AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಪ್ಪೇಸ್ವಾಮಿ ಅಲ್ಲ, ಬಂಗಾರ ಸ್ವಾಮಿ! ಲೋಕಾಯುಕ್ತ ದಾಳಿ ವೇಳೆ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ

Karnataka Lokayukta Raid: ಬೆಳ್ಳಂಬೆಳಗ್ಗೆಯೇ ಭ್ರಷ್ಟರ ಬೇಟೆಗಿಳಿದಿದ್ದ ಲೋಕಾಯುಕ್ತ ಅಧಿಕಾರಿಗಳಿಗೆ ದೊಡ್ಡ ತಿಮಿಂಗಿಲಗಳೇ ಬಲೆಗೆ ಬಿದ್ದಿವೆ. ಬೆಂಗಳೂರಿನಲ್ಲಿ ಟೌನ್​​ ಮತ್ತು ಕಂಟ್ರಿ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ನಡೆಸಿದ ಲೋಕಾಯುಕ್ತಕ್ಕೆ, ಕೆಜಿಗಟ್ಟಲೇ ಚಿನ್ನ-ಬೆಳ್ಳಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ದೊರೆತಿದೆ. ವಿವರಗಳು ಇಲ್ಲಿವೆ.

ತಿಪ್ಪೇಸ್ವಾಮಿ ಅಲ್ಲ, ಬಂಗಾರ ಸ್ವಾಮಿ! ಲೋಕಾಯುಕ್ತ ದಾಳಿ ವೇಳೆ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ
ತಿಪ್ಪೇಸ್ವಾಮಿ ಮನೆಯಲ್ಲಿ ದೊರೆತ ಆಭರಣ, ಹಣ (ಒಳಚಿತ್ರದಲ್ಲಿ ತಿಪ್ಪೇಸ್ವಾಮಿ)
ರಾಚಪ್ಪಾಜಿ ನಾಯ್ಕ್
| Updated By: Ganapathi Sharma|

Updated on: Nov 21, 2024 | 2:10 PM

Share

ಬೆಂಗಳೂರು, ನವೆಂಬರ್ 21: ಭ್ರಷ್ಟ ಅಧಿಕಾರಿಗಳಿಗೆ ಗುರುವಾರ ಬೆಳಗ್ಗೆಯೇ ದೊಡ್ಡ​ ಶಾಕ್ ನೀಡಿದ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಇದರಿಂದಾಗಿ ಮುಂಜಾನೆಯ ಗಡದ್ದು ನಿದ್ದೆಯಲ್ಲಿದ್ದ ಭ್ರಷ್ಟ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಅಕ್ರಮ ಆಸ್ತಿ ಸಂಪಾದಿಸಿವರಿಗೆ ಲೋಕಾಯುಕ್ತ ಬಿಸಿ ಮುಟ್ಟಿದೆ. ದಾಳಿ ವೇಳೆ, ಅಪಾರ ಪ್ರಮಾಣದ ಚಿನ್ನಾಭರಣ ಕಂಡು ಲೋಕಾಯುಕ್ತ ಅಧಿಕಾರಿಗಳೇ ಬೆಚ್ಚಿಬೀಳುವಂತಾಗಿದೆ.

ಬೆಂಗಳೂರಿನಲ್ಲಿ ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ರೇಡ್ ವೇಳೆ ಕಂಡುಬಂದ ಅಪಾರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣ ನೋಡಿ ಅಧಿಕಾರಿಗಳೇ ಶಾಕ್​ ಆಗಿದ್ದಾರೆ. ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ ಅಧಿಕಾರಿಗಳಿಗೆ, ಬೆಚ್ಚಿಬೀಳುವಷ್ಟು ಸಂಪತ್ತು ದೊರೆತಿದೆ.

ತಿಪ್ಪೇಸ್ವಾಮಿ ಮನೆಯಲ್ಲಿ ವಜ್ರ, ಚಿನ್ನದ ರತ್ನ ಭಂಡಾರ ಪತ್ತೆ

Lokayukta found KGs of gold, silver and lakhs of rupees cash in Bengaluru Town Planning Director Tippeswamy residence

ದಾಳಿ ವೇಳೆ ತಿಪ್ಪೇಸ್ವಾಮಿ ಮನೆಯಲ್ಲಿ ಅಪಾರ ಮೌಲ್ಯದ ಚಿನ್ನಾಭರಣ ಕಂಡು ಲೋಕಾಯುಕ್ತ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. 28 ಕ್ಕೂ ಹೆಚ್ಚು ಜೊತೆ ಓಲೆ, 23 ಕ್ಕೂ ಹೆಚ್ಚು ಚಿನ್ನದ ಸರ, ಮುತ್ತಿನ ಹಾರ ಪತ್ತೆಯಾಗಿದೆ. ಇದಿಷ್ಟೇ ಅಲ್ಲ, ಕೋಟಿ ರೂಪಾಯಿ ಮೌಲ್ಯದ ಚಿನ್ನದ ನೆಕ್ಲೆಸ್​, ಚಿನ್ನದ ಉಂಗುರವೂ ಪತ್ತೆಯಾಗಿದೆ.

ಕಂತೆ ಕಂತೆ ನೋಟು, ದುಬಾರಿ ವಾಚು, ಕೆಜಿಗಟ್ಟಲೆ ಬೆಳ್ಳಿ

ಕೇವಲ ಬಂಗಾರ ಮಾತ್ರ ಅಲ್ಲದೆ, 500, 200 ರೂ. ಮುಖ ಬೆಲೆಯ 8 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. 8 ಕ್ಕೂ ಹೆಚ್ಚು ದುಬಾರಿ ಬೆಲೆಯ ಬ್ರಾಂಡೆಡ್​ ವಾಚ್​ಗಳು ಸಿಕ್ಕಿವೆ. ಇನ್ನು ಕೆಜಿಗಟ್ಟಲೆಯ ಬೆಳ್ಳಿ ಸಾಮಾಗ್ರಿಗಳು ಕೂಡ ಪತ್ತೆಯಾಗಿದೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಎಸ್​ಪಿ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯ ವೇಳೆ ಅಬಕಾರಿ ಇಲಾಖೆ ಎಸ್​ಪಿ ಮೋಹನ್ ಮನೆ ಮೇಲೆ ರೇಡ್ ಮಾಡಲಾಗಿದೆ. ಮಹತ್ವದ ದಾಖಲೆಗಳನ್ನ ಪರಿಶೀಲನೆ ಮಾಡಲಾಯಿತು.

ಮಂಗಳೂರಿನಲ್ಲಿ ಗಣಿ ಇಲಾಖೆ ಅಧಿಕಾರಿ ಮನೆ ಮೇಲೆ ರೇಡ್

ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಗಣಿ ಅಧಿಕಾರಿ ಕಚೇರಿ, ಮನೆ ಮೇಲೂ ದಾಳಿ ಮಾಡಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನ ವೆಲೆನ್ಸಿಯಾದ ಮನೆ, ಕಚೇರಿಯಲ್ಲಿ ದಾಖಲೆಗಳನ್ನ ಪರಿಶೀಲನೆ ಮಾಡಿದ್ದಾರೆ. ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದ ಕೃಷ್ಣವೇಣಿ, 2 ತಿಂಗಳ ಹಿಂದಷ್ಟೇ ಮಂಗಳೂರಿಗೆ ಬಂದಿದ್ದರು.

ಕೃಷ್ಣವೇಣಿಗೆ ಸಂಬಂಧಪಟ್ಟ ಮತ್ತಷ್ಟು ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿರುವ ಮನೆ, ಅಪಾರ್ಟ್​ಮೆಂಟ್​, ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಇನ್ನು ಯಲಹಂಕದಲ್ಲಿರುವ ಅಪಾರ್ಟ್​ಮೆಂಟ್​ನಲ್ಲೂ ಪರಿಶೀಲನೆ ಮಾಡಲಾಯಿತು.

ಮಂಡ್ಯದಲ್ಲಿ ಕಾವೇರಿ ನಿಗಮದ ಎಂಡಿ ಮನೆ ಮೇಲೆ ದಾಳಿ

ಮಂಡ್ಯ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್​ ನಿವಾಸಗಳ ಮೇಲೆ ದಾಳಿ ಮಾಡಲಾಗಿದೆ. ಮಳವಳ್ಳಿಯಲ್ಲಿರೋ ನಿವಾಸದಲ್ಲಿ ದಾಖಲೆಗಳನ್ನ ಪರಿಶೀಲನೆ ಮಾಡಲಾಗಿದೆ. ಇನ್ನು ಎಂಡಿ‌ ಮಹೇಶ್, ಪತ್ನಿಗೆ ಸೇರಿದ ಪೆಟ್ರೋಲ್ ಬಂಕ್​ ಮೇಲೂ ರೇಡ್​ ಮಾಡಲಾಯಿತು. ಆದಾಯಕ್ಕೂ ಮೀರಿ ಆಸ್ತಿಗಳಿಕೆ ದೂರು ಹಿನ್ನೆಲೆ ಮಹತ್ವದ ದಾಖಲೆಗಾಗಿ ಹುಡುಕಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ಕರ್ನಾಟಕದ 7 ಕಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ದೂರು ಬಂದ ಹಿನ್ನೆಲೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಬಿಸಿ ಮುಟ್ಟಿಸಿದೆ. ದಾಳಿ ವೇಳೆ ಅಪಾರ ಮೌಲ್ಯದ ಚಿನ್ನಾಭರಣ, ಆಸ್ತಿ ದಾಖಲೆ ಪತ್ತೆಯಾಗಿದೆ. ಅದರಲ್ಲೂ ಟೌನ್​ ಪ್ಲಾನಿಂಗ್​​ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ವಜ್ರ ವೈಡೂರ್ಯ ಕಂಡು ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!