AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯತ್ಯಾಸ ಇಷ್ಟೇ! ಕಾಂಗ್ರೆಸ್​ನ ಚೊಂಬಾಸ್ತ್ರಕ್ಕೆ ಟ್ವೀಟ್​ನಲ್ಲೇ ತಿರುಗೇಟು ನೀಡಿದ ಬಿಜೆಪಿ

ಕಾಂಗ್ರೆಸ್​ನ ಚೊಂಬು ವಿಚಾರವಾಗಿ ಟ್ವೀಟ್​ನಲ್ಲೇ ಕಿಡಿಕಾರಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯ ಫೋಟೋ ಹಂಚಿಕೊಂಡಿದೆ. ಒಂದು ಬದಿಯಲ್ಲಿ 2013ರಲ್ಲಿ ಚೊಂಬು ಹಿದಿದುಕೊಂಡು ಸಿದ್ದರಾಮಯ್ಯ ಬಯಲಿಗೆ ನಡೆದುಕೊಂಡು ಹೋಗುತ್ತಿದ್ದರೆ, ಮತ್ತೊಂದೆಡೆ 2023ರಲ್ಲಿ ಸ್ವಚ್ಛ್ ಭಾರತ್​ ಮಿಷನ್​ ಯೋಜನೆಯಡಿಯಲ್ಲಿ ನಿರ್ಮಿಸಲಾದ ಶೌಚಾಲಯ ಬಳಕೆ ಮಾಡುತ್ತಿರುವುದಾಗಿ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ವ್ಯತ್ಯಾಸ ಇಷ್ಟೇ ಎಂದು ಟಾಂಗ್​ ನೀಡಿದೆ.

ವ್ಯತ್ಯಾಸ ಇಷ್ಟೇ! ಕಾಂಗ್ರೆಸ್​ನ ಚೊಂಬಾಸ್ತ್ರಕ್ಕೆ ಟ್ವೀಟ್​ನಲ್ಲೇ ತಿರುಗೇಟು ನೀಡಿದ ಬಿಜೆಪಿ
ಬಿಜೆಪಿ ಪೋಸ್ಟ್​
ಗಂಗಾಧರ​ ಬ. ಸಾಬೋಜಿ
|

Updated on:Apr 20, 2024 | 9:52 PM

Share

ಬೆಂಗಳೂರು, ಏಪ್ರಿಲ್​ 20: ಲೋಕಸಭೆ ಚುನಾವಣೆ (Lok Sabha Elections) ಕಣ ದಿನೇ ದಿನೆ ಕಾವೇರ್ತಿದೆ. ಎದುರಾಳಿಗಳ ಮಧ್ಯೆ ಮಾತಿನ ವಾಕ್ಸಮರವೇ ನಡೀತಿವೆ. ಇದರ ಮಧ್ಯೆ ಕೇಂದ್ರ ಸರ್ಕಾರದ 10 ವರ್ಷದ ಸಾಧನೆ ಬಗ್ಗೆ ಕಾಂಗ್ರೆಸ್​ ದಿನ ಪತ್ರಿಕೆಗಳಲ್ಲಿ ಕೊಟ್ಟ ಚೊಂಬಿನ ಜಾಹೀರಾತು ಸದ್ಯ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಕಾಂಗ್ರೆಸ್​ ಜಾಹೀರಾತಿಗೆ ಬಿಜೆಪಿ ಕೂಡ ತಿರುಗೇಟು ನೀಡಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಫೋಟೋ ಹಂಚಿಕೊಂಡಿರುವ ಬಿಜೆಪಿ, ಒಂದು ಬದಿಯಲ್ಲಿ 2013ರಲ್ಲಿ ಚೊಂಬು ಹಿದಿದುಕೊಂಡು ಸಿದ್ದರಾಮಯ್ಯ ಬಯಲಿಗೆ ನಡೆದುಕೊಂಡು ಹೋಗುತ್ತಿದ್ದರೆ, ಮತ್ತೊಂದೆಡೆ 2023ರಲ್ಲಿ ಸ್ವಚ್ಛ್ ಭಾರತ್​ ಮಿಷನ್​ ಯೋಜನೆಯಡಿಯಲ್ಲಿ ನಿರ್ಮಿಸಲಾದ ಶೌಚಾಲಯ ಬಳಕೆ ಮಾಡುತ್ತಿರುವುದಾಗಿ ಹಂಚಿಕೊಳ್ಳುವ ಮೂಲಕ ವ್ಯತ್ಯಾಸ ಇಷ್ಟೇ ಎಂದು ಟಾಂಗ್​ ನೀಡಿದೆ.

ಪ್ರಲ್ಹಾದ್​ ಜೋಶಿ ಕಿಡಿ

ಶೌಚಾಲಯಗಳನ್ನು ಕಟ್ಟಿಸಿ ‘ ಕೈ ‘ ಯಲ್ಲಿದ್ದ ಚೊಂಬನ್ನು ಬಿಡುವಂತೆ ಮಾಡಿ ಸ್ವಚ್ಚ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿದ್ದು ಮೋದಿ ಸರ್ಕಾರ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕೂಡ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್​ ಸರ್ಕಾರದ ವಿರುದ್ಧ ಟ್ವೀಟ್​ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಇದನ್ನೂ ಓದಿ: PM Modi in Bengaluru: ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದ ಕಾಂಗ್ರೆಸ್; ಬೆಂಗಳೂರಿನಲ್ಲಿ ಮೋದಿ ವ್ಯಂಗ್ಯ

ಪ್ರಧಾನಿ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಬರೀ ಚೊಂಬು. ಎಲ್ಲರ ಖಾತೆಗೆ 15 ಲಕ್ಷ ರೂ. ಹಣ ಹಾಕುವ ಚೊಂಬು. ರೈತರ ಆದಾಯ ಡಬಲ್ ಮಾಡುವ ಚೊಂಬು. ತೆರಿಗೆ ಹಂಚಿಕೆಯಲ್ಲಿ ಚೊಂಬು, ಬರ/ನೆರೆ ಪರಿಹಾರದಲ್ಲೂ ಚೊಂಬು, 27 ಜನ ಬಿಜೆಪಿ, ಜೆಡಿಎಸ್ ಸಂಸದರು ರಾಜ್ಯಕ್ಕೆ ನೀಡಿದ ಕೊಡುಗೆ ಕೇವಲ ಚೊಂಬು ಅನ್ನೋ ಮೂಲಕ ಮತದಾರರನ್ನ ಸೆಳೆಯಲು ಕಾಂಗ್ರೆಸ್​ ಜಾಹೀರಾತು ಅಸ್ತ್ರ ಪ್ರಯೋಗಿಸಿತ್ತು.

ಬಿಜೆಪಿ ಟ್ವೀಟ್​ 

ಇನ್ನು ಕಾಂಗ್ರೆಸ್​ನ ಚೊಂಬು ವಿಚಾರವಾಗಿ ಟ್ವೀಟ್​ನಲ್ಲೇ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕಾಂಗ್ರೆಸ್ಸಿಗರೇ, ತಮಿಳುನಾಡಿಗೆ ನೀರು ಬಿಟ್ಟು ಕಾವೇರಿ ಮಾತೆಯ ‘ತುಂಬಿದ ಕೊಡ’ ಬರಿದು ಮಾಡಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟವರು ನೀವು. ಬೆಳೆ ಒಣಗಿಸಿ ರೈತರಿಗೆ ಚೊಂಬು ಕೊಟ್ಟವರು ನೀವು ಅಂತಾ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಮ್ಮ ಮಕ್ಕಳ ಮೇಲೆ ಹಲ್ಲೆ, ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಫೋಟ: ಕಾಂಗ್ರೆಸ್ ವಿರುದ್ಧ ಬೆಂಗಳೂರಿನಲ್ಲಿ ಮೋದಿ ವಾಗ್ದಾಳಿ

ಕಾಂಗ್ರೆಸ್‌ನ ಚೊಂಬಾಸ್ತ್ರಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ, ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಹೀಗಾಗಿ ಚೊಂಬು ಹಿಡಿದು ಭಿಕ್ಷೆ ಬೇಡ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದರು. ಇದಕ್ಕೆ ತಿರುಗೇಟು ಕೊಟ್ಟ ಸಚಿವ ಪ್ರಿಯಾಂಕ್ ಖರ್ಗೆ, ಜೆಡಿಎಸ್ ಕಾರ್ಯಕರ್ತರಿಗೆ ಕುಮಾರಸ್ವಾಮಿ ಚೊಂಬು ಕೊಟ್ಟಿದ್ದಾರೆ ಅಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:48 pm, Sat, 20 April 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?