ಲೋಕಸಭೆ ಫಲಿತಾಂಶ: ಕರ್ನಾಟಕದಲ್ಲಿ ಗಮನ ಸೆಳೆದ ನೋಟಾ, ಈ ಕ್ಷೇತ್ರದಲ್ಲೇ ಹೆಚ್ಚು

ಹೆಚ್ಚಿನ ನಗರ ಅಥವಾ ಗ್ರಾಮೀಣ ಮತದಾರರು ನೋಟಾ ಆಯ್ಕೆ ಮಾಡಿದ್ದಾರೆಯೇ ಮತ್ತು ಯಾವ ಕ್ಷೇತ್ರದಲ್ಲಿದ್ದಾರೆ ಎಂಬುದನ್ನು ಈಗ ಖಚಿತಪಡಿಸಿಕೊಳ್ಳಬೇಕಾಗಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ. ಜತೆಗೆ, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದೂ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭೆ ಫಲಿತಾಂಶ: ಕರ್ನಾಟಕದಲ್ಲಿ ಗಮನ ಸೆಳೆದ ನೋಟಾ, ಈ ಕ್ಷೇತ್ರದಲ್ಲೇ ಹೆಚ್ಚು
ನೋಟಾ
Follow us
|

Updated on: Jun 05, 2024 | 11:44 AM

ಬೆಂಗಳೂರು ಜೂನ್ 5: ಲೋಕಸಭೆ ಚುನಾವಣೆಯ (Lok Sabha Elections) ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಕರ್ನಾಟಕದಲ್ಲಿ (Karnataka) ನೋಟಾ ಮತಗಳ ಪ್ರಮಾಣ ಗಮನ ಸೆಳೆಯುವಂತೆ ಮಾಡಿದೆ. ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಹೊರತಾಗಿ, ಮೇಲಿನ ಯಾವುದೂ ಇಲ್ಲ ಎಂಬ ಆಯ್ಕೆ (NOTA) ಸಾಕಷ್ಟು ಗಮನ ಸೆಳೆದಿದೆ. ಚುನಾವಣಾ ಆಯೋಗದ ಅಂತಿಮ ವರದಿಗಳ ಪ್ರಕಾರ, ರಾಜ್ಯಾದ್ಯಂತ 2,18,300 ನೋಟಾ ಮತಗಳು ಚಲಾವಣೆಯಾಗಿವೆ. ಇದರ ಮತ ಹಂಚಿಕೆ ಪ್ರಮಾಣ ಶೇ 0.56 ಆಗಿದೆ. 2019 ರ ಚುನಾವಣೆಗೆ ಹೋಲಿಸಿದರೆ ಇದು ಸ್ವಲ್ಪ ಕಡಿಮೆಯಾಗಿದೆ. ಆಗ 2,50,810 ನೋಟಾ ಮತಗಳು ಚಲಾವಣೆಯಾಗಿದ್ದವು. ಮತ ಹಂಚಿಕೆ ಪ್ರಮಾಣ ಶೇ 0.72 ರಷ್ಟಿತ್ತು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲೇ ಹೆಚ್ಚು

ಅಂಕಿಅಂಶಗಳ ಪ್ರಕಾರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 23,576 ನೋಟಾ ಮತಗಳು ಚಲಾವಣೆಯಾಗಿವೆ. ಇದು ರಾಜ್ಯದಲ್ಲಿ ಚಲಾವಣೆಯಾದ ಅತಿ ಹೆಚ್ಚು ನೋಟಾ ಮತಗಳಾಗಿವೆ. ನಂತರದ ಸ್ಥಾನದಲ್ಲಿ ಬೆಂಗಳೂರು ಉತ್ತರ (13,554) ಮತ್ತು ಬೆಂಗಳೂರು ಸೆಂಟ್ರಲ್ (12,126) ಇವೆ. ಚಿಕ್ಕೋಡಿಯಲ್ಲಿ 2,608 ನೋಟಾ ಮತಗಳು ಚಲಾವಣೆಯಾಗಿವೆ. ಅತಿ ಕಡಿಮ ನೋಟಾ ಮತ ಚಲಾವಣೆಯಾಗಿದ್ದು ಚಿಕ್ಕೋಡಿಯಲ್ಲಿ.

ನೋಟಾ ಆಯ್ಕೆ ಮಾಡುವ ಮತದಾರರು ಅಭ್ಯರ್ಥಿಗಳನ್ನು ತಿರಸ್ಕರಿಸುತ್ತಾರೆ. ಕಣದಲ್ಲಿರುವ ಎಲ್ಲ ಅಭ್ಯರ್ಥಿಗಳ ಬಗ್ಗೆ ಅವರ ಅಸಮಾಧಾನವನ್ನು ಇದು ಸೂಚಿಸುತ್ತದೆ.

ರಾಜಕೀಯ ಪಕ್ಷಗಳು ಇದನ್ನು ಗಮನಿಸುವುದಿಲ್ಲ ಎಂದು ರಾಜಕೀಯ ತಜ್ಞ ಚಂದನ್ ಗೌಡ ತಿಳಿಸಿದ್ದಾರೆ. ಇದು ರಾಜಕೀಯ ಪಕ್ಷಗಳಿಗೆ ಮುಖ್ಯವಲ್ಲ, ಆದರೆ ನಾವು ಅದನ್ನು ನಿರ್ಲಕ್ಷಿಸಬಾರದು. ಇದು ಅಭ್ಯರ್ಥಿಯ ಆಯ್ಕೆಯ ಬಗ್ಗೆ ಮತದಾರರ ಅಸಮಾಧಾನದ ಸಂಕೇತವಾಗಿದೆ. ಉತ್ತಮ ಅಭ್ಯರ್ಥಿಗಳ ಅಗತ್ಯತೆ ಮತ್ತು ಉತ್ತಮ ವಿಷಯಗಳ ಕುರಿತು ಚರ್ಚೆಯಾಗಬೇಕು ಎಂಬುದನ್ನು ಇದು ತೋರಿಸುತ್ತದೆ. ಇದು ಪೌರತ್ವದ ಸಮಸ್ಯೆಯಾಗಿದ್ದು, ಮತದಾರರು ಪ್ರಜಾಪ್ರಭುತ್ವದ ಸ್ಥಾಪನೆಯ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರು ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: ನಿರ್ಮಾಪಕ, ಮುಖ್ಯಮಂತ್ರಿ ಇದೀಗ ಮತ್ತೊಮ್ಮೆ ಸಂಸದ: ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಟೈಂ ​ಲೈನ್​

ಹೆಚ್ಚಿನ ನಗರ ಅಥವಾ ಗ್ರಾಮೀಣ ಮತದಾರರು ನೋಟಾ ಆಯ್ಕೆ ಮಾಡಿದ್ದಾರೆಯೇ ಮತ್ತು ಯಾವ ಕ್ಷೇತ್ರದಲ್ಲಿದ್ದಾರೆ ಎಂಬುದನ್ನು ಈಗ ಖಚಿತಪಡಿಸಿಕೊಳ್ಳಬೇಕಾಗಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ. ಜತೆಗೆ, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದೂ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್