Lok Sabha Elections: ಚುನಾವಣಾ ಕಣದಲ್ಲಿ ಕೋಟಿ ಕೋಟಿ ಹಣ: ಈವರೆಗೆ ಸೀಜ್ ಆದ ಮೊತ್ತ ಕೇಳಿದ್ರೆ ಬೆಚ್ಚಿ ಬೀಳುತ್ತೀರಿ!

ಲೋಕಸಭೆ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ಈವರೆಗೆ ಕರ್ನಾಟಕದಲ್ಲಿ ಚುನಾವಣಾ ಆಯೋಗದ ಅಕ್ರಮ ತಡೆಗೆ ಭರ್ಜರಿ ಬೇಟೆಯಾಡಿದೆ. ಚುನಾವಣಾ ಕಣದಲ್ಲಿ ಕುರುಡು ಕಾಂಚಾಣದ ಹರಿವು ಹೆಚ್ಚಾಗಿರುವುದೂ ಇದರಿಂದ ತಿಳಿದುಬಂದಿದೆ. ಈವರೆಗೆ ಆಯೋಗ ವಶಪಡಿಸಿಕೊಂಡ ನಗದು, ಮದ್ಯ, ಇತರ ವಸ್ತುಗಳ ಒಟ್ಟು ಮೌಲ್ಯ ಎಷ್ಟು ಎಂಬ ವಿವರ ಇಲ್ಲಿದೆ.

Lok Sabha Elections: ಚುನಾವಣಾ ಕಣದಲ್ಲಿ ಕೋಟಿ ಕೋಟಿ ಹಣ: ಈವರೆಗೆ ಸೀಜ್ ಆದ ಮೊತ್ತ ಕೇಳಿದ್ರೆ ಬೆಚ್ಚಿ ಬೀಳುತ್ತೀರಿ!
ಚುನಾವಣಾ ಕಣದಲ್ಲಿ ಕೋಟಿ ಕೋಟಿ ಹಣ
Follow us
|

Updated on: Mar 30, 2024 | 7:11 AM

ಬೆಂಗಳೂರು, ಮಾರ್ಚ್​ 30: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ (Model Code of Conduct) ಜಾರಿಗೆ ಬಂದಿದ್ದು, ಆ ನಂತರ ಈವರೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 20.85 ಕೋಟಿ ರೂಪಾಯಿ ನಗದು ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ (Election Commission) ತಿಳಿಸಿದೆ. ಕರ್ನಾಟಕದಲ್ಲಿ ಇಲ್ಲಿಯವರೆಗೆ ಒಟ್ಟು 62.42 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯೋಗ ಹೇಳಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ 28 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಲಿದೆ.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಫ್ಲೈಯಿಂಗ್ ಸ್ಕ್ವಾಡ್, ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 20.85 ಕೋಟಿ ನಗದು, 70.86 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು (ಮತದಾರರಿಗೆ ಉಚಿತವಾಗಿ ಹಂಚಲು ಕೊಂಡೊಯ್ಯುತ್ತಿದ್ದುದು), 27 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 8.63 ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

1.47 ಕೋಟಿ ರೂ.ಗೂ ಅಧಿಕ ಮೌಲ್ಯದ 211.23 ಕೆಜಿ ಮಾದಕ ವಸ್ತುಗಳು, 9 ಕೋಟಿ ರೂ.ಗೂ ಅಧಿಕ ಮೌಲ್ಯದ 15 ಕೆಜಿಗಿಂತ ಹೆಚ್ಚಿನ ಚಿನ್ನ, 27 ಲಕ್ಷ ರೂ.ಗೂ ಅಧಿಕ ಮೌಲ್ಯದ 59.04 ಕೆಜಿ ಬೆಳ್ಳಿ ಹಾಗೂ 9 ಲಕ್ಷ ರೂ. ಮೌಲ್ಯದ 21.17 ಕ್ಯಾರೆಟ್ ವಜ್ರವನ್ನು ವಶಪಡಿಸಿಕೊಳ್ಳಲಾಗಿದೆ.

ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತವಾಗಿ ಹಂಚಲು ಕೊಂಡೊಯ್ಯುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ ಅಧಿಕಾರಿಗಳು 969 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ತುಮಕೂರಿನಲ್ಲಿ 14 ಲಕ್ಷ ಹಣ, ಚಿನ್ನ ಜಪ್ತಿ

ತುಮಕೂರಿನಲ್ಲಿ ಶುಕ್ರವಾರ ಕಾರ್ಯಾಚರಣೆ ನಡೆಸಿರುವ ಚುನಾವಣಾ ಅಧಿಕಾರಿಗಳು ಬಟವಾಡಿ ಚೆಕ್​ಪೋಸ್ಟ್​ನಲ್ಲಿ ಆಂಧ್ರ ಮೂಲದ ನಾಗಭೂಷಣ್ ಎಂಬುವರು ಬಸ್​ನಲ್ಲಿ 14.63 ಲಕ್ಷ ಹಣ, 128 ಗ್ರಾಂ ಚಿನ್ನಾಭರಣ ಸಾಗಿಸುತ್ತಿದ್ದುದನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.

ಇನ್ನೂ ಎಲ್ಲೆಲ್ಲಿ ಏನೇನು ಸಿಕ್ತು?

ಕರ್ನಾಟಕ, ತಮಿಳುನಾಡು ಭಾಗದ ಜೂಜುವಾಡಿ ಚೆಕ್​ಪೋಸ್ಟ್​ನಲ್ಲಿ ಬೆಂಗಳೂರಿನಿಂದ ಹೊಸೂರು ಕಡೆ ತೆರಳುತ್ತಿದ್ದ ಕಾರಿನಲ್ಲಿ ದಾಖಲೆ ಇಲ್ಲದ 10 ಲಕ್ಷ ರೂಪಾಯಿ ನಗದನ್ನು ಶುಕ್ರವಾರ ಜಪ್ತಿ ಮಾಡಲಾಗಿದೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್​ನಲ್ಲಿ 7 ಲಕ್ಷ 98 ಸಾವಿರ ಹಣ ಸೀಜ್ ಆಗಿದೆ. ವ್ಯಕ್ತಿಯೊಬ್ಬ ಗೋವಾದಿಂದ ಬೆಳಗಾವಿಗೆ ಬಸ್​ನಲ್ಲಿ ಹಣ ಸಾಗಿಸ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿ ಜಿಲ್ಲೆ ಕಂಪ್ಲಿಯ ಕೋಟೆ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಬೈಕ್​ನಲ್ಲಿ ಸಾಗಿಸುತ್ತಿದ್ದ 8.23 ಲಕ್ಷ ರೂ. ನಗದು ಜಪ್ತಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ತಮ್ಮ ಹೆಸರಿನ ಮತ್ತೋರ್ವ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಬಗ್ಗೆ ಡಾ ಸಿ.ಎನ್. ಮಂಜುನಾಥ್ ಹೇಳಿದ್ದಿಷ್ಟು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರದಲ್ಲಿ 6 ಲಕ್ಷ 37 ಸಾವಿರ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ಸರ್ಕಾರಿ ಬಸ್​​ನಲ್ಲಿ 114 ಗ್ರಾಂ ಚಿನ್ನ, 3 ಕೆಜಿ 289 ಗ್ರಾಂ ಬೆಳ್ಳಿ ಆಭರಣಗಳನ್ನ ವಶಕ್ಕೆ ಪಡೆಯಲಾಗಿದೆ. ಮತ್ತೊಂದೆಡೆ, ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಚೆಕ್​​ಪೋಸ್ಟ್​ನಲ್ಲಿ 2 ಲಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ-ಚಿತ್ರದಹಳ್ಳಿ ರಸ್ತೆಯಲ್ಲಿ 1 ಲಕ್ಷ 50 ಸಾವಿರ ಹಣ, ಅತ್ತ ಧಾರವಾಡದ ಕೃಷಿ ವಿವಿ ಬಳಿಯ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3 ಲಕ್ಷ 70 ಸಾವಿರ ನಗದು ಸೀಜ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ