AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮ್ಮೆಯಾದರೂ ನನ್ನನ್ನು ಜೈಲಿಗೆ ಹಾಕಬೇಕೆಂದು ಸಂಚು: ಲೋಕಾಯುಕ್ತ ಎಡಿಜಿಪಿ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಲೋಕಾಯುಕ್ತ ಅಧಿಕಾರಿಯ ವಿರುದ್ಧ ಮತ್ತಷ್ಟು ಆರೋಪಗಳನ್ನು ಮಾಡಿದ್ದಾರೆ. ಅದೇನೆಂಬ ವಿವರ ಇಲ್ಲಿದೆ.

ಒಮ್ಮೆಯಾದರೂ ನನ್ನನ್ನು ಜೈಲಿಗೆ ಹಾಕಬೇಕೆಂದು ಸಂಚು: ಲೋಕಾಯುಕ್ತ ಎಡಿಜಿಪಿ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ
ಹರೀಶ್ ಜಿ.ಆರ್​.
| Edited By: |

Updated on:Oct 01, 2024 | 12:45 PM

Share

ನವದೆಹಲಿ, ಅಕ್ಟೋಬರ್ 1: ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿದ್ದಾರೆ ಎಂದು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ಅಧಿಕಾರಿ (ಚಂದ್ರಶೇಖರ್) ಹೇಳಿದ ಮಾತನ್ನು ಗಮನಿಸಿದ್ದೇನೆ. ಒಂದು ದಿನವಾದ್ರೂ ನನ್ನ ಒಳಗೆ ಕಳುಹಿಸಬೇಕೆಂದು ಮಾತನಾಡಿದ್ದಾರೆ ಎಂದರು.

ಚಾರ್ಜ್​ಶೀಟ್​ನಲ್ಲಿ ನನ್ನ ಹೆಸರು ಸೇರಿಸಲು ರಾಜ್ಯಪಾಲರ ಮೊರೆ ಹೋಗಿದ್ದಾರೆ. ನಾನಾದರೋ ಜಾಮೀನು ಪಡೆದು ಹೊರಗಿದ್ದೇನೆ. ಯಾರೋ ಒಬ್ಬ ಅಧಿಕಾರಿ ‘ಕ್ರಿಮಿನಲ್’ ಎಂಬ ಪದ ಬಳಕೆ ಮಾಡಿದ್ದಾರೆ. ನಾನು ಜಾಮೀನು ಪಡೆದಿದ್ದು ತಪ್ಪು ಮಾಡಿದ್ದೇನೆ ಎಂದಲ್ಲ. ನನ್ನ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಅದಕ್ಕಾಗಿ ಪಡೆದಿದ್ದೇನೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

ನನ್ನನ್ನು ಯಾರೂ ಏನೂ ಮಾಡಲಾಗದು: ಹೆಚ್​ಡಿಕೆ

ರಾಜಕೀಯ ಆರೋಪಗಳ ಮೂಲಕ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ. ರಾಜಕೀಯ ಪ್ರೇರಿತ ಕೇಸ್​​​ನಲ್ಲಿ ನಿರಪರಾಧಿಗಳನ್ನು ಅಪರಾಧಿ ಮಾಡಲು ಸಾಧ್ಯವಿಲ್ಲ. ನನ್ನ ಅಧಿಕಾರ ದುರಪಯೋಗಪಡಿಸಿಕೊಂಡಿಲ್ಲ, ಅಧಿಕಾರಿಗಳನ್ನು ಬೆದರಿಸಿಲ್ಲ. ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್​​ಗೆ ಸಂಬಂಧಿಸಿದಂತೆ ಅಲ್ಲ. ರಾಜ್ಯಪಾಲರ ವಿಚಾರವಾಗಿ ಅಧಿಕಾರಿಯನ್ನು ನಾನು ಪ್ರಶ್ನೆ ಮಾಡಿದ್ದೇನೆ. ರಾಜ್ಯಪಾಲರ ಕಚೇರಿಗೆ ಪತ್ರ ಬರೆದು ಅವಮಾನ ಮಾಡಿದ್ದ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದೇನೆ. ನನ್ನ ಇತಿಮಿತಿಗಳು ಏನು ಅನ್ನುವುದು ನನಗೂ ಗೊತ್ತಿದೆ. ಅಧಿಕಾರಿಯ ಉದ್ಧಟತನವನ್ನು ಪ್ರಶ್ನೆ ಮಾಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು. ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು? ಅಕ್ರಮ ಹಣ ಸಂಪಾದನೆ ಮಾಡುವವರಿಗೆ ರಕ್ಷಣೆ ಕೊಡಿ ಎಂದು ನಿಮ್ಮನ್ನು ಐಪಿಎಸ್ ಆಫೀಸರ್ ಮಾಡಿದ್ದಾರಾ? ನಾನು ಬೇಲ್ ತಗೊಂಡೆ, ತನಿಖೆಗೆ ಮಾಡಬೇಡಿ ಎಂದು ಹೇಳಿಲ್ಲ. ನೀವು ಏನ್ ಮಾಡಿದ್ದೀರಿ? ನಿಮ್ಮ ವಿರುದ್ಧವೇ ಕೇಸ್ ಇದೆ, ಆರೋಪಿ ನಂಬರ್ 2. ಹೈಕೋರ್ಟ್​​​ನಲ್ಲಿ ಅಧಿಕಾರಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ. ನಾನು ಯಾರಿಗೂ ರಕ್ಷಣೆ ಕೊಡಲು ಇಲ್ಲ ಎಂದು ಕುಮಾರಸ್ವಾಮಿ ಗುಡುಗಿದರು.

ಇದನ್ನೂ ಓದಿ: ಚಂದ್ರಶೇಖರ್​ ಗೆಟ್​ ಲಾಸ್ಟ್​​ ಫ್ರಾಮ್​ ಕರ್ನಾಟಕ: ಎಡಿಜಿಪಿ ವಿರುದ್ಧ ಸಿಂಹ ಪ್ರತಾಪ

ಆಫೀಸ್ ನಂಬರ್ ಹಾಕದೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಧಿಕೃತವಾಗಿ ಲೆಟರ್ ಕಳುಹಿಸಿಲ್ಲ. ನಾಡಿನ ಜನತೆಗೆ ಮಿಸ್ ಲೀಡ್ ಮಾಡಲು ಕಳುಹಿಸಿದ್ದಾರೆ. ಹಂದಿ-ಪಂದಿ ಕತೆ ಹೇಳಿದ್ದಾರೆ. ಗೃಹ ಸಚಿವರು ಮೇಧಾವಿ, ಡಾಕ್ಟರ್. ಸಿದ್ದರಾಮಯ್ಯ ನೀವು ಆರೋಪಿ ಅಲ್ಲವೇ? ಅದೇ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಸಿಎಂ ಎಂದು ಕರೆದರೆ ಒಪ್ಪಿಕೊಳ್ಳುತ್ತೀರಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:27 pm, Tue, 1 October 24

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!