AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗ ಭರ್ಜರಿ ಬೇಟೆ: ಆರೇ ದಿನಗಳಲ್ಲಿ 9 ಕೋಟಿ ರೂ.ಗೂ ಹೆಚ್ಚು ನಗದು, ಚಿನ್ನಾಭರಣ ವಶ

ಲೋಕಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜ್ಯದಾದ್ಯಂತ ಚುನಾವಣಾ ಆಯೋಗದ ಅಧಿಕಾರಿಗಳು ಅಕ್ರಮ ತಡೆಗೆ ಭರ್ಜರಿ ಬೇಟೆ ಆರಂಭಿಸಿದ್ದಾರೆ. ಕೇವಲ ಆರೇಳು ದಿನಗಳ ಅವಧಿಯಲ್ಲಿ 9 ಕೋಟಿ ರೂ.ಗೂ ಹೆಚ್ಚು ನಗದು ವಶಪಡಿಸಿಕೊಳ್ಳಲಾಗಿದ್ದು, ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಮದ್ಯ ವಶಪಡಿಸಿಕೊಂಡಿದ್ದಾರೆ.

ಚುನಾವಣಾ ಆಯೋಗ ಭರ್ಜರಿ ಬೇಟೆ: ಆರೇ ದಿನಗಳಲ್ಲಿ 9 ಕೋಟಿ ರೂ.ಗೂ ಹೆಚ್ಚು ನಗದು, ಚಿನ್ನಾಭರಣ ವಶ
ಚುನಾವಣಾ ಆಯೋಗ ಭರ್ಜರಿ ಬೇಟೆ: ಆರೇ ದಿನಗಳಲ್ಲಿ 9 ಕೋಟಿ ರೂ.ಗೂ ಹೆಚ್ಚು ನಗದು, ಚಿನ್ನಾಭರಣ ವಶ
ಗಣಪತಿ ಶರ್ಮಾ
|

Updated on:Mar 23, 2024 | 11:43 AM

Share

ಬೆಂಗಳೂರು, ಮಾರ್ಚ್​ 23: ಲೋಕಸಭೆ ಚುನಾವಣೆ (Lok Sabha Elections) ಸಂಬಂಧ ಮಾದರಿ ನೀತಿ ಸಂಹಿತೆ (Model Code of Conduct) ಜಾರಿಗೆ ಬಂದ ಬೆನ್ನಲ್ಲೇ ಚುನಾವಣಾ ಆಯೋಗದ (Election Commission) ಅಧಿಕಾರಿಗಳು ಅಕ್ರಮ ತಡೆಗೆ ಭರ್ಜರಿ ಬೇಟೆ ಆರಂಭಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ 2.75 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ರಾಜ್ಯದಲ್ಲಿ ಒಟ್ಟು 9.64 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ.

ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಫ್ಲೈಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 9.64 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಜತೆಗೆ, 15.6 ಲಕ್ಷ ರೂಪಾಯಿ ಮೌಲ್ಯದ ಉಚಿತ ಕೊಡುಗೆಗಳಿಗೆ ಕೊಂಡೊಯ್ಯುತ್ತಿದ್ದ ವಸ್ತುಗಳು, 7.20 ಲಕ್ಷ ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. 53 ಲಕ್ಷಕ್ಕೂ ಅಧಿಕ ಮೌಲ್ಯದ 52.12 ಕೆಜಿ ಮಾದಕ ವಸ್ತುಗಳು ಮತ್ತು 36 ಕೋಟಿ ರೂ.ಗೂ ಅಧಿಕ ಮೌಲ್ಯದ ಅಮೂಲ್ಯ ಲೋಹಗಳನ್ನು ವಶಪಡಿಸಿಕೊಳ್ಳಲಾಗಿದೆ.

402 ಎಫ್​ಐಆರ್ ದಾಖಲು

ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹಗಳು ಮತ್ತು ಉಚಿತ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ ಅಧಿಕಾರಿಗಳು 402 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. 65,432 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದೆ. 831 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಂಟು ಶಸ್ತ್ರಾಸ್ತ್ರ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. 3,853 ಪ್ರಕರಣಗಳನ್ನು ಸಿಆರ್‌ಪಿಸಿಯ ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ ದಾಖಲಿಸಲಾಗಿದೆ. ಈವರೆಗೆ 4,136 ಜನರನ್ನು ಬಂಧಿಸಲಾಗಿದೆ.

ಅಬಕಾರಿ ಇಲಾಖೆಯು 471 ಗಂಭೀರ ಪ್ರಕರಣಗಳು, ಪರವಾನಗಿ ಷರತ್ತುಗಳ ಉಲ್ಲಂಘನೆಗಾಗಿ 359 ಪ್ರಕರಣಗಳು, 24 NDPS (ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಆಕ್ಟ್) ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 15 (ಎ) ಅಡಿಯಲ್ಲಿ 1,477 ಪ್ರಕರಣಗಳನ್ನು ದಾಖಲಿಸಿದೆ. 284 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಂಡಿದೆ.

ಚಿತ್ರದುರ್ಗ ಲೋಕಸಭೆ ಕ್ಷೇತ್ರದ ನಾಯಕನಹಟ್ಟಿ ಕ್ರಾಸ್ ಚೆಕ್‌ಪೋಸ್ಟ್‌ನಲ್ಲಿ 38 ಲಕ್ಷ ರೂ. ನಗದು, ಕಲಬುರಗಿ ಸಂಸದೀಯ ಕ್ಷೇತ್ರದ ಹಿರೋಳ್ಳಿ ಚೆಕ್‌ಪೋಸ್ಟ್‌ನಲ್ಲಿ 12.68 ಲಕ್ಷ ರೂ. ನಗದು, ಚಿಗರಳ್ಳಿ ಚೆಕ್‌ಪೋಸ್ಟ್‌ನಲ್ಲಿ 33 ಲಕ್ಷ ರೂಪಾಯಿ ಮೌಲ್ಯದ 180 ಪಾನ್ ಮಸಾಲ ಬ್ಯಾಗ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಿಡದಿ: ತಪಾಸಣೆ ವೇಳೆ ಕಂತೆ ಕಂತೆ‌ ನೋಟು, ಬರೋಬ್ಬರಿ 5.30 ಕೋಟಿ ರೂ. ವಶಕ್ಕೆ

ಏತನ್ಮಧ್ಯೆ, ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮಾಗಡಿ ಚೆಕ್‌ಪೋಸ್ಟ್‌ನಲ್ಲಿ 13.20 ಲಕ್ಷ ರೂ. ಮೌಲ್ಯದ 243.56 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ 38 ಲಕ್ಷ ರೂ., ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 28 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:42 am, Sat, 23 March 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ