Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅವ್ಯವಸ್ಥೆ ಅನಾವರಣ

ರೋಗಿಯೊಬ್ಬರು ಬಿದ್ದು ನರಳುತ್ತಿದ್ದರೂ ಯಾರು ಚಿಕಿತ್ಸೆ ನೀಡುತ್ತಿರಲಿಲ್ಲ. ರೋಗಿಗಳಿಗೆ ಚಿಕಿತ್ಸೆ ನೀಡದೆ ವೈದ್ಯರು ಸ್ಪಂದಿಸದ ಬಗ್ಗೆ ದೂರು ಬಂದಿದ್ದವು. ಈ ಬಗ್ಗೆ ಸಾಕಷ್ಟು ದೂರು ಬಂದಿದ್ದ ಹಿನ್ನೆಲೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್​ ಭೇಟಿ ನೀಡಿದ್ದೇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್​ ಪಾಟೀಲ್‌ ಹೇಳಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅವ್ಯವಸ್ಥೆ ಅನಾವರಣ
ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ, ಅವ್ಯವಸ್ಥೆ ಅನಾವರಣ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Jul 29, 2024 | 5:11 PM

ಬೆಂಗಳೂರು, ಜುಲೈ 29: ಸಾಕಷ್ಟು ದೂರುಗಳು ಬಂದಿದ್ದ ಹಿನ್ನೆಲೆ ನಗರದ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ಇಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ (Lokayukta Justice) ಬಿ.ಎಸ್.ಪಾಟೀಲ್‌ ಹಾಗೂ ಉಪ ಲೋಕಾಯುಕ್ತ ನ್ಯಾ.ಫಣೀಂದ್ರ ಮತ್ತು ನ್ಯಾ.ವೀರಪ್ಪ ಭೇಟಿ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಪ್ರತಿಯೊಂದು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅವ್ಯವಸ್ಥೆ ಅನಾವರಣವಾಗಿದೆ. ಜೊತೆಗೆ ರೋಗಿಗಳ ಸಮಸ್ಯೆಯನ್ನು ಆಲಿಸಿದ್ದಾರೆ.

ಸಾಕಷ್ಟು ದೂರು ಬಂದಿದ್ದ ಹಿನ್ನೆಲೆ ದಿಢೀರ್​ ಭೇಟಿ ಎಂದ ಬಿಎಸ್​ ಪಾಟೀಲ್‌

ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್​ ಪಾಟೀಲ್‌, ರೋಗಿಯೊಬ್ಬರು ಬಿದ್ದು ನರಳುತ್ತಿದ್ದರೂ ಯಾರು ಚಿಕಿತ್ಸೆ ನೀಡುತ್ತಿರಲಿಲ್ಲ. ರೋಗಿಗಳಿಗೆ ಚಿಕಿತ್ಸೆ ನೀಡದೆ ವೈದ್ಯರು ಸ್ಪಂದಿಸದ ಬಗ್ಗೆ ದೂರು ಬಂದಿದ್ದವು. ಈ ಬಗ್ಗೆ ಸಾಕಷ್ಟು ದೂರು ಬಂದಿದ್ದ ಹಿನ್ನೆಲೆ ದಿಢೀರ್​ ಭೇಟಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆ ನೆಫ್ರೋಯುರಾಲಜಿ ಅವ್ಯವಸ್ಥೆ: ಆಸ್ಪತ್ರೆಗೆ ದಾಖಲಾದವರು ಬದುಕಿಬರುವುದೇ ಅನುಮಾನ!

ಮೆಡಿಸನ್ ಕೊಟ್ಟಿರುವ ಬಗ್ಗೆ ರಿಜಿಸ್ಟರ್​​ನಲ್ಲಿ ಎಂಟ್ರಿ ಮಾಡುತ್ತಿರಲಿಲ್ಲ. ಮೂವರನ್ನು ಡಾಟಾ ಎಂಟ್ರಿ ಆಪರೇಟರ್​ ನೇಮಕ ಮಾಡಿಕೊಂಡಿದ್ದಾರೆ. ನಾವು ಭೇಟಿ ನೀಡಿದ ವೇಳೆ ಎಮರ್ಜೆನ್ಸಿ ಮೆಡಿಷನ್ ಇಲ್ಲಾ ಅಂತಿದ್ದಾರೆ. ಕಾಂಟ್ರ್ಯಾಕ್ಟರ್ ಬಿಲ್ ಪೆಡಿಂಗ್ ಇರೋದ್ರಿಂದ ಸಪ್ಲೈ ಮಾಡಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಓಪಿಡಿಯಲ್ಲಿ ಎಲ್ಲಾ ಡಾಕ್ಟರ್ ಇರಲಿಲ್ಲ, ಪಿಜಿ ಡಾಕ್ಟರ್ ಮಾತ್ರ ಇದ್ದಾರೆ. ಸೂಪರಿಂಡೆಂಟ್ ಕರೆಸಿದ್ವಿ, ಆಸ್ಪತ್ರೆಯ ಕೆಲ ವೈದ್ಯಾಧಿಕಾರಿಗಳು ಬಂದ್ದರು. ಇನ್ನೂ ಕೆಲವರು ರಜೆಯಲ್ಲಿದ್ದಾರೆ ಅಂತಾ ಸೂಪರಿಂಡೆಂಟ್ ಹೇಳಿದರು. ರೋಗಿಗಳಿಗೆ ಆಸ್ಪತ್ರೆಯಲ್ಲಿ ಸರಿಯಾದ ಮಾರ್ಗದರ್ಶನ ಸಿಗಬೇಕು ಎಂದು ಹೇಳಿದ್ದಾರೆ.

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮನೆ, ಪಾರ್ಮ್ ಹೌಸ್ ಮೇಲೆ ಲೋಕಾ ದಾಳಿ

ಬೆಳಗಾವಿ: ನಗರದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರಗೌಡ ಮನೆ ಮತ್ತು ಪಾರ್ಮ್ ಹೌಸ್ ಮೇಲೆ ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಶೇಖರಗೌಡ, ಮೂಲಕ ಕೊಪ್ಪಳ ಜಿಲ್ಲೆಯ ಹಿರೆಸಿಂದೋಗಿ ಗ್ರಾಮದ ನಿವಾಸಿ. ಗ್ರಾಮದಲ್ಲಿ ಮನೆ ಸೇರಿದಂತೆ ಪಾರ್ಮ್ ಹೌಸ್ ಇದ್ದು, ಲೋಕಾಯುಕ್ತ ಅಧಿಕಾರಿಗಳ ಎರಡು ತಂಡ ಎರಡು ಕಡೆ ಪರಿಶೀಲನೆ ನಡೆಸಿದ್ದರು. ಹದಿನೆಂಟು ಎಕರೆ ಪಾರ್ಮ್ ಹೌಸ್ ಇದ್ದು ಅಲ್ಲಿ ಕೂಡ ಪರಿಶೀಲನೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ