AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ರಾಹುಲ್ ಗಾಂಧಿ ಕಾಯ್ತಿದ್ದಾರೆ: ಜನಾರ್ದನ ರೆಡ್ಡಿ

ಕೊಪ್ಪಳ ತಾಲೂಕಿನ ಹ್ಯಾಟಿ ಮುಂಡರಗಿಯಲ್ಲಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸಿಎಂ ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳುವುದಿಲ್ಲ. ಯಾರಿಗೂ ಕೂಡ ದುಡ್ಡನ್ನು ಕೊಡಲ್ಲ. ಆದರೆ ಹೈಕಮಾಂಡ್​ಗೆ ದುಡ್ಡು ಕೊಡುವ ಸಿಎಂ ಬೇಕಾಕಿದ್ದಾರೆ. ಹೀಗಾಗಿ ಚುನಾವಣೆ ಮುಗಿದ ತಕ್ಷಣ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ಕಾಂಗ್ರೆಸ್​ ಮುಖಂಡ ರಾಹುಲ್ ಗಾಂಧಿ​ ಕಾಯುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on: Apr 23, 2024 | 5:03 PM

Share

ಕೊಪ್ಪಳ, ಏಪ್ರಿಲ್​ 23: ಕಾಂಗ್ರೆಸ್ ಹೈಕಮಾಂಡ್​ಗೆ ದುಡ್ಡು ಕೊಡುವ ಸಿಎಂ ಬೇಕಿದ್ದಾರೆ. ಹೀಗಾಗಿ ಚುನಾವಣೆ ಮುಗಿದ ತಕ್ಷಣ ಸಿದ್ದರಾಮಯ್ಯರನ್ನು (Siddaramaiah) ಸಿಎಂ ಸ್ಥಾನದಿಂದ ಇಳಿಸಲು ಕಾಂಗ್ರೆಸ್​ ಮುಖಂಡ ರಾಹುಲ್ ಗಾಂಧಿ​ ಕಾಯುತ್ತಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ (Janardhana Reddy) ವಾಗ್ದಾಳಿ ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಹ್ಯಾಟಿ ಮುಂಡರಗಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳುವುದಿಲ್ಲ. ಯಾರಿಗೂ ಕೂಡ ದುಡ್ಡನ್ನು ಕೊಡಲ್ಲ. ಆದರೆ ಹೈಕಮಾಂಡ್​ಗೆ ದುಡ್ಡು ಕೊಡುವ ಸಿಎಂ ಬೇಕಾಕಿದ್ದಾರೆ ಎಂದು ಹೇಳಿದ್ದಾರೆ.

ಹೈಕಮಾಂಡ್​ಗೆ ಡಿ.ಕೆ.ಶಿವಕುಮಾರ್​ರಂತಹ ಮುಖ್ಯಮಂತ್ರಿ ಬೇಕಾಗಿದೆ. ಅದಕ್ಕೆ ಡಿ.ಕೆ,ಶಿವಕುಮಾರ್​ರನ್ನು ಸಿಎಂ ಮಾಡಲು ರಾಹುಲ್ ಕಾಯುತ್ತಿದ್ದಾರೆ. ಮಂಡ್ಯ ಸಮಾವೇಶದಲ್ಲಿ ರಾಹುಲ್ ಈ ಸಂದೇಶ ರವಾನೆ ಮಾಡಿದ್ದಾರೆ ಎಂದಿದ್ದಾರೆ.

ಸಚಿವ ಶಿವರಾಜ್ ತಂಗಡಗಿ ವಿರುದ್ಧ ಮತ್ತೆ ಹರಿಹಾಯ್ದ ಜನಾರ್ದನ ರೆಡ್ಡಿ

ಸಚಿವ ಶಿವರಾಜ್​ ತಂಗಡಗಿರನ್ನು ಮಂತ್ರಿ ಎನ್ಬೇಕೋ, ಕಂತ್ರಿ ಎನ್ಬೇಕೋ ದೇವರಿಗೆ ಗೊತ್ತು. ಹೀಗೆ ಮೋದಿ ವಿರುದ್ಧ ಸಚಿವ ಶಿವರಾಜ ತಂಗಡಗಿ ಮಾತನಾಡುತ್ತಿದ್ದರೆ, ಜನರ ಮಂತ್ರಿ ಅಂತಾ ಕರೆಯಲ್ಲ, ಬದಲಾಗಿ ಕಂತ್ರಿ ಎಂದು ಕರೀತಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ಕಾಂಗ್ರೆಸ್ ಅಂದರೆ ಸಂಸ್ಕೃತಿ ಇಲ್ಲದ ಪಕ್ಷ. ಭಾರತ್ ಮಾತಾ ಕೀ ಜೈ ಎನ್ನಲು ಅಲ್ಲಿ ಪರವಾನಗಿ ಪಡೆಯಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಂದು ಬಿಜೆಪಿ ಪಕ್ಷವನ್ನು ಹಿಡಿತದಲ್ಲಿಟ್ಟುಕೊಂಡಿದ್ದ ಜನಾರ್ದನ ರೆಡ್ಡಿಗೆ ಈಗ ತಮ್ಮ ಶಕ್ತಿಸಾಮರ್ಥ್ಯ ಸಾಬೀತುಪಡಿಸಬೇಕಾದ ಅನಿವಾರ್ಯತೆ

ಐದು ದಿನದ ಹಿಂದೆ ಹನುಮ ಮಾಲೆಯನ್ನು ಧರಿಸಿದ್ದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ನಿನ್ನೆ ಹನುಮನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಹನುಮ ಮಾಲೆಯನ್ನು ವಿಸರ್ಜಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟವನ್ನು ಹತ್ತಿ, ಸಚಿವ ಶಿವರಾಜ್ ತಂಗಡಗಿ, ಹನುಮ ಮಾಲೆಯನ್ನು ವಿಸರ್ಜಿಸಿದ್ದಾರೆ. ಆಂಜನೇಯನ ದರ್ಶನ ಪಡೆದ ತಂಗಡಗಿ, ಕೆಲ ಹೊತ್ತು ಹನುಮಾನ ಚಾಲೀಸ್ ಪಠಣ ಕೂಡ ಮಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ