ಬೇಕೋ ದೇವರಿಗೆ ಗೊತ್ತು. ಹೀಗೆ ಮೋದಿ ವಿರುದ್ಧ ಸಚಿವ ಶಿವರಾಜ ತಂಗಡಗಿ ಮಾತನಾಡುತ್ತಿದ್ದರೆ, ಜನರ ಮಂತ್ರಿ ಅಂತಾ ಕರೆಯಲ್ಲ, ಬದಲಾಗಿ ಕಂತ್ರಿ ಎಂದು ಕರೀತಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ಕಾಂಗ್ರೆಸ್ ಅಂದರೆ ಸಂಸ್ಕೃತಿ ಇಲ್ಲದ ಪಕ್ಷ. ಭಾರತ್ ಮಾತಾ ಕೀ ಜೈ ಎನ್ನಲು ಅಲ್ಲಿ ಪರವಾನಗಿ ಪಡೆಯಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಂದು ಬಿಜೆಪಿ ಪಕ್ಷವನ್ನು ಹಿಡಿತದಲ್ಲಿಟ್ಟುಕೊಂಡಿದ್ದ ಜನಾರ್ದನ ರೆಡ್ಡಿಗೆ ಈಗ ತಮ್ಮ ಶಕ್ತಿಸಾಮರ್ಥ್ಯ ಸಾಬೀತುಪಡಿಸಬೇಕಾದ ಅನಿವಾರ್ಯತೆ

ಐದು ದಿನದ ಹಿಂದೆ ಹನುಮ ಮಾಲೆಯನ್ನು ಧರಿಸಿದ್ದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ನಿನ್ನೆ ಹನುಮನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಹನುಮ ಮಾಲೆಯನ್ನು ವಿಸರ್ಜಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟವನ್ನು ಹತ್ತಿ, ಸಚಿವ ಶಿವರಾಜ್ ತಂಗಡಗಿ, ಹನುಮ ಮಾಲೆಯನ್ನು ವಿಸರ್ಜಿಸಿದ್ದಾರೆ. ಆಂಜನೇಯನ ದರ್ಶನ ಪಡೆದ ತಂಗಡಗಿ, ಕೆಲ ಹೊತ್ತು ಹನುಮಾನ ಚಾಲೀಸ್ ಪಠಣ ಕೂಡ ಮಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ